AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಿದ್ಯಾರ್ಥಿಗಳು 150 ಅಡಿ ಎತ್ತರದ ವಾಟರ್ ಟ್ಯಾಂಕ್ ಹತ್ತುತ್ತಾರೆ! ಯಾಕೆ? ಎಲ್ಲಿ ಗೊತ್ತಾ?

ಒಡಿಶಾ:ಕೋವಿಡ್ -19 ನಿಂದಾಗಿ ದೇಶದಲ್ಲಿ ಏಕಾಏಕಿ ಶಾಲೆಗಳು ಮತ್ತು ಕಾಲೇಜುಗಳು ಆನ್‌ಲೈನ್ ತರಗತಿಗಳ ಮೂಲಕ ತಮ್ಮ ಪಠ್ಯಕ್ರಮವನ್ನು ಮುಂದುವರಿಸುವ ಅನಿವಾರ್ಯತೆಗೆ ಸಿಲುಕಿವೆ. ದೂರದ ಪ್ರದೇಶಗಳಲ್ಲಿ ಇಂಟರ್ನೆಟ್ ಪಡೆಯಲು ಸಾಧ್ಯವಾಗದ ಕೆಲವು ವಿದ್ಯಾರ್ಥಿಗಳಿಗೆ ಇದು ನಿಜವಾಗಿಯೂ ಸಮಸ್ಯೆಯಾಗಿದೆ. ಜೊತೆಗೆ ವಿದ್ಯಾರ್ಥಿಗಳು ಇರುವ ಪ್ರದೇಶದಲ್ಲಿ ಹೆಚ್ಚಿನ ವೇಗದ ಇಂಟರ್ನೆಟ್ ಸೇವೆ ಸಿಗುತಿಲ್ಲ. ಒಡಿಶಾದ ಸಂಬಲ್ಪುರದಲ್ಲಿ ಇದೇ ರೀತಿಯ ಪರಿಸ್ಥಿತಿ ಎದುರಾಗಿದ್ದು, ದೇಬಗರ್ ಗ್ರಾಮದ ಸ್ವಾಮಿ ಶಿವಾನಂದ ಸಂಸ್ಕೃತ ಕಾಲೇಜು ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ವೇಗದ ಇಂಟರ್ನೆಟ್ ಸೇವೆ ಸಿಗುತಿಲ್ಲ. […]

ಈ ವಿದ್ಯಾರ್ಥಿಗಳು 150 ಅಡಿ ಎತ್ತರದ ವಾಟರ್ ಟ್ಯಾಂಕ್ ಹತ್ತುತ್ತಾರೆ! ಯಾಕೆ? ಎಲ್ಲಿ ಗೊತ್ತಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jul 31, 2020 | 7:40 PM

Share

ಒಡಿಶಾ:ಕೋವಿಡ್ -19 ನಿಂದಾಗಿ ದೇಶದಲ್ಲಿ ಏಕಾಏಕಿ ಶಾಲೆಗಳು ಮತ್ತು ಕಾಲೇಜುಗಳು ಆನ್‌ಲೈನ್ ತರಗತಿಗಳ ಮೂಲಕ ತಮ್ಮ ಪಠ್ಯಕ್ರಮವನ್ನು ಮುಂದುವರಿಸುವ ಅನಿವಾರ್ಯತೆಗೆ ಸಿಲುಕಿವೆ. ದೂರದ ಪ್ರದೇಶಗಳಲ್ಲಿ ಇಂಟರ್ನೆಟ್ ಪಡೆಯಲು ಸಾಧ್ಯವಾಗದ ಕೆಲವು ವಿದ್ಯಾರ್ಥಿಗಳಿಗೆ ಇದು ನಿಜವಾಗಿಯೂ ಸಮಸ್ಯೆಯಾಗಿದೆ. ಜೊತೆಗೆ ವಿದ್ಯಾರ್ಥಿಗಳು ಇರುವ ಪ್ರದೇಶದಲ್ಲಿ ಹೆಚ್ಚಿನ ವೇಗದ ಇಂಟರ್ನೆಟ್ ಸೇವೆ ಸಿಗುತಿಲ್ಲ.

ಒಡಿಶಾದ ಸಂಬಲ್ಪುರದಲ್ಲಿ ಇದೇ ರೀತಿಯ ಪರಿಸ್ಥಿತಿ ಎದುರಾಗಿದ್ದು, ದೇಬಗರ್ ಗ್ರಾಮದ ಸ್ವಾಮಿ ಶಿವಾನಂದ ಸಂಸ್ಕೃತ ಕಾಲೇಜು ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ವೇಗದ ಇಂಟರ್ನೆಟ್ ಸೇವೆ ಸಿಗುತಿಲ್ಲ. ಜೊತೆಗೆ ಮೊಬೈಲ್ ನೆಟ್‌ವರ್ಕ್ ಮೂಲಕ ವಿದ್ಯಾರ್ಥಿಗಳು ತಮ್ಮ ತರಗತಿಗಳಿಗೆ ಹಾಜರಾಗಲು 150 ಅಡಿಯ ವಾಟರ್ ಟ್ಯಾಂಕ್ ಹತ್ತಬೇಕಾದ ಪರಿಸ್ಥಿತಿ ಎದುರಾಗಿದೆ.

ಆನ್ ಲೈನ್ ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿಗಳು ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಿದ್ದು, ವಾಟರ್ ಟ್ಯಾಂಕ್ ಹತ್ತುವುದರ ಜೊತೆಗೆ ಅವರು ಮೊಬೈಲ್ ಫೋನ್, ನೋಟ್ಬುಕ್, ಇಯರ್ ಫೋನ್ ಗಳನ್ನ ಜೊತೆಯಲ್ಲಿ ತೆಗೆದುಕೊಂಡು ಹೋಗುವುದು ತೀವ್ರ ತ್ರಾಸದಾಯಕವಾಗಿದೆ. ಇನ್ನು ಕೆಲ ವಿದ್ಯಾರ್ಥಿಗಳ ಬಳಿ ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ಸ್ಮಾರ್ಟ್‌ಫೋನ್‌ ವ್ಯವಸ್ಥೆ ಸಹ ಇಲ್ಲ.

ಜೊತೆಗೆ ವಿದ್ಯಾರ್ಥಿಗಳು ಟ್ಯಾಂಕ್ ಮೇಲೆ ಹತ್ತಿದಾಗ ತಲೆನೋವು ಮತ್ತು ಇತರ ಆರೋಗ್ಯ ಸಮಸ್ಯೆಗಳನ್ನು ಸಹ ಎದುರಿಸುತ್ತಿದ್ದಾರೆ. ಶೈಕ್ಷಣಿಕ ವೀಡಿಯೊಗಳನ್ನು ಆನ್‌ಲೈನ್ ಅಥವಾ ಲೈವ್ ತರಗತಿಗಳಿಗೆ ಸ್ಟ್ರೀಮ್ ಮಾಡಲು 4ಜಿ ಇಂಟರ್‌ನೆಟ್‌ ನ ಅವಶ್ಯಕತೆ ಆದರೆ ನೆಲದ ಮಟ್ಟದಲ್ಲಿ ಕೇವಲ 2ಜಿ ಇಂಟರ್‌ನೆಟ್‌ ಸೇವೆ ಮಾತ್ರ ಲಭ್ಯವಿದೆ. ಹೀಗಾಗಿ ನಾವು 150 ಅಡಿ ಎತ್ತರದ ನೀರಿನ ಟ್ಯಾಂಕ್ ಅನ್ನು ಹತ್ತಲೇ ಬೇಕಾದ ಪರಿಸ್ಥಿತಿ ಎದುರಾಗಿದೆ ಎನ್ನುತ್ತಾರೆ ವಿದ್ಯಾರ್ಥಿಗಳು.

ನಮ್ಮ ಹಳ್ಳಿಯಲ್ಲಿ 3ಜಿ ಅಥವಾ 4ಜಿ ಇಂಟರ್‌ನೆಟ್‌ ಸಂಪರ್ಕಕ್ಕಾಗಿ ನಾವು ಮುಖ್ಯಮಂತ್ರಿ ಮತ್ತು ಸಂಗ್ರಾಹಕರಿಗೆ ಹಲವಾರು ಪತ್ರಗಳನ್ನು ಬರೆದಿದ್ದೇವೆ, ಆದರೆ ನಮಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ, ಆದ್ದರಿಂದ ಸರಿಯಾದ ನೆಟ್‌ವರ್ಕ್ ಪಡೆಯಲು ನಾವು ವಾಟರ್ ಟ್ಯಾಂಕ್‌ಗೆ ಹತ್ತಬೇಕಾಗಿದೆ ಎಂದು ವಿದ್ಯಾರ್ಥಿಗಳು ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು