AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Students Beat Teacher: ಕಡಿಮೆ ಅಂಕ ನೀಡಿದ್ದಕ್ಕೆ ಗಣಿತ ಶಿಕ್ಷಕನಿಗೆ ಥಳಿಸಿದ ವಿದ್ಯಾರ್ಥಿಗಳು

ಜಾರ್ಖಂಡ್‌ನ ದುಮ್ಕಾ ಜಿಲ್ಲೆಯ ವಸತಿ ಶಾಲೆಯ ವಿದ್ಯಾರ್ಥಿಗಳು ಗಣಿತ ಶಿಕ್ಷಕ ಮತ್ತು ಗುಮಾಸ್ತರನ್ನು ಮರಕ್ಕೆ ಕಟ್ಟಿ ಥಳಿಸಿದ್ದಾರೆ.

Students Beat Teacher: ಕಡಿಮೆ ಅಂಕ ನೀಡಿದ್ದಕ್ಕೆ ಗಣಿತ ಶಿಕ್ಷಕನಿಗೆ ಥಳಿಸಿದ ವಿದ್ಯಾರ್ಥಿಗಳು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 31, 2022 | 3:50 PM

Share

ದುಮ್ಕಾ: ಜಾರ್ಖಂಡ್‌ನ ದುಮ್ಕಾ ಜಿಲ್ಲೆಯ ವಸತಿ ಶಾಲೆಯ ಗಣಿತ ಶಿಕ್ಷಕ ಮತ್ತು ಗುಮಾಸ್ತರನ್ನು 9ನೇ ತರಗತಿಯ ಪ್ರಾಯೋಗಿಕ ಪರೀಕ್ಷೆಯಲ್ಲಿ ಕಳಪೆ ಅಂಕಗಳನ್ನು ನೀಡಿದ್ದಕ್ಕಾಗಿ ವಿದ್ಯಾರ್ಥಿಗಳು ಮರಕ್ಕೆ ಕಟ್ಟಿ ಥಳಿಸಿದ್ದಾರೆ ಎಂದು ಪೊಲೀಸರು ಮಂಗಳವಾರ (ಆಗಸ್ಟ್ 30) ತಿಳಿಸಿದ್ದಾರೆ. ಜಿಲ್ಲೆಯ ಗೋಪಿಕಂದರ್ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕಾರಿ ಪರಿಶಿಷ್ಟ ಪಂಗಡ ವಸತಿ ಶಾಲೆಯಲ್ಲಿ ಸೋಮವಾರ (ಆಗಸ್ಟ್ 29) ಈ ಘಟನೆ ನಡೆದಿದೆ.

ಜಾರ್ಖಂಡ್ ಅಕಾಡೆಮಿಕ್ ಕೌನ್ಸಿಲ್ (ಜೆಎಸಿ) ಶನಿವಾರದಂದು ಪ್ರಕಟಿಸಿದ 9ನೇ ತರಗತಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಸಮನಾಗಿರುವ ಗ್ರೇಡ್ ಡಿಡಿ (ಡಬಲ್ ಡಿ) ಪಡೆದಿರುವ 32 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ಫಲಿತಾಂಶ ಪ್ರಕಟಿಸಿದ್ದಾರೆ ಎಂದು ಪೊಳಿಸರು ಹೇಳಿದ್ದಾರೆ.

ಘಟನೆಯ ಬಗ್ಗೆ ಶಾಲಾ ಆಡಳಿತ ಮಂಡಳಿ ಯಾವುದೇ ಲಿಖಿತ ದೂರನ್ನು ನೀಡದ ಕಾರಣ ಪ್ರಕರಣದಲ್ಲಿ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಘಟನೆಯ ಪರಿಶೀಲನೆಯ ನಂತರ, ದೂರು ನೀಡಲು ಶಾಲಾ ಆಡಳಿತ ಮಂಡಳಿಗೆ ಹೇಳಲಾಗಿದೆ. ಆದರೆ ಅದಕ್ಕೆ ಅವರು ನಿರಾಕರಿಸಿದ್ದಾರೆ. ವಿದ್ಯಾರ್ಥಿಗಳ ಜೀವನ ಹಾಳಲಾಬಹುದು ಎಂದು ದೂರು ನೀಡದೆ ಇರಬಹುದು ಎಂದು ಗೋಪಿಕಂದರ್ ಪೊಲೀಸ್ ಠಾಣೆ ಪ್ರಭಾರಿ ನಿತ್ಯಾನಂದ ಭೋಕ್ತಾ ಪಿಟಿಐಗೆ ತಿಳಿಸಿದರು.

ಶಿಕ್ಷಕನನ್ನು ಸುಮನ್ ಕುಮಾರ್ ಎಂದು ಗುರುತಿಸಲಾಗಿದ್ದು , ಗುಮಾಸ್ತ ಸೋನೆರಾಮ್ ಚೌರೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಪೊಲೀಸರಿಗೆ ಲಿಖಿತ ದೂರನ್ನೂ ನೀಡಿಲ್ಲ ಎಂದು ಭೋಕ್ತಾ ಹೇಳಿದರು. ಭೋಕ್ತಾ ಅವರೊಂದಿಗೆ ತನಿಖೆಗಾಗಿ ಶಾಲೆಗೆ ತೆರಳಿದ ಗೋಪಿಕಂದರ್ ಬ್ಲಾಕ್ ಡೆವಲಪ್‌ಮೆಂಟ್ ಅಧಿಕಾರಿ (ಬಿಡಿಒ) ಅನಂತ್ ಝಾ ಮಾತನಾಡಿ, ವಸತಿ ಶಾಲೆಯಲ್ಲಿ 200 ವಿದ್ಯಾರ್ಥಿಗಳಿದ್ದು, ಈ ಕೃತ್ಯದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ ಎಂದು ಹೇಳಲಾಗಿದೆ.

ಪ್ರಾಯೋಗಿಕ ಪರೀಕ್ಷೆಯಲ್ಲಿ ಶಿಕ್ಷಕರು ಕಡಿಮೆ ಅಂಕಗಳನ್ನು ನೀಡಿದ್ದಾರೆ, ಅದಕ್ಕಾಗಿಯೇ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಜೆಎಸಿಯ ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಅಂಕಗಳನ್ನು ಅಪ್‌ಲೋಡ್ ಮಾಡಲು ಕ್ಲರ್ಕ್ ಕಾರಣ ಎಂದು ಆರೋಪಿಸಲಾಗಿದೆ.

ಆದರೆ, ಶಾಲಾ ಆಡಳಿತ ಮಂಡಳಿಯು ಪ್ರಾಯೋಗಿಕ ಪರೀಕ್ಷೆಗಳ ಅಂಕಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿದ ದಿನಾಂಕವನ್ನು ತೋರಿಸಲು ಸಾಧ್ಯವಾಗಿರಲಿಲ್ಲ. ವಿದ್ಯಾರ್ಥಿಗಳು ಥಿಯರಿ ಪೇಪರ್‌ನಲ್ಲಿ ಅಥವಾ ಪ್ರಾಯೋಗಿಕವಾಗಿ ಅನುತ್ತೀರ್ಣರಾಗಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಶಿಕ್ಷಕರು ಈ ಹಿಂದೆ ಶಾಲೆಯ ಮುಖ್ಯೋಪಾಧ್ಯಾಯರಾಗಿದ್ದರು ಆದರೆ ನಂತರ ಕಾರಣ ತಿಳಿಯದ ಕಾರಣದಿಂದ ಅವರನ್ನು ತೆಗೆದುಹಾಕಲಾಯಿತು. ಇದು ಶಿಕ್ಷಕರ ನಡುವಿನ ಪೈಪೋಟಿಯ ಪ್ರಕರಣವಾಗಿರಬಹುದು. ಶಾಲೆಯ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು, ತರಗತಿ -9 ಮತ್ತು 10 ನೇ ತರಗತಿಯ ತರಗತಿಗಳು ಎರಡು ದಿನಗಳ ಕಾಲ ಅಮಾನತುಗೊಳಿಸಲಾಗಿದೆ ಮತ್ತು ವಿದ್ಯಾರ್ಥಿಗಳನ್ನು ಅವರ ಮನೆಗೆ ಕಳುಹಿಸಲಾಗಿದೆ, ”ಎಂದು ಅವರು ಹೇಳಿದರು.

Published On - 3:49 pm, Wed, 31 August 22

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ