AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂಟ್ಯೂಬ್​ ನೋಡಿ ಬಾಂಬ್ ತಯಾರಿಸಿ, ಶಿಕ್ಷಕಿಯ ಕುರ್ಚಿಯ ಕೆಳಗಿಟ್ಟು ಸಿಡಿಸಿದ ವಿದ್ಯಾರ್ಥಿ

ತಂತ್ರಜ್ಞಾನ ತೀರಾ ಮುಂದುವರೆದಿರುವುದರಿಂದ ಅನುಕೂಲ ಎಷ್ಟಿದೆಯೇ ಅನನುಕೂಲಗಳು ಕೂಡ ಅಷ್ಟೇ ಇವೆ. ವಿದ್ಯಾರ್ಥಿಯೊಬ್ಬ ಯೂಟ್ಯೂಬ್ ನೋಡಿ ಬಾಂಬ್ ತಯಾರಿಸಿದ್ದಷ್ಟೇ ಅಲ್ಲದೆ ಅದನ್ನು ಶಿಕ್ಷಕಿಯ ಕುರ್ಚಿಯಡಿಯಿಟ್ಟು ಸಿಡಿಸಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ.

ಯೂಟ್ಯೂಬ್​ ನೋಡಿ ಬಾಂಬ್ ತಯಾರಿಸಿ, ಶಿಕ್ಷಕಿಯ ಕುರ್ಚಿಯ ಕೆಳಗಿಟ್ಟು ಸಿಡಿಸಿದ ವಿದ್ಯಾರ್ಥಿ
ಶಿಕ್ಷಕಿ
ನಯನಾ ರಾಜೀವ್
|

Updated on:Nov 17, 2024 | 9:04 AM

Share

ತಂತ್ರಜ್ಞಾನ ತೀರಾ ಮುಂದುವರೆದಿರುವುದರಿಂದ ಅನುಕೂಲ ಎಷ್ಟಿದೆಯೇ ಅನನುಕೂಲಗಳು ಕೂಡ ಅಷ್ಟೇ ಇವೆ. ವಿದ್ಯಾರ್ಥಿಯೊಬ್ಬ  ಯೂಟ್ಯೂಬ್ ನೋಡಿ ಬಾಂಬ್ ತಯಾರಿಸಿದ್ದಷ್ಟೇ ಅಲ್ಲದೆ ಸ್ನೇಹಿತರ ಜತೆ ಸೇರಿ ಅದನ್ನು ಶಿಕ್ಷಕಿಯ ಕುರ್ಚಿಯಡಿಯಿಟ್ಟು ಸಿಡಿಸಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ.

ಹರ್ಯಾಣದ ಭಿವಾನಿ ಜಿಲ್ಲೆಯಲ್ಲಿ 13 ವಿದ್ಯಾರ್ಥಿಗಳನ್ನು ಒಂದು ವಾರಗಳವರೆಗೆ ಅಮನಾತುಗೊಳಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ವಿಜ್ಞಾನ ಶಿಕ್ಷಕರ ಕುರ್ಚಿಯ ಕೆಳಗೆ ಪಟಾಕಿಯಂತಹ ಬಾಂಬ್ ಅನ್ನು ಇರಿಸಿದ್ದರು. ಯಾವುದೋ ವಿಚಾರಕ್ಕಾಗಿ ವಿದ್ಯಾರ್ಥಿಗೆ ಶಿಕ್ಷಕರು ಬೈದಿದ್ದನ್ನೇ ಮನಸ್ಸಿನಲ್ಲಿಟ್ಟುಕೊಂಡು ಈ ಕೃತ್ಯವೆಸಗಿದ್ದಾನೆ.

ಕುರ್ಚಿಯ ಕೆಳಗೆ ಬಾಂಬ್ ಇರಿಸಿ ರಿಮೋಟ್ ಮೂಲಕ ಅದನ್ನು ಸಿಡಿಸಿದ್ದಾರೆ. ಆ ಸ್ಫೋಟವು ಕುರ್ಚಿಯಡಿ ದೊಡ್ಡ ರಂಧ್ರವನ್ನು ಸೃಷ್ಟಿಸಿತ್ತು. ಅದೃಷ್ಟವಶಾತ್ ಶಿಕ್ಷಕರಿಗೆ ಯಾವುದೇ ರೀತಿಯ ಗಾಯಗಳಾಗಿಲ್ಲ. ಓರ್ವ ಕುರ್ಚಿಯಡಿ ಬಾಂಬ್ ಇಟ್ಟಿದ್ದರೆ ಇನ್ನೊಬ್ಬ ರಿಮೋಟ್​ನಿಂದ ಬಟನ್ ಒತ್ತಿದ್ದ, ಘಟನೆ ನಂತರ ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಆಗಮಿಸಿ ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ.

ಮತ್ತಷ್ಟು ಓದಿ: ಬೇಗ ಬೇಗ ಕಿಟಕಿ ಹತ್ರ ಬನ್ನಿ, ಇಲ್ಲಾಂದ್ರೆ ರೈಲಿನಲ್ಲಿ ಸೀಟ್ ಸಿಗಲ್ಲ, ವಿಡಿಯೋ ವೈರಲ್

ಯೂಟ್ಯೂಬ್​ನಿಂದ ಸ್ಫೋಟಕಗಳನ್ನು ತಯಾರಿಸುವುದನ್ನು ವಿದ್ಯಾರ್ಥಿಗಳು ಕಲಿತಿದ್ದಾರೆ. ಮಕ್ಕಳನ್ನು ಶಾಲೆಯಿಂದ ಹೊರ ಹಾಕುವ ಚಿಂತನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ಪಾಲಕರು ಕ್ಷಮೆ ಯಾಚಿಸಿದ್ದು, ವಿದ್ಯಾರ್ಥಿಗಳು ಮುಂದೆ ಇಂತಹ ಕೆಲಸ ಮಾಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಎಲ್ಲಾ ವಿದ್ಯಾರ್ಥಿಗಳನ್ನು ಒಂದು ವಾರ ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ಶಿಕ್ಷಣಾಧಿಕಾರಿ (ಡಿಇಒ) ನರೇಶ್ ಮೆಹ್ತಾ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:04 am, Sun, 17 November 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ