AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಇಸ್ರೇಲ್​​​ ರಾಯಭಾರ ಕಚೇರಿ ಮುಂದೆ ಪ್ಯಾಲೆಸ್ತೀನ್ ಪರ ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳು

ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಸದಸ್ಯರು ಸೋಮವಾರ ದೆಹಲಿಯ ಇಸ್ರೇಲಿ ರಾಯಭಾರ ಕಚೇರಿ ಬಳಿ ಪ್ಯಾಲೆಸ್ತೀನ್ ಪರ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನಾಕಾರರನ್ನು ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ದೆಹಲಿಯ ಇಸ್ರೇಲ್​​​ ರಾಯಭಾರ ಕಚೇರಿ ಮುಂದೆ ಪ್ಯಾಲೆಸ್ತೀನ್ ಪರ ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳು
ದೆಹಲಿಯ ಇಸ್ರೇಲಿ ರಾಯಭಾರ ಕಚೇರಿ ಬಳಿ ಪ್ಯಾಲೆಸ್ತೀನ್ ಪರ ಪ್ರತಿಭಟನೆ
ಅಕ್ಷಯ್​ ಪಲ್ಲಮಜಲು​​
|

Updated on:Oct 23, 2023 | 5:13 PM

Share

ಒಂದು ಕಡೆ ಇಸ್ರೇಲ್ (Israel)​​ ಮತ್ತು ಹಮಾಸ್ (Hamas)​​ ಉಗ್ರರ ನಡುವೆ ನಡೆಯುತ್ತಿರುವ ಘರ್ಷಣೆ. ಇನ್ನೊಂದು ಕಡೆ ಪ್ಯಾಲೆಸ್ತೀನ್ ಪರ ಪ್ರತಿಭಟನೆ. ಹಮಾಸ್​​​ ಉಗ್ರರ ಪೈಶಾಚಿಕ ಕೃತ್ಯದ ಬಗ್ಗೆ ಯಾರು ಮಾತನಾಡುತ್ತಿಲ್ಲ, ಇಲ್ಲಿ ಇಸ್ರೇಲ್​​ ಮತ್ತು ಹಮಾಸ್​​ ನಡುವೆ ನಡೆಯುತ್ತಿರುವ ಸಂಘರ್ಷಣೆಯೇ ಹೊರತು ಇಸ್ರೇಲ್ ಮತ್ತು ​​ ಪ್ಯಾಲೆಸ್ತೀನ್​​ದಲ್ಲ ಎಂದು ಇಸ್ರೇಲ್​​ ಸೇರಿದಂತೆ ಅನೇಕ ದೇಶಗಳು ಸ್ಪಷ್ಟಪಡಿಸಿದೆ. ಇನ್ನು ಇಸ್ರೇಲ್​​ ಮೇಲೆ ಪ್ಯಾಲೆಸ್ತೀನ್ ಪರೋಕ್ಷವಾಗಿ ಹಮಾಸ್​​ಗೆ ಬೆಂಬಲ ನೀಡಿದೆ ಮತ್ತು ನೇರವಾಗಿ ದಾಳಿ ಮಾಡಿದ್ದು, ಇದಕ್ಕೆ ಇಸ್ರೇಲ್​​ ಕೂಡ ಉತ್ತರ ನೀಡಿದೆ. ಅದರೂ ಅನೇಕರು ಇಸ್ರೇಲ್​​ ವಿರುದ್ಧ ಮತ್ತು ಪ್ಯಾಲೆಸ್ತೀನ್ ಪರ ಪ್ರತಿಭಟನೆ (pro-Palestine) ಮಾಡುತ್ತಿದ್ದಾರೆ. ಇದೀಗ ಭಾರತದ ಅನೇಕ ಕಡೆ ಇಂತಹ ಪ್ರತಿಭಟನೆಗಳು ನಡೆಯುತ್ತಿದೆ. ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಸದಸ್ಯರು ಇಂದು (ಅ.23) ದೆಹಲಿಯ ಇಸ್ರೇಲಿ ರಾಯಭಾರ ಕಚೇರಿ (Israel embassy Delhi protest) ಬಳಿ ಪ್ಯಾಲೆಸ್ತೀನ್ ಪರ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನಾಕಾರರನ್ನು ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಒಂದು ವಿಡಿಯೋವನ್ನು ಎಎನ್ಐ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಪ್ರತಿಭಟನಾನಿರತರನ್ನು ಪೊಲೀಸರು ಎಳೆದುಕೊಂಡು ಹೋಗುವುದನ್ನು ಕಾಣಬಹುದು. ಪ್ರತಿಭಟನಾಕಾರರು ಪೋಸ್ಟರ್​​ನ್ನು ಹಿಡಿದುಕೊಂಡು ಇಸ್ರೇಲ್​​ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಇಸ್ರೇಲ್​​ ಮತ್ತು ಹಮಾಸ್​​​ ಉಗ್ರರ ನಡುವಿನ ಯುದ್ಧ 16ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿಂದೆ ಪ್ಯಾಲೆಸ್ತೀನ್ ಪರ ಪ್ರತಿಭಟನೆ ಬಿಹಾರ ಹಾಗೂ ಕೋಲ್ಕತ್ತಾದಲ್ಲಿ ನಡೆದಿತ್ತು.

ಅಕ್ಟೋಬರ್​​​ 13ರಂದು ಬಿಹಾರದಲ್ಲಿ ಪ್ಯಾಲೆಸ್ತೀನ್ ಪರ ಮೆರವಣಿಗೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಪ್ಯಾಲೆಸ್ತೀನ್ ಪರ ಘೋಷಣೆ ಮಾಡಿದ್ದಾರೆ. ಜತೆಗೆ ಇಸ್ರೇಲ್​​​ ಧ್ವಜಕ್ಕೆ ಬೆಂಕಿ ಹಚ್ಚಿದ್ದಾರೆ. ಅಕ್ಟೋಬರ್​ 12ರಂದು ಕೋಲ್ಕತ್ತಾದಲ್ಲಿ ಪ್ಯಾಲೆಸ್ತೀನ್ ಪರ ಅಲ್ಪಸಂಖ್ಯಾತ ಯುವ ಒಕ್ಕೂಟವು ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಕಮ್ರುಜ್ಜಮಾನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ಗಾಜಾದ ವೆಸ್ಟ್​ ಬ್ಯಾಂಕ್​ನ ಅಲ್​-ಅನ್ಸಾರ್​ ಮಸೀದಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ

ಹಮಾಸ್​​ ಅಕ್ಟೋಬರ್​​ 7ರಂದು ಬೆಳಿಗ್ಗೆ ಇಸ್ರೇಲ್​​ ಮೇಲೆ ರಾಕೆಟ್​​​ ದಾಳಿ ಮಾಡಿತ್ತು. ಇದಕ್ಕೆ ಉತ್ತರವಾಗಿ ಇಸ್ರೇಲ್​​​ ಗಾಜಾ ಪಟ್ಟಿ ಸೇರಿಸಿದಂತೆ ಹಮಾಸ್​​​ ತಾಣಗಳ ಮೇಲೆ ದಾಳಿ ಮಾಡಿದೆ. ಇದರ ಜತೆಗೆ ವೈಮಾನಿಕ ದಾಳಿಯನ್ನು ಕೂಡ ಮಾಡಿದೆ. ಹಮಾಸ್​​ ದಾಳಿಯಿಂದ 1,400 ಇಸ್ರೇಲಿಗರು ಹಾಗೂ ಇಸ್ರೇಲ್​​ ನಡೆಸಿದ ದಾಳಿಯಲ್ಲಿ 4,700 ಪ್ಯಾಲೆಸ್ಟೀನಿಯರು ಸಾವನ್ನಪ್ಪಿದ್ದಾರೆ.

ಪ್ಯಾಲೇಸ್ಟಿನಿಯನ್ ಆರೋಗ್ಯ ಸಚಿವಾಲಯದ ಪ್ರಕಾರ, ಗಾಜಾದಲ್ಲಿ ಸಾವಿನ ಸಂಖ್ಯೆ 4,741 ಏರಿಕೆಯಾಗಿದೆ. ಇಸ್ರೇಲ್​​ ಮುತ್ತಿಗೆ ಹಾಕಿದ ಪ್ರದೇಶದಲ್ಲಿ 16 ಸಾವಿರ ಜನ ಗಾಯಗೊಂಡಿದ್ದಾರೆ. ಇದರ ಜತೆಗೆ ಒತ್ತೆಯಾಳುಗಳನ್ನು ಹಮಾಸ್​​ ಕೆಲವರನ್ನು ಬಿಡುಗಡೆ ಮಾಡಿದೆ. ಇನ್ನು ಭಾರತ ತನ್ನ ಜನರನ್ನು ತವರಿಗೆ ಆಪರೇಷನ್​​ ಅಜಯ್​​ ಮೂಲಕ ಕರೆಸಿಕೊಳ್ಳುತ್ತಿದೆ. ಮಾನವೀಯ ದೃಷಿಯಿಂದ ಭಾರತ ಪ್ಯಾಲೇಸ್ಟಿನಿಯನ್​​ಗೆ ಆಹಾರ, ವೈದ್ಯಕೀಯ ನೇರವುಗಳನ್ನು ನೀಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:08 pm, Mon, 23 October 23

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ