AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರದಲ್ಲಿ ಆಡಳಿತ ಪಕ್ಷದ ಬ್ಯಾನರ್ ಹಾಳು ಮಾಡಿದ್ದಾರೆಂದು 4ನೇ ಕ್ಲಾಸ್​ ಮಕ್ಕಳನ್ನು ಸ್ಟೇಶನ್​​ಗೆ ಕರೆದುಕೊಂಡು ಹೋದ ಪೊಲೀಸರು !

ಆಂಧ್ರ ಪೊಲೀಸರು ಒಂದು ಚಿಕ್ಕ ಕಾರಣಕ್ಕಾಗಿ ಅಪ್ರಾಪ್ತರನ್ನು ಕರೆದುಕೊಂಡು ಹೋಗಿ ಸ್ಟೇಶನ್​​ನಲ್ಲಿ ಇಟ್ಟುಕೊಂಡಿದ್ದನ್ನು ಪ್ರತಿಪಕ್ಷ ತೆಲುಗು ದೇಸಂ ಪಾರ್ಟಿ ಖಂಡಿಸಿದೆ. ದೂರು ನೀಡಿದ ವೈಎಸ್​ಪಿ ಪಕ್ಷದ ನಾಯಕರು ಮತ್ತು ಕರೆದುಕೊಂಡು ಹೋದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ಆಂಧ್ರದಲ್ಲಿ ಆಡಳಿತ ಪಕ್ಷದ ಬ್ಯಾನರ್ ಹಾಳು ಮಾಡಿದ್ದಾರೆಂದು 4ನೇ ಕ್ಲಾಸ್​ ಮಕ್ಕಳನ್ನು ಸ್ಟೇಶನ್​​ಗೆ ಕರೆದುಕೊಂಡು ಹೋದ ಪೊಲೀಸರು !
ಪೊಲೀಸರು ಕರೆದುಕೊಂಡು ಹೋದ ಮಕ್ಕಳು
TV9 Web
| Edited By: |

Updated on:Apr 27, 2022 | 3:36 PM

Share

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಪಲ್ನಾಡು ಪೊಲೀಸರು 3 ಮತ್ತು 4ನೇ ತರಗತಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಈ ಚಿಕ್ಕಪುಟ್ಟ ಹುಡುಗರು ಆಂಧ್ರಪ್ರದೇಶದ ಆಡಳಿತ ಪಕ್ಷವಾದ ಯುವಜನ ಶ್ರಮಿಕ ರೈತು ಕಾಂಗ್ರೆಸ್​ ಪಾರ್ಟಿ (YSRCP)ಯ ಬ್ಯಾನರ್​​ಗಳನ್ನು ಹಾಳು ಮಾಡಿದ್ದಾರೆಂಬ ಕಾರಣಕ್ಕೆ ಅವರನ್ನು ಪೊಲೀಸರು ಬಂಧಿಸಿ ಸ್ಟೇಶನ್​ಗೆ ಕರೆದುಕೊಂಡು ಹೋಗಿದ್ದಾರೆಂದು ಇಂಡಿಯಾ ಟುಡೆ ವರದಿ ಮಾಡಿದೆ.  ಪೊಲೀಸರು ಈ ವಿದ್ಯಾರ್ಥಿಗಳನ್ನು ಬೆಳಗ್ಗೆಯಿಂದ ಸಂಜೆಯವರೆಗೂ ಸ್ಟೇಶನ್​​ನೊಳಗೆ ಕೂರಿಸಿದ್ದರು. ಜೈಲಿಗೆ ಹಾಕದಿದ್ದರೂ ಠಾಣೆಯಲ್ಲಿ ನೆಲಕ್ಕೆ ಕೂರಿಸಿ, ಪ್ರಶ್ನೆ ಕೇಳಿದ್ದಾರೆ ಎಂದೂ ವರದಿಯಲ್ಲಿ ಉಲ್ಲೇಖವಾಗಿದೆ.

ವೈಎಸ್​ಆರ್​ಸಿಪಿ ಪಕ್ಷದ ಪೋಸ್ಟರ್​​ಗಳನ್ನು ಹುಡುಗರು ಹಾಳು ಮಾಡಿದ್ದಾರೆ ಎಂದು ಆ ಪಕ್ಷದ ಸದಸ್ಯರು ದೂರು ನೀಡಿದ ಹಿನ್ನೆಲೆಯಲ್ಲಿ ಅವರನ್ನೆಲ್ಲ ಸ್ಟೇಶನ್​​ಗೆ ಕರೆಸಲಾಗಿತ್ತು. ಅವರೊಂದಿಗೆ ಬರುವಂತೆ ಪಾಲಕರಿಗೂ ಹೇಳಿದ್ದೆವು.  ಇವರೆಲ್ಲ 10-15ವರ್ಷದ ವಯಸ್ಸಿನ ಹುಡುಗರಾಗಿದ್ದು ಜನಪಡು ಗ್ರಾಮದವರು ಎಂದು ಡೆಪ್ಯೂಟಿ ಎಸ್​ಪಿ ಜಯರಾಮ್​ ಪ್ರಸಾದ್​ ತಿಳಿಸಿದ್ದಾರೆ. ಸಂಜೆ ಹೊತ್ತಿಗೆ ಎಲ್ಲರನ್ನೂ ಬಿಟ್ಟುಕಳಿಸಿದ್ದಾಗಿಯೂ ಮಾಹಿತಿ ನೀಡಿದ್ದಾರೆ.

ಟಿಡಿಪಿಯಿಂದ ಖಂಡನೆ

ಆಂಧ್ರ ಪೊಲೀಸರು ಒಂದು ಚಿಕ್ಕ ಕಾರಣಕ್ಕಾಗಿ ಅಪ್ರಾಪ್ತರನ್ನು ಕರೆದುಕೊಂಡು ಹೋಗಿ ಸ್ಟೇಶನ್​​ನಲ್ಲಿ ಇಟ್ಟುಕೊಂಡಿದ್ದನ್ನು ಪ್ರತಿಪಕ್ಷ ತೆಲುಗು ದೇಸಂ ಪಾರ್ಟಿ ಖಂಡಿಸಿದೆ. ದೂರು ನೀಡಿದ ವೈಎಸ್​ಪಿ ಪಕ್ಷದ ನಾಯಕರು ಮತ್ತು ಕರೆದುಕೊಂಡು ಹೋದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ. ಟಿಡಿಪಿ ಪಕ್ಷದ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ನರಾ ಲೋಕೇಶ್​ ಟ್ವೀಟ್ ಮಾಡಿ, ಒಂದು ಕ್ಷುಲ್ಲಕ ಕಾರಣಕ್ಕಾಗಿ ಮಕ್ಕಳನ್ನು ಹೀಗೆ ಸ್ಟೇಶನ್​​​ಗೆ ಕರೆದುಕೊಂಡು ಬರುವುದು ಎಷ್ಟು ಸರಿ? ಇದು ಮಕ್ಕಳ ಹಕ್ಕುಗಳ ಉಲ್ಲಂಘನೆ. ಮುಖ್ಯಮಂತ್ರಿ ಜಗನ್​ ರೆಡ್ಡಿ ಇದಕ್ಕೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: AirAsia India: ಏರ್​ಏಷ್ಯಾ ಇಂಡಿಯಾದ ಸ್ವಾಧೀನಕ್ಕೆ ಟಾಟಾ ಒಡೆತನದ ಏರ್ ಇಂಡಿಯಾ ಯೋಜನೆ

Published On - 3:35 pm, Wed, 27 April 22

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು