AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swachh Bharat Mission: ಮೋದಿಯವರ ‘ಸ್ವಚ್ಛ ಭಾರತ್ ಅಭಿಯಾನ’ದಡಿ ಶೌಚಾಲಯ ನಿರ್ಮಾಣದಿಂದ ಪ್ರತಿ ವರ್ಷ 70,000 ಶಿಶುಗಳ ರಕ್ಷಣೆ

"ಸ್ವಚ್ಛ ಭಾರತ್ ಮಿಷನ್‌ನಂತಹ ಪ್ರಯತ್ನಗಳ ಪರಿಣಾಮವನ್ನು ಎತ್ತಿ ತೋರಿಸುವ ಸಂಶೋಧನೆಯನ್ನು ನೋಡಲು ಸಂತೋಷವಾಗಿದೆ. ಸರಿಯಾದ ಶೌಚಾಲಯಗಳ ಪ್ರವೇಶವು ಶಿಶು ಮತ್ತು ಮಕ್ಕಳ ಮರಣವನ್ನು ಕಡಿಮೆ ಮಾಡುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಸ್ವಚ್ಛ, ಸುರಕ್ಷಿತ ನೈರ್ಮಲ್ಯವು ಗೇಮ್ ಚೇಂಜರ್ ಆಗಿದೆ ಎಂದು ಮೋದಿ ಹೇಳಿದ್ದಾರೆ.

Swachh Bharat Mission: ಮೋದಿಯವರ 'ಸ್ವಚ್ಛ ಭಾರತ್ ಅಭಿಯಾನ'ದಡಿ ಶೌಚಾಲಯ ನಿರ್ಮಾಣದಿಂದ ಪ್ರತಿ ವರ್ಷ 70,000 ಶಿಶುಗಳ ರಕ್ಷಣೆ
ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on: Sep 05, 2024 | 8:44 PM

ದೆಹಲಿ ಸೆಪ್ಟೆಂಬರ್ 05: ನರೇಂದ್ರ ಮೋದಿ (Narendra Modi) ಸರ್ಕಾರದ ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ನಿರ್ಮಿಸಲಾದ ಶೌಚಾಲಯಗಳು ಪ್ರತಿ ವರ್ಷ 60,000-70,000 ಶಿಶು ಮರಣಗಳನ್ನು ತಪ್ಪಿಸಲು ಸಹಾಯ ಮಾಡಿರಬಹುದು ಎಂದು ಅಧ್ಯಯನವೊಂದು ಗುರುವಾರ ತಿಳಿಸಿದೆ. ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ನಿರ್ಮಿಸಲಾದ ಶೌಚಾಲಯಗಳ ಪ್ರವೇಶ ಹೆಚ್ಚಳ ಮತ್ತು 2000 ರಿಂದ 2020 ರವರೆಗೆ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಶಿಶುಗಳು ಮತ್ತು ಮಕ್ಕಳ ಸಾವಿನಲ್ಲಿನ ಕಡಿತದ ನಡುವಿನ ಸಂಬಂಧವನ್ನು ಅಧ್ಯಯನ ಮಾಡುವ ಜರ್ನಲ್ ಸೈಂಟಿಫಿಕ್ ರಿಪೋರ್ಟ್ಸ್‌ನಲ್ಲಿ ಈ ಅಧ್ಯಯನವನ್ನು ಪ್ರಕಟಿಸಲಾಗಿದೆ.

ಯುನೈಟೆಡ್ ಸ್ಟೇಟ್ಸ್‌ನ ಇಂಟರ್ನ್ಯಾಷನಲ್ ಫುಡ್ ಪಾಲಿಸಿ ರಿಸರ್ಚ್ ಇನ್‌ಸ್ಟಿಟ್ಯೂಟ್‌ನ ಸಂಶೋಧಕರು 35 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಮತ್ತು 600 ಕ್ಕೂ ಹೆಚ್ಚು ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಪ್ರಾತಿನಿಧಿಕ ಸಮೀಕ್ಷೆಗಳ ಡೇಟಾವನ್ನು 20 ವರ್ಷಗಳಲ್ಲಿ ಅಧ್ಯಯನ ಮಾಡಿದ್ದಾರೆ ಎಂದು ಪಿಟಿಐ ವರದಿ ತಿಳಿಸಿದೆ.

‘ಸ್ವಚ್ಛ ಭಾರತ’ ವರದಿಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ

“ಸ್ವಚ್ಛ ಭಾರತ್ ಮಿಷನ್‌ನಂತಹ ಪ್ರಯತ್ನಗಳ ಪರಿಣಾಮವನ್ನು ಎತ್ತಿ ತೋರಿಸುವ ಸಂಶೋಧನೆಯನ್ನು ನೋಡಲು ಸಂತೋಷವಾಗಿದೆ. ಸರಿಯಾದ ಶೌಚಾಲಯಗಳ ಪ್ರವೇಶವು ಶಿಶು ಮತ್ತು ಮಕ್ಕಳ ಮರಣವನ್ನು ಕಡಿಮೆ ಮಾಡುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಸ್ವಚ್ಛ, ಸುರಕ್ಷಿತ ನೈರ್ಮಲ್ಯವು ಗೇಮ್ ಚೇಂಜರ್ ಆಗಿದೆ. ಸಾರ್ವಜನಿಕ ಆರೋಗ್ಯದ ಬದಲಾವಣೆ ಮತ್ತು, ಭಾರತವು ಇದರಲ್ಲಿ ಮುಂದಾಳತ್ವ ವಹಿಸಿದೆ ಎಂದು ನನಗೆ ಖುಷಿಯಾಗಿದೆ ಎಂದು ಮೋದಿ ಹೇಳಿದ್ದಾರೆ.

ಅಧ್ಯಯನದ ಫಲಿತಾಂಶಗಳು ಏನು ಹೇಳುತ್ತಿವೆ?

ಅಧ್ಯಯನದ ಪ್ರಕಾರ, ಜಿಲ್ಲಾ ಮಟ್ಟದ ಶೌಚಾಲಯ ಪ್ರವೇಶದಲ್ಲಿ 10% ಅಂಕಗಳ ಸುಧಾರಣೆಯು ಶಿಶುಗಳಲ್ಲಿನ ಸಾವಿನ ಪ್ರಮಾಣವನ್ನು 0.9 ಅಂಕಗಳಿಂದ ಮತ್ತು ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ 1.1 ಅಂಕಗಳಿಂದ ಕಡಿಮೆಯಾಗಿದೆ.

ಭಾರತದಲ್ಲಿ ಶೌಚಾಲಯದ ಪ್ರವೇಶ ಮತ್ತು ಸಾವುಗಳು ವಿಲೋಮವಾಗಿ ಸಂಬಂಧ ಹೊಂದಿವೆ ಎಂದು ಅಧ್ಯಯನದ ಲೇಖಕರು ಹೇಳಿದ್ದಾರೆ, ಜಿಲ್ಲೆಯಲ್ಲಿ ಶೇಕಡಾ 30 ಮತ್ತು ಅದಕ್ಕಿಂತ ಹೆಚ್ಚಿನ ಶೌಚಾಲಯದ ವ್ಯಾಪ್ತಿಯ ಸುಧಾರಣೆಯು ಶಿಶು ಮತ್ತು ಮಕ್ಕಳ ಸಾವಿನಲ್ಲಿ ಗಣನೀಯ ಇಳಿಕೆಗೆ ಅನುಗುಣವಾಗಿದೆ ಎಂದು ಅಧ್ಯಯನ ಹೇಳಿದೆ.

ಇದನ್ನೂ ಓದಿ: ನಾಗಾ ಬಂಡಾಯ ಗುಂಪು NSCN-K ಜೊತೆ ಕದನ ವಿರಾಮ ವಿಸ್ತರಿಸಿದ ಕೇಂದ್ರ

“ಆವಿಷ್ಕಾರಗಳು ಜಾಗತಿಕ ಮತ್ತು ದಕ್ಷಿಣ ಏಷ್ಯಾದ ಸಂದರ್ಭಗಳಿಂದ ಸಾಕ್ಷ್ಯಾಧಾರಗಳಿಗೆ ಅನುಗುಣವಾಗಿವೆ, ಸಮೀಕ್ಷೆಗಳ ಮೂಲಕ ಸಂಗ್ರಹಿಸಿದ ಜನಸಂಖ್ಯೆ-ಮಟ್ಟದ ಡೇಟಾವನ್ನು ವಿಶ್ಲೇಷಿಸಿದ ಬಹು ಅಧ್ಯಯನಗಳೊಂದಿಗೆ, ಸುಧಾರಿತ ನೈರ್ಮಲ್ಯವು ಮಕ್ಕಳ ಮರಣ ಪ್ರಮಾಣವನ್ನು ಶೇಕಡಾ 5-30 ರಷ್ಟು ಕಡಿತಗೊಳಿಸಬಹುದು ಎಂದು ಸೂಚಿಸಿದೆ”ವರದಿಯನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ