AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೂ ಭ್ರಷ್ಟಾಚಾರ ಕಳಂಕ ಇಲ್ಲದ ಸುಬೋಧ್​ ಕುಮಾರ್​ ಜೈಸ್ವಾಲ್​ ಸಿಬಿಐ ನೂತನ ನಿರ್ದೇಶಕ; ಇನ್ನೆರಡು ವರ್ಷ ಅಧಿಕಾರ ಅವಧಿ

New CBI Chief ಸುಬೋಧ್​ ಜೈಸ್ವಾಲ್​ (58) ಈ ಹಿಂದೆ ಮುಂಬೈನ ಪೊಲೀಸ್​ ಆಯುಕ್ತ ಮತ್ತು ಮಹಾರಾಷ್ಟ್ರ ಡಿಜಿಪಿಯಾಗಿಯೂ ಕೆಲಸ ಮಾಡಿದ್ದಾರೆ. ಸದ್ಯ ಸಿಬಿಐ ನಿರ್ದೇಶಕ ಸ್ಥಾನಕ್ಕೆ ಪಟ್ಟಿಮಾಡಲಾದ ಮೂವರಲ್ಲಿ ಸುಬೋಧ್ ಜೈಸ್ವಾಲ್ ಅವರೇ ಹಿರಿಯ ಅಧಿಕಾರಿಯೂ ಹೌದು.

ಒಂದೂ ಭ್ರಷ್ಟಾಚಾರ ಕಳಂಕ ಇಲ್ಲದ ಸುಬೋಧ್​ ಕುಮಾರ್​ ಜೈಸ್ವಾಲ್​ ಸಿಬಿಐ ನೂತನ ನಿರ್ದೇಶಕ; ಇನ್ನೆರಡು ವರ್ಷ ಅಧಿಕಾರ ಅವಧಿ
ಸುಭೋದ್​ ಕುಮಾರ್ ಜೈಸ್ವಾಲ್​
Lakshmi Hegde
| Updated By: ಸಾಧು ಶ್ರೀನಾಥ್​|

Updated on:May 26, 2021 | 10:36 AM

Share

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CSIF) ಯ ಮುಖ್ಯಸ್ಥರಾಗಿದ್ದ ಸುಬೋಧ್ ಕುಮಾರ್​​ ಜೈಸ್ವಾಲ್​​ರನ್ನು ಸಿಬಿಐನ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಇವರು 1985ನೇ ಬ್ಯಾಚ್​ನ ಮಹಾರಾಷ್ಟ್ರ ಕೇಡರ್​ನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಸಿಬಿಐನ ನಿರ್ದೇಶಕನ ಸ್ಥಾನಕ್ಕೆ ಸುಬೋಧ್ ಕುಮಾರ್​​​ ಜೈಸ್ವಾಲ್​ (Subodh Kumar Jaiswal) ಜತೆ ಕೆ.ಆರ್​. ಚಂದ್ರ ಮತ್ತು ವಿ.ಎಸ್​.ಕೌಮುದಿ ಹೆಸರೂ ಪಟ್ಟಿಯಲ್ಲಿತ್ತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ, ಸುಪ್ರೀಂಕೋರ್ಟ್​ ಮುಖ್ಯನ್ಯಾಯಮೂರ್ತಿ ಎನ್​. ವಿ. ರಮಣ, ಲೋಕಸಭೆ ಪ್ರತಿಪಕ್ಷ ನಾಯಕ ಅಧೀರ್ ರಂಜನ್​ ಚೌಧರಿ ಅವರನ್ನೊಳಗೊಂಡ ಸಮಿತಿ ಈ ಮೂವರ ಹೆಸರನ್ನು ಆಯ್ಕೆ ಮಾಡಿತ್ತು. ಅದರಲ್ಲಿ ಸುಬೋಧ್​ ಜೈಸ್ವಾಲ್​ ಹೆಸರು ಮುಂಚೂಣಿಯಲ್ಲಿತ್ತು.

ಸಮಿತಿಯ ಶಿಫಾರಸಿನ ಅನ್ವಯ ಸುಬೋಧ್​ ಕುಮಾರ್ ಜೈಸ್ವಾಲ್​ ಅವರನ್ನು, 2 ವರ್ಷಗಳ ಅವಧಿಗೆ ಸಿಬಿಐನ ನೂತನ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಆದೇಶ ಹೊರಡಿಸಿದೆ.

ಇನ್ನು ಸುಬೋಧ್​ ಜೈಸ್ವಾಲ್​ (58) ಈ ಹಿಂದೆ ಮುಂಬೈನ ಪೊಲೀಸ್​ ಆಯುಕ್ತ ಮತ್ತು ಮಹಾರಾಷ್ಟ್ರ ಡಿಜಿಪಿಯಾಗಿಯೂ ಕೆಲಸ ಮಾಡಿದ್ದಾರೆ. ಸದ್ಯ ಸಿಬಿಐ ನಿರ್ದೇಶಕ ಸ್ಥಾನಕ್ಕೆ ಪಟ್ಟಿಮಾಡಲಾದ ಮೂವರಲ್ಲಿ ಸುಬೋಧ್ ಜೈಸ್ವಾಲ್ ಅವರೇ ಹಿರಿಯ ಅಧಿಕಾರಿಯೂ ಹೌದು. ಇವರಿಗೆ ಗುಪ್ತಚರ ದಳದ ವಿಶೇಷ ರಕ್ಷಣಾ ಗುಂಪು ಮತ್ತು ಸಂಶೋಧನೆ ಮತ್ತು ವಿಶ್ಲೇಷಣಾ ದಳದಲ್ಲಿ ದಶಕಗಳ ಕಾಲ ಕೆಲಸ ಮಾಡಿದ ಅನುಭವವೂ ಇದೆ. ತೆಲಗಿ ಹಗರಣದ ತನಿಖೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹಾಗೇ ಮಹಾರಾಷ್ಟ್ರ ಆ್ಯಂಟಿ ಟೆರರ್​ ಸ್ಕ್ವಾಡ್​ ಮುಖ್ಯಸ್ಥರಾಗಿ, ಹಲವು ಭಯೋತ್ಪಾದಕ ವಿರೋಧಿ ಕಾರ್ಯಾಚರಣೆಯಲ್ಲೂ ಪಾಳ್ಗೊಂಡಿದ್ದರು. ಅದೆಲ್ಲಕ್ಕಿಂತ ಮುಖ್ಯವಾಗಿ ಒಂದೇ ಒಂದು ಭ್ರಷ್ಟಾಚಾರದ ಕಳಂಕವೂ ಇವರ ಮೇಲಿಲ್ಲ. ನೈತಿಕವಾಗಿ ಗಟ್ಟಿ ಇರುವ ಅಧಿಕಾರಿ ಎಂದೇ ಗುರುತಿಸಲ್ಪಟ್ಟಿದ್ದಾರೆ. 2009ರಲ್ಲಿ ರಾಷ್ಟ್ರಪತಿ ಪದಕ ಪುರಸ್ಕಾರವೂ ಸಿಕ್ಕಿದೆ.

ಇದನ್ನೂ ಓದಿ: New CBI Chief: ಅಂತಿಮ ಪಟ್ಟಿಯಲ್ಲಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿಯಿಂದ ಮೂವರ ಹೆಸರು

Subodh Kumar Jaiswal appointed As CBI director

Published On - 11:30 pm, Tue, 25 May 21

ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು