AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವಕ್ಕೂ ಮುನ್ನ ಬದಲಾಗುತ್ತಾ ಭಾರತದ ರಾಷ್ಟ್ರಗೀತೆ? ಹಾಗಾದ್ರೆ ಮತ್ಯಾವುದು ಬರುತ್ತದೆ?

‘ಜನ ಗಣ ಮನ’ ಗೀತೆಯ ಬದಲು 1943ರ ಅಕ್ಟೋಬರ್ 24ರಂದು ಭಾರತೀಯ ಸೇನೆಯು ಸಂಯೋಜಿಸಿ ಹಾಡಿರುವ ಗೀತೆಯನ್ನು ರಾಷ್ಟ್ರಗೀತೆ ಎಂದು ಪರಿಗಣಿಸಿ.

ಗಣರಾಜ್ಯೋತ್ಸವಕ್ಕೂ ಮುನ್ನ ಬದಲಾಗುತ್ತಾ ಭಾರತದ ರಾಷ್ಟ್ರಗೀತೆ? ಹಾಗಾದ್ರೆ ಮತ್ಯಾವುದು ಬರುತ್ತದೆ?
ನರೇಂದ್ರ ಮೋದಿ, ಸುಬ್ರಮಣಿಯನ್ ಸ್ವಾಮಿ (ಸಂಗ್ರಹ ಚಿತ್ರ)
Skanda
|

Updated on:Dec 02, 2020 | 5:55 PM

Share

ಭಾರತದ ರಾಷ್ಟ್ರಗೀತೆಯನ್ನು ಬದಲಿಸುವಂತೆ ಬಿಜೆಪಿ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಹೊಸ ಚರ್ಚೆಗೆ ಗ್ರಾಸವಾಗಿದೆ.

ಈಗಿರುವ ರಾಷ್ಟ್ರಗೀತೆ 1947ರ ನಂತರದ ಭಾರತಕ್ಕೆ ಸರಿ ಹೊಂದುವುದಿಲ್ಲ ರವೀಂದ್ರನಾಥ ಠಾಗೋರ್ ರಚಿಸಿರುವ ರಾಷ್ಟ್ರಗೀತೆ ಸ್ವಾತಂತ್ಯೋತ್ತರ ಭಾರತಕ್ಕೆ ಸರಿಹೊಂದುವುದಿಲ್ಲ ಎಂದು ಸುಬ್ರಮಣಿಯನ್ ಸ್ವಾಮಿ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ರಾಷ್ಟ್ರಗೀತೆಯಲ್ಲಿ ಬರುವ ಸಿಂಧ್ ಪ್ರಾಂತ್ಯ ಭಾರತದಲ್ಲಿ ಈಗ ಇಲ್ಲವೇ ಇಲ್ಲ. ಮೇಲಾಗಿ ಈ ಗೀತೆ ಯಾರನ್ನು ಉದ್ದೇಶಿಸಿ ರಚಿಸಲ್ಪಟ್ಟಿದೆ ಎಂಬ ಗೊಂದಲವೂ ಇದೆ. ಹೀಗಾಗಿ ಇದನ್ನು ಬದಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಭಾರತೀಯ ಸೇನೆ ಸಂಯೋಜಿಸಿ ಹಾಡಿದ ಗೀತೆಯನ್ನು ರಾಷ್ಟ್ರಗೀತೆ ಮಾಡಿ ‘ಜನ ಗಣ ಮನ’ ಗೀತೆಯ ಬದಲು 1943ರ ಅಕ್ಟೋಬರ್ 24ರಂದು ಭಾರತೀಯ ಸೇನೆಯು ಸಂಯೋಜಿಸಿ ಹಾಡಿರುವ ಗೀತೆಯನ್ನು ರಾಷ್ಟ್ರಗೀತೆ ಎಂದು ಪರಿಗಣಿಸುವಂತೆ ಪತ್ರದಲ್ಲಿ ತಿಳಿಸಿದ್ದಾರೆ. ಈಗಿರುವ ಗೀತೆಗಿಂತ, ಸೇನೆ ಹಾಡಿರುವ ಗೀತೆಯೇ ಹೆಚ್ಚು ಸೂಕ್ತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮುಂದಿನ ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರಗೀತೆ ಬದಲಾಗಲಿ ಇದರೊಂದಿಗೆ ‘ಜನ ಗಣ ಮನ’ವನ್ನು ಕಾಲಕ್ರಮೇಣ ಸೂಕ್ತ ಅರ್ಥ ಬರುವಂತೆ ಬದಲಿಸಬಹುದು ಎಂದು 1949 ನವೆಂಬರ್​ 26ರಂದು ಡಾ. ರಾಜೇಂದ್ರ ಪ್ರಸಾದ್ ಹೇಳಿದ ಮಾತನ್ನು ಉಲ್ಲೇಖಿಸಿರುವ ಸುಬ್ರಮಣಿಯನ್​ ಸ್ವಾಮಿ 2021ರ ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರಗೀತೆಯನ್ನು ಬದಲಿಸಿ ಎಂದು ಪತ್ರದ ಮೂಲಕ ಕೋರಿದ್ದಾರೆ.

ಈ ಹಿಂದೆ ರಾಷ್ಟ್ರಗೀತೆಯಿಂದ ಸಿಂಧ್ ಪದವನ್ನು ಕೈ ಬಿಡಲು ಮನವಿ ಮಾಡಲಾಗಿತ್ತು 2016ರಲ್ಲಿ ಕೇಂದ್ರ ಸಚಿವ ಅರವಿಂದ ಸಾವಂತ್ ರಾಷ್ಟ್ರಗೀತೆಯಿಂದ ಸಿಂಧ್ ಪದವನ್ನು ಕೈ ಬಿಡುವಂತೆ ಆಗ್ರಹಿಸಿದ್ದರು. ಆದರೆ, ಸಿಂಧಿ ಸಮುದಾಯದವರು ಸಿಂಧ್ ಪಾಕಿಸ್ತಾನದ ಪಾಲಾದರೂ ನಾವು ಭಾರತೀಯರಾಗಿಯೇ ಉಳಿದಿದ್ದೇವೆ. ಆದ್ದರಿಂದ ಸಿಂಧ್ ಪದವನ್ನು ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದರ ಫಲವಾಗಿ ಬದಲಾವಣೆ ಆಗಿರಲಿಲ್ಲ.

ಪ್ರತಿಭಟನಾಕಾರರಲ್ಲಿ ದೇಶಾಭಿಮಾನ ಕಂಡು ರಾಷ್ಟ್ರಗೀತೆ ಹಾಡಿದ ಡಿಸಿಪಿ

Published On - 5:50 pm, Wed, 2 December 20

ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?