AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿಯ ಭಾರತೀಯ ಪೌರತ್ವದ ವಿರುದ್ಧ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸುಬ್ರಮಣಿಯನ್ ಸ್ವಾಮಿ: ವರದಿ

ಅಕ್ಟೋಬರ್ 10, 2005 ಮತ್ತು ಅಕ್ಟೋಬರ್ 31, 2006 ರಂದು ಸಲ್ಲಿಸಿದ ಸಂಸ್ಥೆಯ ವಾರ್ಷಿಕ ರಿಟರ್ನ್ಸ್ ರಾಹುಲ್ ಗಾಂಧಿ ಅವರು ತಮ್ಮ ರಾಷ್ಟ್ರೀಯತೆಯನ್ನು ಬ್ರಿಟಿಷರು ಎಂದು ಘೋಷಿಸಿದ್ದಾರೆ ಎಂದು ಸ್ವಾಮಿ ಆರೋಪಿಸಿದ್ದಾರೆ. ಫೆಬ್ರವರಿ 17, 2009 ರಂದು ಬ್ಯಾಕ್‌ಆಪ್ಸ್ ಲಿಮಿಟೆಡ್‌ನ ವಿಸರ್ಜನೆಯ ಅರ್ಜಿಯಲ್ಲಿ ಗಾಂಧಿಯವರ ರಾಷ್ಟ್ರೀಯತೆಯನ್ನು ಮತ್ತೆ ಬ್ರಿಟಿಷ್ ಎಂದು ಘೋಷಿಸಲಾಗಿದೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ

ರಾಹುಲ್ ಗಾಂಧಿಯ ಭಾರತೀಯ ಪೌರತ್ವದ ವಿರುದ್ಧ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸುಬ್ರಮಣಿಯನ್ ಸ್ವಾಮಿ: ವರದಿ
ಸುಬ್ರಮಣಿಯನ್ ಸ್ವಾಮಿ
ರಶ್ಮಿ ಕಲ್ಲಕಟ್ಟ
|

Updated on:Aug 16, 2024 | 6:31 PM

Share

ದೆಹಲಿ ಆಗಸ್ಟ್ 16: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಭಾರತೀಯ ಪೌರತ್ವವನ್ನು ರದ್ದುಗೊಳಿಸುವಂತೆ ಗೃಹ ಸಚಿವಾಲಯಕ್ಕೆ (MHA) ನಿರ್ದೇಶನ ನೀಡುವಂತೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ(Subramanian Swamy) ಶುಕ್ರವಾರ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಕಾನೂನು ವೆಬ್‌ಸೈಟ್ ಬಾರ್ ಮತ್ತು ಬೆಂಚ್‌ನ ವರದಿಯ ಪ್ರಕಾರ, ಸ್ವಾಮಿ ಅವರು 2019 ರಲ್ಲಿ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದರು. ಅದರಲ್ಲಿ ಅವರು ಬ್ಯಾಕ್‌ಆಪ್ಸ್ ಲಿಮಿಟೆಡ್ ಹೆಸರಿನ ಸಂಸ್ಥೆಯನ್ನು ಯುನೈಟೆಡ್ ಕಿಂಗ್‌ಡಮ್‌ನಲ್ಲಿ 2003 ರಲ್ಲಿ ನೋಂದಾಯಿಸಲಾಗಿದೆ. ಕಾಂಗ್ರೆಸ್ ಸಂಸದರು ಅದರ ನಿರ್ದೇಶಕರು ಮತ್ತು ಕಾರ್ಯದರ್ಶಿಗಳಲ್ಲಿ ಒಬ್ಬರು ಎಂದು ಹೇಳಿದ್ದಾರೆ.

ಅಕ್ಟೋಬರ್ 10, 2005 ಮತ್ತು ಅಕ್ಟೋಬರ್ 31, 2006 ರಂದು ಸಲ್ಲಿಸಿದ ಸಂಸ್ಥೆಯ ವಾರ್ಷಿಕ ರಿಟರ್ನ್ಸ್ ರಾಹುಲ್ ಗಾಂಧಿ ಅವರು ತಮ್ಮ ರಾಷ್ಟ್ರೀಯತೆಯನ್ನು ಬ್ರಿಟಿಷರು ಎಂದು ಘೋಷಿಸಿದ್ದಾರೆ ಎಂದು ಸ್ವಾಮಿ ಆರೋಪಿಸಿದ್ದಾರೆ. ಫೆಬ್ರವರಿ 17, 2009 ರಂದು ಬ್ಯಾಕ್‌ಆಪ್ಸ್ ಲಿಮಿಟೆಡ್‌ನ ವಿಸರ್ಜನೆಯ ಅರ್ಜಿಯಲ್ಲಿ ಗಾಂಧಿಯವರ ರಾಷ್ಟ್ರೀಯತೆಯನ್ನು ಮತ್ತೆ ಬ್ರಿಟಿಷ್ ಎಂದು ಘೋಷಿಸಲಾಗಿದೆ ಎಂದು ಸ್ವಾಮಿ ಆರೋಪಿಸಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಹೇಳಿದೆ. ಏತನ್ಮಧ್ಯೆ, ರಾಹುಲ್ ಗಾಂಧಿ ಸಂವಿಧಾನವನ್ನು ಉಲ್ಲಂಘಿಸಿದ್ದಾರೆ ಎಂದು ಸ್ವಾಮಿ ಆರೋಪಿಸಿದ್ದಾರೆ.

ಇದು ಭಾರತದ ಸಂವಿಧಾನದ 9 ನೇ ವಿಧಿ ಮತ್ತು ಭಾರತೀಯ ಪೌರತ್ವ ಕಾಯಿದೆ, 1955 ಅನ್ನು ಉಲ್ಲಂಘಿಸಿದೆ ಎಂದು ಸ್ವಾಮಿ ಆರೋಪಿಸಿದ್ದಾರೆ. ವರದಿಯ ಪ್ರಕಾರ, ಏಪ್ರಿಲ್ 29, 2019 ರಂದು ಗೃಹ ಸಚಿವಾಲಯವು ರಾಹುಲ್ ಗಾಂಧಿಗೆ ಪತ್ರ ಬರೆದು ಹದಿನೈದು ದಿನದೊಳಗೆಈ ಬಗ್ಗೆ ವಾಸ್ತವಿಕ ನಿಲುವನ್ನು ಮುಂದಿಡುವಂತೆ ಕೇಳಿದೆ.

ಅವರು ಪತ್ರ ಬರೆದು ಐದು ವರ್ಷಗಳು ಕಳೆದರೂ ರಾಹುಲ್ ಗಾಂಧಿ ಅವರ ಬಗ್ಗೆ ತೆಗೆದುಕೊಂಡ ನಿರ್ಧಾರದ ಬಗ್ಗೆ ಗೃಹ ಸಚಿವಾಲಯದಿಂದ ಸ್ಪಷ್ಟತೆ ಇಲ್ಲ ಎಂದು ಬಿಜೆಪಿ ಆರೋಪಿಸಿದೆ.

ಇದನ್ನೂ ಓದಿ: ಪ್ರಧಾನಿ ಮೋದಿಗೆ ಕರೆ ಮಾಡಿದ ಬಾಂಗ್ಲಾದೇಶದ ಮುಹಮ್ಮದ್ ಯೂನಸ್; ಹಿಂದೂಗಳು ಮತ್ತು ಅಲ್ಪಸಂಖ್ಯಾತರ ರಕ್ಷಣೆಯ ಭರವಸೆ

2004 ರಿಂದ 2019 ರ ನಡುವೆ ಬಿಜೆಪಿಯ ಸ್ಮೃತಿ ಇರಾನಿ ಅವರನ್ನು ಸೋಲಿಸುವವರೆಗೆ ಮೂರು ಅವಧಿಗೆ ಅಮೇಠಿಯನ್ನು ಪ್ರತಿನಿಧಿಸಿದ್ದ ರಾಹುಲ್ ಗಾಂಧಿ ಐದು ಅವಧಿಗೆ ಸಂಸದರಾಗಿದ್ದಾರೆ. ಅವರು ಕೇರಳದ ವಯನಾಡ್‌ನಿಂದ ಆಯ್ಕೆಯಾಗಿದ್ದರು. ಕಾಂಗ್ರೆಸ್ ಭದ್ರಕೋಟೆಯಾದ ಉತ್ತರ ಪ್ರದೇಶದ ರಾಯ್ಬರೇಲಿಯಿಂದ ಸಂಸದರಾಗಿ ಆಯ್ಕೆಯಾಗಿರುವ ರಾಹುಲ್ ಗಾಂಧಿ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾರೆ.  ಕಾಂಗ್ರೆಸ್  99 ಸ್ಥಾನಗಳೊಂದಿಗೆ ಇಂಡಿಯಾ ಬ್ಲಾಕ್‌ನ ಅತಿದೊಡ್ಡ ಸದಸ್ಯ ಆಗಿದೆ. 10 ವರ್ಷಗಳ ನಂತರ ಕಾಂಗ್ರೆಸ್‌ಗೆ ವಿರೋಧ ಪಕ್ಷದ ನಾಯಕ ಸ್ಥಾನ ಸಿಕ್ಕಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:12 pm, Fri, 16 August 24

ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ