AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನಾ ಹೆಲಿಕಾಪ್ಟರ್​ ಪತನ; ಅನುಮಾನ ವ್ಯಕ್ತಪಡಿಸಿ, ಸುಪ್ರೀಂಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಆಗ್ರಹಿಸಿದ ಸುಬ್ರಹ್ಮಣಿಯನ್ ಸ್ವಾಮಿ

ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಘಟನೆಯನ್ನು ಸರಿಯಾಗಿ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೊಂದು ಶಾಕಿಂಗ್​ ಘಟನೆ ಮತ್ತು ರಾಷ್ಟ್ರೀಯ ಭದ್ರತೆಗೆ ಎಚ್ಚರಿಕೆ ನೀಡುವಂಥ ಪ್ರಕರಣ ಎಂದಿದ್ದಾರೆ.

ಸೇನಾ ಹೆಲಿಕಾಪ್ಟರ್​ ಪತನ; ಅನುಮಾನ ವ್ಯಕ್ತಪಡಿಸಿ, ಸುಪ್ರೀಂಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಆಗ್ರಹಿಸಿದ ಸುಬ್ರಹ್ಮಣಿಯನ್ ಸ್ವಾಮಿ
ಸುಬ್ರಹ್ಮಣಿಯನ್ ಸ್ವಾಮಿ
TV9 Web
| Edited By: |

Updated on: Dec 09, 2021 | 5:19 PM

Share

ತಮಿಳುನಾಡಿನ ಕೂನೂರ್​​​ನಲ್ಲಿ ನಡೆದ ಸೇನಾ ಹೆಲಿಕಾಪ್ಟರ್​ ಪತನದ ಪ್ರಕರಣವನ್ನು ಸುಪ್ರೀಂಕೋರ್ಟ್​ ಹಿರಿಯ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ರಾಜ್ಯ ಸಭಾ ಸದಸ್ಯ ಸುಬ್ರಹ್ಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ. ಡಿ.8ರಂದು ಸೂಲೂರ್​​ನಿಂದ ವೆಲ್ಲಿಂಗ್ಟನ್​​ಗೆ ಹೊರಟಿದ್ದ ಸೇನಾ ವಿಮಾನ ಕೂನೂರ್​​ ಬಳಿ ಕಟ್ಟೇರಿ ಗ್ರಾಮದಲ್ಲಿ ಪತನಗೊಂಡಿತ್ತು. ಇದರಲ್ಲಿ ಪ್ರಯಾಣ ಮಾಡುತ್ತಿದ್ದ ಭಾರತೀಯ ಸೇನಾ ಸಿಡಿಎಸ್​ ಬಿಪಿನ್​ ರಾವತ್​, ಅವರ ಪತ್ನಿ ಮಧುಲಿಕಾ ಮತ್ತು ಇತರ 11 ಸೇನಾ ಅಧಿಕಾರಿಗಳು ಮೃತಪಟ್ಟಿದ್ದಾರೆ. ಸದ್ಯ ಎಲ್ಲರದ್ದೂ ಒಂದೇ ಪ್ರಶ್ನೆ, ಅಂಥ ವಿಐಪಿಗಳು ಪ್ರಯಾಣಿಸುವ ಹೆಲಿಕಾಪ್ಟರ್​, ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾಗ್ಯೂ ಕೂಡ ಪತನವಾಗಿದ್ದು ಹೇಗೆ ಎಂಬುದು. 

ಇದೀಗ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಘಟನೆಯನ್ನು ಸರಿಯಾಗಿ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೊಂದು ಶಾಕಿಂಗ್​ ಘಟನೆ ಮತ್ತು ರಾಷ್ಟ್ರೀಯ ಭದ್ರತೆಗೆ ಎಚ್ಚರಿಕೆ ನೀಡುವಂಥ ಪ್ರಕರಣ ಎಂದಿದ್ದಾರೆ. ಹೆಲಿಕಾಪ್ಟರ್​ ಪತನಕ್ಕೆ ಸಂಬಂಧಪಟ್ಟಂತೆ ಇನ್ನೂ ಕೂಡ ಅಂತಿಮ ವರದಿ ಬಂದಿಲ್ಲ. ಈಗ ಏನು ಹೇಳುವುದೂ ಕಷ್ಟವಾಗುತ್ತದೆ. ಆದರೆ ತಮಿಳುನಾಡಿನಂಥ ಸುರಕ್ಷಿತ ಸೇನಾ ವಲಯದಲ್ಲೂ ಕೂಡ ಸೇನಾ ವಿಮಾನವೊಂದು ಪತನಗೊಂಡಿದ್ದು ಅಚ್ಚರಿ ತಂದಿದೆ ಎಂದು ಅವರು ಹೇಳಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ ತುಂಬ ಗಂಭೀರವಾಗಿ ತನಿಖೆ ನಡೆಯಲೇಬೇಕು. ಅದರಲ್ಲೂ ಸುಪ್ರೀಂಕೋರ್ಟ್​ ಹಿರಿಯ ನ್ಯಾಯವಾದಿಯ ನೇತೃತ್ವದಲ್ಲಿ ತನಿಖೆ ನಡೆಯಬೇಕು. ಅದನ್ನು ಸಾರ್ವಜನಿಕರ ಎದುರು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಸದ್ಯ ಎಲ್ಲರಿಗೂ ಬಹುದೊಡ್ಡ ಪ್ರಶ್ನೆ ಇದೇ ಆಗಿದೆ. ಭಾರತೀಯ ವಾಯುಸೇನೆಯಲ್ಲಿ ಅತ್ಯಂತ ಬಲಿಷ್ಠವಾದ ಹೆಲಿಕಾಪ್ಟರ್​ ಎನಿಸಿಕೊಂಡಿದ್ದ ಎಂಐ-17ವಿ5 ಪತನವಾಗಿದ್ದು ಹೇಗೆ ಎಂಬುದು. ಈ ಹೆಲಿಕಾಪ್ಟರ್​​ನಲ್ಲಿದ್ದ 14 ಮಂದಿಯಲ್ಲಿ 13 ಸಿಬ್ಬಂದಿ ಮೃತಪಟ್ಟಿದ್ದಾರೆ. ಉಳಿದಿರುವ ಗ್ರೂಪ್​ ಕ್ಯಾಪ್ಟನ್​ ವರುಣ್​ ಸಿಂಗ್​​ಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಹೆಲಿಕಾಪ್ಟರ್​​ನ ಬ್ಲ್ಯಾಕ್​ ಬಾಕ್ಸ್​ ಸಿಕ್ಕಿದ್ದು, ಅದರ ಮೂಲಕ ತನಿಖೆ  ನಡೆಸಲಾಗುತ್ತಿದೆ.

ಇದನ್ನೂ ಓದಿ: ಹುನ್ನೂರ ಬಸವ ಗುರುಕುಲದ ತತ್ವ ಪ್ರವಚನಕಾರ ಡಾ ಈಶ್ವರ ಮಂಟೂರ ನಿಧನ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!