AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ; ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಂದ ಘಟನೆಗೆ ಸಿಎಂ ಹೇಮಂತ್ ಸೊರೇನ್ ಶಾಕಿಂಗ್ ಪ್ರತಿಕ್ರಿಯೆ

ದುಮ್ಕಾದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಹೇಮಂತ್ ಸೊರೇನ್, ಈ ರೀತಿಯ ಘಟನೆಗಳು ಎಲ್ಲ ಕಡೆಯೂ ನಡೆಯುತ್ತಲೇ ಇರುತ್ತವೆ ಎಂದು ಹೇಳಿದ್ದಾರೆ.

ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ; ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಂದ ಘಟನೆಗೆ ಸಿಎಂ ಹೇಮಂತ್ ಸೊರೇನ್ ಶಾಕಿಂಗ್ ಪ್ರತಿಕ್ರಿಯೆ
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್
TV9 Web
| Updated By: ಸುಷ್ಮಾ ಚಕ್ರೆ|

Updated on:Sep 05, 2022 | 11:32 AM

Share

ರಾಂಚಿ: ಜಾರ್ಖಂಡ್‌ನ ದುಮ್ಕಾದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ (Rape) ನಡೆಸಿ, ನೇಣು ಹಾಕಿ ಕೊಲೆ (Murder) ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ (Hemant Soren) ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಇದೇನೂ ದೊಡ್ಡ ವಿಷಯವಲ್ಲ, ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ ಎಂದು ಸಿಎಂ ಹೇಮಂತ್ ಸೊರೇನ್ ಹೇಳಿರುವುದಕ್ಕೆ ತೀವ್ರ ಟೀಕೆ ವ್ಯಕ್ತವಾಗುತ್ತಿದೆ.

ದುಮ್ಕಾದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಹೇಮಂತ್ ಸೊರೇನ್, ಈ ರೀತಿಯ ಘಟನೆಗಳು ಎಲ್ಲ ಕಡೆಯೂ ನಡೆಯುತ್ತಲೇ ಇರುತ್ತವೆ. ಈ ರೀತಿ ಯಾವ ರಾಜ್ಯದಲ್ಲಿ ಆಗಿಲ್ಲ?ಇಂತಹ ಘಟನೆಗಳನ್ನು ಮೊದಲೇ ಊಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Big News: ಜಾರ್ಖಂಡ್ ಬಿಕ್ಕಟ್ಟಿನ ನಡುವೆ ಇಂದು ವಿಶ್ವಾಸಮತ ಯಾಚನೆ; ಸಿಎಂ ಹೇಮಂತ್ ಸೊರೇನ್ ಭವಿಷ್ಯ ನಿರ್ಧಾರ

ಶುಕ್ರವಾರ ಜಾರ್ಖಂಡ್‌ನ ದುಮ್ಕಾದಲ್ಲಿ 14 ವರ್ಷದ ಬುಡಕಟ್ಟು ಬಾಲಕಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಶುಕ್ರವಾರ ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತನ್ನ ಮಗಳ ಮೇಲೆ ಅತ್ಯಾಚಾರ ನಡೆಸಿ, ಕೊಂದು ಮರಕ್ಕೆ ನೇಣು ಹಾಕಲಾಗಿದೆ ಎಂದು ಸಂತ್ರಸ್ತೆಯ ತಾಯಿ ಆರೋಪಿಸಿ ದೂರು ನೀಡಿದ್ದರು. ಮದುವೆಯ ನೆಪದಲ್ಲಿ ಬಾಲಕಿಯ ಮೇಲೆ ವ್ಯಕ್ತಿಯೊಬ್ಬರು ಅತ್ಯಾಚಾರ ನಡೆಸಿ, ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದರು.

“ದುಮ್ಕಾದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಮೃತ ಬಾಲಕಿ ಅಪ್ರಾಪ್ತ ವಯಸ್ಸಿನ ಬಾಲಕಿಯಾಗಿದ್ದಾಳೆ. ಆಕೆ ಬುಡಕಟ್ಟು ಜನಾಂಗದ ಹುಡುಗಿ. ಆಕೆಯ ಮೇಲೆ ಅತ್ಯಾಚಾರ ನಡೆಸಿ ಕೊಂದ ಆರೋಪಿಯನ್ನು ಅರ್ಮಾನ್ ಅನ್ಸಾರಿ ಎಂದು ಗುರುತಿಸಲಾಗಿದೆ. ಆತನ ವಿರುದ್ಧ ಐಪಿಸಿ, ಎಸ್‌ಸಿ ಎಸ್‌ಟಿ ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ 302ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ದುಮ್ಕಾ ಎಸ್ಪಿ ತಿಳಿಸಿದ್ದಾರೆ.

ಇದನ್ನೂ ಓದಿ: Breaking: ಜಾರ್ಖಂಡ್ ಮುಖ್ಯಮಂತ್ರಿಯನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಚುನಾವಣಾ ಆಯೋಗ

ಮತ್ತೊಂದೆಡೆ ಬಿಜೆಪಿ ಈ ಘಟನೆಗೆ ಸಂಬಂಧಿಸಿದಂತೆ ಜಾರ್ಖಂಡ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಕಳೆದ ವಾರ ಹುಡುಗಿಯೊಬ್ಬಳನ್ನು ಸುಟ್ಟು ಹಾಕಲಾಯಿತು. ಈಗ ಬುಡಕಟ್ಟು ಹುಡುಗಿಯನ್ನು ಮರಕ್ಕೆ ನೇಣು ಹಾಕಲಾಗಿದೆ. ಆ ಬಾಲಕಿ ಗರ್ಭಿಣಿಯಾಗಿದ್ದಳು. ಅಂದರೆ, ಆಕೆಯ ಮೇಲೆ ಈ ಮೊದಲು ಕೂಡ ಅತ್ಯಾಚಾರ ನಡೆಸಲಾಗಿತ್ತು. ಆಕೆಯ ಸಾವಿಗೆ ಸರ್ಕಾರವೇ ನೇರ ಹೊಣೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿರುವಂತೆ ಕಾಣುತ್ತಿದೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಟೀಕಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:30 am, Mon, 5 September 22

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್