AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NCERT ಪಠ್ಯಪುಸ್ತಕ ಪರಿಷ್ಕರಿಸುವ ನೂತನ ಸಮಿತಿಯಲ್ಲಿ ಸುಧಾ ಮೂರ್ತಿ, ಶಂಕರ್ ಮಹಾದೇವನ್

ಪಠ್ಯಪುಸ್ತಕಗಳು ಮತ್ತು ಇತರ ಬೋಧನಾ ಕಲಿಕಾ ಸಾಮಗ್ರಿಗಳ ಬಗ್ಗೆ ಈ ಸಮಿತಿ ತೀರ್ಮಾನ ಕೈಗೊಳ್ಳಲಿದ್ದು, ಇವುಗಳನ್ನು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ನಿಯಮಗಳ ಪ್ರಕಾರ ಪ್ರಕಟಿಸಿ ಬಳಸುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ. ಪ್ರತಿ ಪಠ್ಯಕ್ರಮದ ಪ್ರದೇಶಕ್ಕೆ ಬೋಧನೆ-ಕಲಿಕೆ ಸಾಮಗ್ರಿಗಳ ಅಭಿವೃದ್ಧಿಯಲ್ಲಿ ಪಠ್ಯಕ್ರಮದ ಪ್ರದೇಶ ಗುಂಪುಗಳು (CAGs) ಎನ್ ಎಸ್ ಟಿಸಿಗೆ ಗೆ ಸಹಾಯ ಮಾಡುತ್ತದೆ.

NCERT ಪಠ್ಯಪುಸ್ತಕ ಪರಿಷ್ಕರಿಸುವ ನೂತನ ಸಮಿತಿಯಲ್ಲಿ ಸುಧಾ ಮೂರ್ತಿ, ಶಂಕರ್ ಮಹಾದೇವನ್
ಸುಧಾ ಮೂರ್ತಿ- ಶಂಕರ್ ಮಹಾದೇವನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Aug 12, 2023 | 6:01 PM

Share

ದೆಹಲಿ ಆಗಸ್ಟ್ 12: ಹೊಸ ಪಠ್ಯಕ್ರಮದ ಪ್ರಕಾರ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲು ಎನ್‌ಸಿಇಆರ್‌ಟಿ (NCERT)ರಚಿಸಿರುವ ನೂತನ ಸಮಿತಿಯಲ್ಲಿ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ(Sudha Murty), ಸಂಗೀತ ನಿರ್ದೇಶಕ, ಗಾಯಕ ಶಂಕರ್ ಮಹಾದೇವನ್ (Shankar Mahadevan), ಅರ್ಥಶಾಸ್ತ್ರಜ್ಞ ಸಂಜೀವ್ ಸನ್ಯಾಲ್ ಸೇರಿದಂತೆ 16 ಮಂದಿ ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 19 ಸದಸ್ಯರ ರಾಷ್ಟ್ರೀಯ ಪಠ್ಯಕ್ರಮ ಮತ್ತು ಬೋಧನಾ ಕಲಿಕಾ ಸಾಮಗ್ರಿ ಸಮಿತಿ (NSTC)ಗೆ ರಾಷ್ಟ್ರೀಯ ಶೈಕ್ಷಣಿಕ ಯೋಜನೆ ಮತ್ತು ಆಡಳಿತ ಸಂಸ್ಥೆ (NIEPA) ಕುಲಪತಿ ಎಂಸಿ ಪಂತ್ ನೇತೃತ್ವ ವಹಿಸಲಿದ್ದಾರೆ. ಈ ಸಮಿತಿ 3 ರಿಂದ 12 ನೇ ತರಗತಿಗಳಿಗೆ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಿದೆ.

ಪಠ್ಯಪುಸ್ತಕಗಳು ಮತ್ತು ಇತರ ಬೋಧನಾ ಕಲಿಕಾ ಸಾಮಗ್ರಿಗಳ ಬಗ್ಗೆ ಈ ಸಮಿತಿ ತೀರ್ಮಾನ ಕೈಗೊಳ್ಳಲಿದ್ದು, ಇವುಗಳನ್ನು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ನಿಯಮಗಳ ಪ್ರಕಾರ ಪ್ರಕಟಿಸಿ ಬಳಸುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ.

ಪ್ರತಿ ಪಠ್ಯಕ್ರಮದ ಪ್ರದೇಶಕ್ಕೆ ಬೋಧನೆ-ಕಲಿಕೆ ಸಾಮಗ್ರಿಗಳ ಅಭಿವೃದ್ಧಿಯಲ್ಲಿ ಪಠ್ಯಕ್ರಮದ ಪ್ರದೇಶ ಗುಂಪುಗಳು (CAGs) ಎನ್ ಎಸ್ ಟಿಸಿಗೆ ಗೆ ಸಹಾಯ ಮಾಡುತ್ತದೆ. ಈ ಗುಂಪುಗಳು ಸೂಕ್ತ ತಜ್ಞರನ್ನು ಒಳಗೊಂಡಿದ್ದು, ಎನ್‌ಸಿಇಆರ್‌ಟಿಯ ನೆರವಿನೊಂದಿಗೆ ಎನ್‌ಎಸ್‌ಟಿಸಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ನೇಮಕ ಮಾಡುತ್ತದೆ ಎಂದು ಅಧಿಕಾರಿ ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020 ರ ಅನುಷ್ಠಾನದ ಭಾಗವಾಗಿ ಕೆ ಕಸ್ತೂರಿರಂಗನ್ ನೇತೃತ್ವದ ಸ್ಟೀರಿಂಗ್ ಸಮಿತಿಯು ಅಭಿವೃದ್ಧಿಪಡಿಸಿದ ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿನೊಂದಿಗೆ (ಎನ್‌ಸಿಎಫ್-ಎಸ್‌ಇ) ಪಠ್ಯಕ್ರಮವನ್ನು ಜೋಡಿಸಲು ಸಮಿತಿಯು ಕೆಲಸ ಮಾಡುತ್ತದೆ.

ಅಂತಿಮ NCF-SE ಅನ್ನು ಈಗಾಗಲೇ ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ಸಲ್ಲಿಸಲಾಗಿದೆಯಾದರೂ, ಅದನ್ನು ಸಾರ್ವಜನಿಕ ಡೊಮೇನ್‌ನಲ್ಲಿ ಬಿಡುಗಡೆ ಮಾಡಬೇಕಾಗಿದೆ. ಚೌಕಟ್ಟಿನ ಕರಡು ಏಪ್ರಿಲ್‌ನಲ್ಲಿ ಬಿಡುಗಡೆಯಾಯಿತು. ಪ್ರಿನ್ಸ್‌ಟನ್ ವಿಶ್ವವಿದ್ಯಾನಿಲಯದ ಗಣಿತಶಾಸ್ತ್ರದ ಪ್ರಾಧ್ಯಾಪಕ ಮಂಜುಲ್ ಭಾರ್ಗವ್ ಅವರು ಸಮಿತಿಯ ಉಪಾಧ್ಯಕ್ಷರಾಗಿದ್ದಾರೆ. ಗಣಿತಶಾಸ್ತ್ರಜ್ಞೆ ಸುಜಾತಾ ರಾಮದೊರೈ, ಬ್ಯಾಡ್ಮಿಂಟನ್ ಆಟಗಾರ್ತಿ ಯು ವಿಮಲ್ ಕುಮಾರ್, ನೀತಿ ಅಧ್ಯಯನ ಕೇಂದ್ರದ ಅಧ್ಯಕ್ಷ ಎಂಡಿ ಶ್ರೀನಿವಾಸ್ ಮತ್ತು ಭಾರತೀಯ ಭಾಷಾ ಸಮಿತಿಯ ಅಧ್ಯಕ್ಷ ಚಾಮು ಕೃಷ್ಣ ಶಾಸ್ತ್ರಿ ಇದರಲ್ಲಿ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: Viral: ಸರಳ ಸಜ್ಜನಿಕೆಯ ಸುಧಾ ಮೂರ್ತಿ ಟ್ರೋಲ್ ಆಗುತ್ತಿರುವುದೇಕೆ? ಆ್ಯನ್ಸರ್ ಈಸ್ ಸೋ ಸಿಂಪಲ್!

ಮೇ ತಿಂಗಳಲ್ಲಿ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಿಂದ ಹಲವಾರು ವಿಷಯಗಳು ಮತ್ತು ಭಾಗಗಳನ್ನು ಕೈಬಿಡುವುದು ವಿವಾದವನ್ನು ಹುಟ್ಟುಹಾಕಿತು. ಪ್ರತಿಪಕ್ಷಗಳು ಬಿಜೆಪಿ ನೇತೃತ್ವದ ಕೇಂದ್ರವನ್ನು ಸೇಡಿನ ಕೆಲಸ ಎಂದು ದೂಷಿಸಿದ್ದವು. ತರ್ಕಬದ್ಧಗೊಳಿಸುವ ವ್ಯಾಯಾಮದ ಭಾಗವಾಗಿ ಮಾಡಲಾದ ಬದಲಾವಣೆಗಳನ್ನು ಸೂಚಿಸಲಾಗಿದ್ದರೂ, ಕೆಲವು ವಿವಾದಾತ್ಮಕ ಅಳಿಸುವಿಕೆಗಳನ್ನು ಉಲ್ಲೇಖಿಸಲಾಗಿಲ್ಲ ಎಂಬ ಅಂಶದ ಬಗ್ಗೆ ವಿವಾದವೆದ್ದಿತ್ತು. ಪಠ್ಯಪುಸ್ತಕಗಳಲ್ಲಿನ ಲೋಪಗಳು ಉದ್ದೇಶಪೂರ್ವಕವಾಗಿಲ್ಲ ಎಂದು ಎನ್‌ಸಿಇಆರ್‌ಟಿ ಒಪ್ಪಿಕೊಂಡರೂ, ಅವರು ಅಳಿಸುವಿಕೆಗಳನ್ನು ಮತ್ತೆ ಸೇರಿಸವು ನಿರಾಕರಿಸಿದರು. ಆದಾಗ್ಯೂ, ತಜ್ಞರು ನೀಡಿದ ಶಿಫಾರಸುಗಳ ಆಧಾರದ ಮೇಲೆ ಆ ಪಠ್ಯಭಾಗಗಳನ್ನು ತೆಗೆದುಹಾಕಲಾಗಿದೆ ಎಂದು NCERT ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!