AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಣಿಸಲು ಪದಗಳಿಲ್ಲ: ನೂತನ ಸಂಸತ್ ಭವನಕ್ಕೆ ಭೇಟಿ ನೀಡಿದ ಸುಧಾ ಮೂರ್ತಿ

Sudha Murty:ಇದು ತುಂಬಾ ಸುಂದರವಾಗಿದೆ. ವರ್ಣಿಸಲು ಪದಗಳಿಲ್ಲ. ನಾನು ಇದನ್ನು ಬಹಳ ದಿನಗಳಿಂದ ನೋಡಬೇಕೆಂದು ಬಯಸಿದ್ದೆ. ಇದು ಇಂದು ಕನಸು ನನಸಾಯಿತು. ಇದು ಕಲೆ, ಸಂಸ್ಕೃತಿ, ಭಾರತೀಯ ಇತಿಹಾಸ - ಎಲ್ಲವೂ ಸುಂದರವಾಗಿದೆ ಎಂದು ಸುಧಾಮೂರ್ತಿ ಹೊಸ ಸಂಸತ್ ಕಟ್ಟಡವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವರ್ಣಿಸಲು ಪದಗಳಿಲ್ಲ: ನೂತನ ಸಂಸತ್ ಭವನಕ್ಕೆ ಭೇಟಿ ನೀಡಿದ ಸುಧಾ ಮೂರ್ತಿ
ಸುಧಾ ಮೂರ್ತಿ
Follow us
ರಶ್ಮಿ ಕಲ್ಲಕಟ್ಟ
|

Updated on:Dec 08, 2023 | 1:33 PM

ದೆಹಲಿ ಡಿಸೆಂಬರ್ 08: ಇನ್ಪೋಸಿಸ್ (Infosys)​ ಸಂಸ್ಥಾಪಕಿ,ಲೇಖಕಿ ಮತ್ತು ಸಮಾಜ ಸೇವಕಿ ಸುಧಾ ಮೂರ್ತಿ (Sudha Murty) ಅವರು ಇಂದು(ಶುಕ್ರವಾರ) ನವದೆಹಲಿಯ ಹೊಸ ಸಂಸತ್ ಕಟ್ಟಡಕ್ಕೆ(New parliament building) ಭೇಟಿ ನೀಡಿದ್ದಾರೆ. ಇದು ತುಂಬಾ ಸುಂದರವಾಗಿದೆ. ವರ್ಣಿಸಲು ಪದಗಳಿಲ್ಲ. ನಾನು ಇದನ್ನು ಬಹಳ ದಿನಗಳಿಂದ ನೋಡಬೇಕೆಂದು ಬಯಸಿದ್ದೆ. ಇದು ಇಂದು ಕನಸು ನನಸಾಯಿತು. ಹೊಸದಾಗಿ ನಿರ್ಮಿಸಲಾದ ಸಂಸತ್ ಕಟ್ಟಡ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಅವರು ಇದು ಸುಂದರವಾಗಿದೆ… ಇದು ಕಲೆ, ಸಂಸ್ಕೃತಿ, ಭಾರತೀಯ ಇತಿಹಾಸ – ಎಲ್ಲವೂ ಸುಂದರವಾಗಿದೆ” ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾ ಮೂರ್ತಿ ಅವರು ಹೊಸ ಕಟ್ಟಡದ ಬಗ್ಗೆ ತಮ್ಮ ವಿಸ್ಮಯ ಮತ್ತು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಕಟ್ಟಡವನ್ನು ನಿರ್ಮಿಸಿದ ಅವಧಿಯು ನಿಜವಾಗಿಯೂ ಗಮನಾರ್ಹವಾದುದು. ಇಷ್ಟು ಕಡಿಮೆ ಅವಧಿಯಲ್ಲಿ, ಅದನ್ನು ಸುಂದರವಾಗಿ ಜೋಡಿಸಲಾಗಿದೆ ಮತ್ತು ಕ್ಯುರೇಟ್ ಮಾಡಲಾಗಿದೆ .ಈ ಎಲ್ಲಾ ವಿಷಯಗಳನ್ನು ನೋಡಲು ನಾನು ಒಂದು ಅಥವಾ ಎರಡು ದಿನಗಳನ್ನು ಕಳೆಯಲು ಬಯಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: Sudha Murty: ಇನ್ಫೋಸಿಸ್​ ಸ್ಥಾಪಕಿ, ಲೇಖಕಿ ಸುಧಾಮೂರ್ತಿ ಜನ್ಮದಿನ; ನಿಮಗೆ ತಿಳಿಯದ ಕೆಲ ಸಂಗತಿಗಳು ಇಲ್ಲಿವೆ..

ಮಾಧ್ಯಮ ಪ್ರತಿನಿಧಿಯೊಬ್ಬರು “ಅಧಿಕೃತವಾಗಿ” ಒಳಗೆ ಇರಲು ಇಷ್ಟಪಡುತ್ತೀರಾ ಎಂದು ಕೇಳಿದಾಗ, 73ರ ಹರೆಯದ ಸುಧಾಮೂರ್ತಿ ಕೈಮುಗಿದು ತಲೆ ಅಲ್ಲಾಡಿಸುತ್ತಾ ಈಗ ಹೇಗಿದ್ದೇನೋ ನಾನು ಖುಷಿಯಾಗಿದ್ದೇನೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:24 pm, Fri, 8 December 23

ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್