AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಪರ ಮಾತಾಡಿದ ನಟ-ಸಂಸದ ಸನ್ನಿ ದೇವಲ್​​ಗೆ ವೈ-ಶ್ರೇಣಿ ಭದ್ರತೆ

ಸರ್ಕಾರದ ಹೊಸ ಕಾಯ್ದೆಗಳು ರೈತರನ್ನು ಕೆರಳಿಸಿದ್ದು ಮೂರು ವಾರಗಳಿಂದ ಅವರು ದೆಹಲಿ ಹೊರವಲಯದಲ್ಲಿ ಭಾರಿ ಪ್ರಮಾಣದ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬಿನ ಗುರುದಾಸಪುರ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ 64 ವರ್ಷ ವಯಸ್ಸಿನ ಸನ್ನಿ, ಟ್ವೀಟ್ ಮಾಡಿ ಸರ್ಕಾರದ ಕ್ರಮವನ್ನು ಬೆಂಬಲಿಸಿದ್ದರು.

ಸರ್ಕಾರದ ಪರ ಮಾತಾಡಿದ ನಟ-ಸಂಸದ ಸನ್ನಿ ದೇವಲ್​​ಗೆ ವೈ-ಶ್ರೇಣಿ ಭದ್ರತೆ
ಬಿಜೆಪಿ ಸಂಸದ ಸನ್ನಿ ಡಿಯೋಲ್
ಅರುಣ್​ ಕುಮಾರ್​ ಬೆಳ್ಳಿ
| Edited By: |

Updated on:Dec 16, 2020 | 9:42 PM

Share

ಚಂಡೀಗಡ: ನೂತನ ಕೃಷಿ ಕಾನೂನುಗಳ ಪರ ಮಾತಾಡಿ ಉತ್ತರ ಭಾರತದ ರೈತರ ಕೋಪಕ್ಕೆ ಗುರಿಯಾಗಿರುವ ಬಾಲಿವುಡ್ ನಟ ಮತ್ತು ಬಿಜಿಪಿ ಸಂಸದ ಸನ್ನಿ ದೇವಲ್ ಅವರಿಗೆ ನೀಡಿದ್ದ ಭದ್ರತೆಯನ್ನು ಕೇಂದ್ರ ಸರ್ಕಾರದ ವೈ-ಕೆಟೆಗಿರಿಗೆ ಹೆಚ್ಚಿಸಿದೆ. ಸರ್ಕಾರದ ಹೊಸ ಕಾಯ್ದೆಗಳು ರೈತರನ್ನು ಕೆರಳಿಸಿದ್ದು ಮೂರು ವಾರಗಳಿಂದ ಅವರು ದೆಹಲಿ ಹೊರವಲಯದಲ್ಲಿ ಭಾರಿ ಪ್ರಮಾಣದ ಪ್ರತಿಭಟನೆ ನಡೆಸುತ್ತಿದ್ದಾರೆ.

ಪಂಜಾಬಿನ ಗುರುದಾಸಪುರ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ 64 ವರ್ಷ ವಯಸ್ಸಿನ ಸನ್ನಿ, ಟ್ವೀಟ್ ಮಾಡಿ ಸರ್ಕಾರದ ಕ್ರಮವನ್ನು ಬೆಂಬಲಿಸಿದ್ದರು.

‘ರೈತರು ನಡೆಸುತ್ತಿರುವ ಮುಷ್ಕರವನ್ನು ಬಹಳ ಜನರು ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡು ತೊಂದರೆ ಸೃಷ್ಟಿಸುತ್ತಿರುವುದು ನನಗೆ ಗೊತ್ತಿದೆ. ಅವರಿಗೆ ತಮ್ಮ ಸ್ವಾರ್ಥಸಾಧನೆಯ ಯೋಚನೆಯಿದೆಯೇ ಹೊರತು ರೈತರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ನಾನು ಯಾವತ್ತಿಗೂ ಪಕ್ಷ ಮತ್ತು ರೈತರೊಂದಿಗಿದ್ದೇನೆ. ನಮ್ಮ ಸರ್ಕಾರ ಹಗಲಿರುಳು ರೈತರ ಹಿತಾಸಕ್ತಿಗಳ ಕುರಿತೇ ಯೋಚಿಸುತ್ತದೆ. ರೈತರೊಂದಿಗೆ ಮಾತುಕತೆ ನಡೆಸಿ ಆದಷ್ಟು ಬೇಗ ಸರ್ಕಾರ ಸಮಸ್ಯೆಯನ್ನು ಇತ್ಯರ್ಥಗೊಳಿಸುತ್ತದೆಂಬ ವಿಶ್ವಾಸ ನನಗಿದೆ’ ಎಂದು ಸನ್ನಿ ಟ್ವೀಟ್ ಮಾಡಿದ್ದರು.

ಧರ್ಮೇಂದ್ರ ಮತ್ತು ಹೇಮಾ ಮಾಲಿನಿ

ಸನ್ನಿ ಅವರ ಟ್ವೀಟ್​ ನಂತರ ಅವರ ತಂದೆ, ಲೆಜೆಂಡರಿ ಬಾಲಿವುಡ್ ನಟ ಮತ್ತು 2004 ರಿಂದ 2009 ರವರೆಗೆ ಬಿಜೆಪಿಯ ಸಂಸದರಾಗಿದ್ದ ಧರ್ಮೇಂದ್ರ, ‘ರೈತರ ಅನುಭವಿಸುತ್ತಿರುವ ತೊಂದರೆ ನನ್ನಲ್ಲಿ ತೀವ್ರ ಕಳವಳವನ್ನುಂಟು ಮಾಡಿವೆ’ ಎಂದು ಟ್ವೀಟ್ ಮಾಡಿದ್ದರು.

ಇದಕ್ಕೆ ಮುಂಚಿನ ಟ್ವೀಟ್​ನಲ್ಲಿ ಧರ್ಮೇಂದ್ರ, ರೈತರ ಪರ ವಹಿಸಿ ಮಾತಾಡುತ್ತಾ, ಸರ್ಕಾರ ಆದಷ್ಟು ಬೇಗ ಸಮಸ್ಯೆಯನ್ನು ಇತ್ಯರ್ಥಗೊಳಿಸಬೇಕೆಂದು ಹೇಳಿದ್ದರು. ಆದರೆ ಅದು ಟ್ರೋಲ್ ಆಗಲಾರಂಭಿಸಿದ ಕೂಡಲೇ ಡಿಲೀಟ್ ಮಾಡಿದ್ದರು. ಅವರ ತಾರಾಪತ್ನಿ ಮತ್ತು ಬಿಜೆಪಿ ಸಂಸದೆಯೂ ಆಗಿರುವ ಹೇಮಾ ಮಾಲಿನಿ ಸದರಿ ವಿಷಯದ ಬಗ್ಗೆ ಇದುವರೆಗೆ ಮೌನ ತಳೆದಿದ್ದಾರೆ.

ದೆಹಲಿ ಹೊರಭಾಗದಲ್ಲಿ ಮುಷ್ಕರ ನಿರತ ರೈತರು

ನೂತನ ಕೃಷಿ ಕಾಯ್ದೆಗಳು ಮಾರಕವಾಗಿವೆ, ಕಾರ್ಪೊರೇಟ್​ಗಳ ಕಪಿಮುಷ್ಟಿಗೆ ಸಿಕ್ಕು ಶೋಷಣೆಗೊಳಬೇಕಾಗುತ್ತದೆ ಎಂದು ವಾದಿಸುತ್ತಿರುವ ರೈತರು, ಮೂರು ವಾರಗಳಿಂದ ಅಹೋರಾತ್ರಿ ಮುಷ್ಕರ ನಡೆಸುತ್ತಿದ್ದಾರೆ.

Published On - 9:42 pm, Wed, 16 December 20

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ