AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಪರ ಮಾತಾಡಿದ ನಟ-ಸಂಸದ ಸನ್ನಿ ದೇವಲ್​​ಗೆ ವೈ-ಶ್ರೇಣಿ ಭದ್ರತೆ

ಸರ್ಕಾರದ ಹೊಸ ಕಾಯ್ದೆಗಳು ರೈತರನ್ನು ಕೆರಳಿಸಿದ್ದು ಮೂರು ವಾರಗಳಿಂದ ಅವರು ದೆಹಲಿ ಹೊರವಲಯದಲ್ಲಿ ಭಾರಿ ಪ್ರಮಾಣದ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬಿನ ಗುರುದಾಸಪುರ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ 64 ವರ್ಷ ವಯಸ್ಸಿನ ಸನ್ನಿ, ಟ್ವೀಟ್ ಮಾಡಿ ಸರ್ಕಾರದ ಕ್ರಮವನ್ನು ಬೆಂಬಲಿಸಿದ್ದರು.

ಸರ್ಕಾರದ ಪರ ಮಾತಾಡಿದ ನಟ-ಸಂಸದ ಸನ್ನಿ ದೇವಲ್​​ಗೆ ವೈ-ಶ್ರೇಣಿ ಭದ್ರತೆ
ಬಿಜೆಪಿ ಸಂಸದ ಸನ್ನಿ ಡಿಯೋಲ್
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ| Edited By: |

Updated on:Dec 16, 2020 | 9:42 PM

Share

ಚಂಡೀಗಡ: ನೂತನ ಕೃಷಿ ಕಾನೂನುಗಳ ಪರ ಮಾತಾಡಿ ಉತ್ತರ ಭಾರತದ ರೈತರ ಕೋಪಕ್ಕೆ ಗುರಿಯಾಗಿರುವ ಬಾಲಿವುಡ್ ನಟ ಮತ್ತು ಬಿಜಿಪಿ ಸಂಸದ ಸನ್ನಿ ದೇವಲ್ ಅವರಿಗೆ ನೀಡಿದ್ದ ಭದ್ರತೆಯನ್ನು ಕೇಂದ್ರ ಸರ್ಕಾರದ ವೈ-ಕೆಟೆಗಿರಿಗೆ ಹೆಚ್ಚಿಸಿದೆ. ಸರ್ಕಾರದ ಹೊಸ ಕಾಯ್ದೆಗಳು ರೈತರನ್ನು ಕೆರಳಿಸಿದ್ದು ಮೂರು ವಾರಗಳಿಂದ ಅವರು ದೆಹಲಿ ಹೊರವಲಯದಲ್ಲಿ ಭಾರಿ ಪ್ರಮಾಣದ ಪ್ರತಿಭಟನೆ ನಡೆಸುತ್ತಿದ್ದಾರೆ.

ಪಂಜಾಬಿನ ಗುರುದಾಸಪುರ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ 64 ವರ್ಷ ವಯಸ್ಸಿನ ಸನ್ನಿ, ಟ್ವೀಟ್ ಮಾಡಿ ಸರ್ಕಾರದ ಕ್ರಮವನ್ನು ಬೆಂಬಲಿಸಿದ್ದರು.

‘ರೈತರು ನಡೆಸುತ್ತಿರುವ ಮುಷ್ಕರವನ್ನು ಬಹಳ ಜನರು ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡು ತೊಂದರೆ ಸೃಷ್ಟಿಸುತ್ತಿರುವುದು ನನಗೆ ಗೊತ್ತಿದೆ. ಅವರಿಗೆ ತಮ್ಮ ಸ್ವಾರ್ಥಸಾಧನೆಯ ಯೋಚನೆಯಿದೆಯೇ ಹೊರತು ರೈತರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ನಾನು ಯಾವತ್ತಿಗೂ ಪಕ್ಷ ಮತ್ತು ರೈತರೊಂದಿಗಿದ್ದೇನೆ. ನಮ್ಮ ಸರ್ಕಾರ ಹಗಲಿರುಳು ರೈತರ ಹಿತಾಸಕ್ತಿಗಳ ಕುರಿತೇ ಯೋಚಿಸುತ್ತದೆ. ರೈತರೊಂದಿಗೆ ಮಾತುಕತೆ ನಡೆಸಿ ಆದಷ್ಟು ಬೇಗ ಸರ್ಕಾರ ಸಮಸ್ಯೆಯನ್ನು ಇತ್ಯರ್ಥಗೊಳಿಸುತ್ತದೆಂಬ ವಿಶ್ವಾಸ ನನಗಿದೆ’ ಎಂದು ಸನ್ನಿ ಟ್ವೀಟ್ ಮಾಡಿದ್ದರು.

ಧರ್ಮೇಂದ್ರ ಮತ್ತು ಹೇಮಾ ಮಾಲಿನಿ

ಸನ್ನಿ ಅವರ ಟ್ವೀಟ್​ ನಂತರ ಅವರ ತಂದೆ, ಲೆಜೆಂಡರಿ ಬಾಲಿವುಡ್ ನಟ ಮತ್ತು 2004 ರಿಂದ 2009 ರವರೆಗೆ ಬಿಜೆಪಿಯ ಸಂಸದರಾಗಿದ್ದ ಧರ್ಮೇಂದ್ರ, ‘ರೈತರ ಅನುಭವಿಸುತ್ತಿರುವ ತೊಂದರೆ ನನ್ನಲ್ಲಿ ತೀವ್ರ ಕಳವಳವನ್ನುಂಟು ಮಾಡಿವೆ’ ಎಂದು ಟ್ವೀಟ್ ಮಾಡಿದ್ದರು.

ಇದಕ್ಕೆ ಮುಂಚಿನ ಟ್ವೀಟ್​ನಲ್ಲಿ ಧರ್ಮೇಂದ್ರ, ರೈತರ ಪರ ವಹಿಸಿ ಮಾತಾಡುತ್ತಾ, ಸರ್ಕಾರ ಆದಷ್ಟು ಬೇಗ ಸಮಸ್ಯೆಯನ್ನು ಇತ್ಯರ್ಥಗೊಳಿಸಬೇಕೆಂದು ಹೇಳಿದ್ದರು. ಆದರೆ ಅದು ಟ್ರೋಲ್ ಆಗಲಾರಂಭಿಸಿದ ಕೂಡಲೇ ಡಿಲೀಟ್ ಮಾಡಿದ್ದರು. ಅವರ ತಾರಾಪತ್ನಿ ಮತ್ತು ಬಿಜೆಪಿ ಸಂಸದೆಯೂ ಆಗಿರುವ ಹೇಮಾ ಮಾಲಿನಿ ಸದರಿ ವಿಷಯದ ಬಗ್ಗೆ ಇದುವರೆಗೆ ಮೌನ ತಳೆದಿದ್ದಾರೆ.

ದೆಹಲಿ ಹೊರಭಾಗದಲ್ಲಿ ಮುಷ್ಕರ ನಿರತ ರೈತರು

ನೂತನ ಕೃಷಿ ಕಾಯ್ದೆಗಳು ಮಾರಕವಾಗಿವೆ, ಕಾರ್ಪೊರೇಟ್​ಗಳ ಕಪಿಮುಷ್ಟಿಗೆ ಸಿಕ್ಕು ಶೋಷಣೆಗೊಳಬೇಕಾಗುತ್ತದೆ ಎಂದು ವಾದಿಸುತ್ತಿರುವ ರೈತರು, ಮೂರು ವಾರಗಳಿಂದ ಅಹೋರಾತ್ರಿ ಮುಷ್ಕರ ನಡೆಸುತ್ತಿದ್ದಾರೆ.

Published On - 9:42 pm, Wed, 16 December 20

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!