AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಫೇಲ್, ಶಬರಿಮಲೆ ಕೇಸ್​ಗಳ ‘ಸುಪ್ರೀಂ​’ ತೀರ್ಪು ಇಂದು

ಸುಪ್ರೀಂಕೋರ್ಟ್​ನಲ್ಲಿಂದು ಮಹತ್ವದ ಪ್ರಕರಣಗಳ ತೀರ್ಪು ನೀಡಲಿದೆ. ರಫೇಲ್ ಯುದ್ಧ ವಿಮಾನಗಳ ಖರೀದಿ ಬಗ್ಗೆ, ಕೇರಳದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶಾವಕಾಶ ಪ್ರಕರಣದ ಬಗ್ಗೆ ಸುಪ್ರೀಂ ನೀಡೋ ತೀರ್ಪು ಕುತೂಹಲ ಹೆಚ್ಚಿಸಿದೆ. ರಫೇಲ್ ಅವ್ಯವಹಾರದ ಬಗ್ಗೆ ತೀರ್ಪು: ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಪ್ರಶಾಂತ್ ಭೂಷಣ್, ಅರುಣ್ ಶೌರಿ, ಯಶವಂತ್ ಸಿನ್ಹಾ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ರು. ಇದ್ರ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ರಫೇಲ್ ಯುದ್ಧ ವಿಮಾನ ಖರೀದಿಗೆ ತನ್ನ […]

ರಫೇಲ್, ಶಬರಿಮಲೆ ಕೇಸ್​ಗಳ ‘ಸುಪ್ರೀಂ​’ ತೀರ್ಪು ಇಂದು
ಸಾಧು ಶ್ರೀನಾಥ್​
|

Updated on:Nov 14, 2019 | 11:27 AM

Share

ಸುಪ್ರೀಂಕೋರ್ಟ್​ನಲ್ಲಿಂದು ಮಹತ್ವದ ಪ್ರಕರಣಗಳ ತೀರ್ಪು ನೀಡಲಿದೆ. ರಫೇಲ್ ಯುದ್ಧ ವಿಮಾನಗಳ ಖರೀದಿ ಬಗ್ಗೆ, ಕೇರಳದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶಾವಕಾಶ ಪ್ರಕರಣದ ಬಗ್ಗೆ ಸುಪ್ರೀಂ ನೀಡೋ ತೀರ್ಪು ಕುತೂಹಲ ಹೆಚ್ಚಿಸಿದೆ.

ರಫೇಲ್ ಅವ್ಯವಹಾರದ ಬಗ್ಗೆ ತೀರ್ಪು: ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಪ್ರಶಾಂತ್ ಭೂಷಣ್, ಅರುಣ್ ಶೌರಿ, ಯಶವಂತ್ ಸಿನ್ಹಾ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ರು. ಇದ್ರ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ರಫೇಲ್ ಯುದ್ಧ ವಿಮಾನ ಖರೀದಿಗೆ ತನ್ನ ಒಪ್ಪಿಗೆ ನೀಡಿ ತೀರ್ಪು ನೀಡಿತ್ತು. ಇದರಿಂದಾಗಿ ಮೋದಿ ಸರ್ಕಾರವು ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಸುಪ್ರೀಂಕೋರ್ಟ್ ಟೆಸ್ಟ್​ನಲ್ಲಿ ಪಾಸಾಗಿತ್ತು. ಸುಪ್ರೀಂಕೋರ್ಟ್ ತೀರ್ಪಿನ ಮರುಪರಿಶೀಲನೆ ಕೋರಿ ಅರುಣ್ ಶೌರಿ, ಯಶವಂತ್ ಸಿನ್ಹಾ ಅರ್ಜಿ ಸಲ್ಲಿಸಿದ್ರು. ಈ ಅರ್ಜಿ ಬಗ್ಗೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದೆ. ತೀರ್ಪಿನ ಮರುಪರಿಶೀಲನಾ ಅರ್ಜಿಯ ಬಗ್ಗೆ ಇಂದು ಸುಪ್ರೀಂಕೋರ್ಟ್ ತೀರ್ಪು ನೀಡಲಿದೆ.

ಶಬರಿಮಲೆ ತೀರ್ಪಿನ ಬಗ್ಗೆಯೂ ಕೌತುಕ: ಎರಡನೆಯದಾಗಿ ಕೇರಳದ ಶಬರಿಮಲೆ ದೇವಾಲಯಕ್ಕೆ 10ರಿಂದ 50 ವರ್ಷದೊಳಗಿನ ಮಹಿಳೆಯರಿಗೂ ಪ್ರವೇಶಾವಕಾಶ ನೀಡಿ ಕಳೆದ ವರ್ಷವೇ ಸುಪ್ರೀಂ ತೀರ್ಪು ನೀಡಿದೆ. ಈ ತೀರ್ಪಿನ ಮರುಪರಿಶೀಲನೆ ಕೋರಿ 49 ಅರ್ಜಿಗಳು ಸಲ್ಲಿಕೆಯಾಗಿದ್ವು. ಇವುಗಳ ಬಗ್ಗೆ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಲಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ, ರೋಹಿಂಟನ್ ಫಾಲಿ ನಾರಿಮನ್, ಜಸ್ಟೀಸ್ ಎ.ಎಂ.ಖಾನ್ ವಿಲಕರ್, ಜಸ್ಟೀಸ್ ಡಿ.ವೈ.ಚಂದ್ರಚೂಢ ಹಾಗೂ ಜಸ್ಟೀಸ್ ಇಂದೂ ಮಲ್ಹೋತ್ರಾ ಅವರನ್ನೊಳಗೊಂಡ ಪೀಠವು ಮರುಪರಿಶೀಲನಾ ಅರ್ಜಿಯ ಬಗ್ಗೆ ತೀರ್ಪು ನೀಡಲಿದೆ.

Published On - 7:17 am, Thu, 14 November 19

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?