AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಫೇಲ್, ಶಬರಿಮಲೆ ಕೇಸ್​ಗಳ ‘ಸುಪ್ರೀಂ​’ ತೀರ್ಪು ಇಂದು

ಸುಪ್ರೀಂಕೋರ್ಟ್​ನಲ್ಲಿಂದು ಮಹತ್ವದ ಪ್ರಕರಣಗಳ ತೀರ್ಪು ನೀಡಲಿದೆ. ರಫೇಲ್ ಯುದ್ಧ ವಿಮಾನಗಳ ಖರೀದಿ ಬಗ್ಗೆ, ಕೇರಳದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶಾವಕಾಶ ಪ್ರಕರಣದ ಬಗ್ಗೆ ಸುಪ್ರೀಂ ನೀಡೋ ತೀರ್ಪು ಕುತೂಹಲ ಹೆಚ್ಚಿಸಿದೆ. ರಫೇಲ್ ಅವ್ಯವಹಾರದ ಬಗ್ಗೆ ತೀರ್ಪು: ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಪ್ರಶಾಂತ್ ಭೂಷಣ್, ಅರುಣ್ ಶೌರಿ, ಯಶವಂತ್ ಸಿನ್ಹಾ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ರು. ಇದ್ರ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ರಫೇಲ್ ಯುದ್ಧ ವಿಮಾನ ಖರೀದಿಗೆ ತನ್ನ […]

ರಫೇಲ್, ಶಬರಿಮಲೆ ಕೇಸ್​ಗಳ ‘ಸುಪ್ರೀಂ​’ ತೀರ್ಪು ಇಂದು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 14, 2019 | 11:27 AM

Share

ಸುಪ್ರೀಂಕೋರ್ಟ್​ನಲ್ಲಿಂದು ಮಹತ್ವದ ಪ್ರಕರಣಗಳ ತೀರ್ಪು ನೀಡಲಿದೆ. ರಫೇಲ್ ಯುದ್ಧ ವಿಮಾನಗಳ ಖರೀದಿ ಬಗ್ಗೆ, ಕೇರಳದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶಾವಕಾಶ ಪ್ರಕರಣದ ಬಗ್ಗೆ ಸುಪ್ರೀಂ ನೀಡೋ ತೀರ್ಪು ಕುತೂಹಲ ಹೆಚ್ಚಿಸಿದೆ.

ರಫೇಲ್ ಅವ್ಯವಹಾರದ ಬಗ್ಗೆ ತೀರ್ಪು: ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಪ್ರಶಾಂತ್ ಭೂಷಣ್, ಅರುಣ್ ಶೌರಿ, ಯಶವಂತ್ ಸಿನ್ಹಾ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ರು. ಇದ್ರ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ರಫೇಲ್ ಯುದ್ಧ ವಿಮಾನ ಖರೀದಿಗೆ ತನ್ನ ಒಪ್ಪಿಗೆ ನೀಡಿ ತೀರ್ಪು ನೀಡಿತ್ತು. ಇದರಿಂದಾಗಿ ಮೋದಿ ಸರ್ಕಾರವು ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಸುಪ್ರೀಂಕೋರ್ಟ್ ಟೆಸ್ಟ್​ನಲ್ಲಿ ಪಾಸಾಗಿತ್ತು. ಸುಪ್ರೀಂಕೋರ್ಟ್ ತೀರ್ಪಿನ ಮರುಪರಿಶೀಲನೆ ಕೋರಿ ಅರುಣ್ ಶೌರಿ, ಯಶವಂತ್ ಸಿನ್ಹಾ ಅರ್ಜಿ ಸಲ್ಲಿಸಿದ್ರು. ಈ ಅರ್ಜಿ ಬಗ್ಗೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದೆ. ತೀರ್ಪಿನ ಮರುಪರಿಶೀಲನಾ ಅರ್ಜಿಯ ಬಗ್ಗೆ ಇಂದು ಸುಪ್ರೀಂಕೋರ್ಟ್ ತೀರ್ಪು ನೀಡಲಿದೆ.

ಶಬರಿಮಲೆ ತೀರ್ಪಿನ ಬಗ್ಗೆಯೂ ಕೌತುಕ: ಎರಡನೆಯದಾಗಿ ಕೇರಳದ ಶಬರಿಮಲೆ ದೇವಾಲಯಕ್ಕೆ 10ರಿಂದ 50 ವರ್ಷದೊಳಗಿನ ಮಹಿಳೆಯರಿಗೂ ಪ್ರವೇಶಾವಕಾಶ ನೀಡಿ ಕಳೆದ ವರ್ಷವೇ ಸುಪ್ರೀಂ ತೀರ್ಪು ನೀಡಿದೆ. ಈ ತೀರ್ಪಿನ ಮರುಪರಿಶೀಲನೆ ಕೋರಿ 49 ಅರ್ಜಿಗಳು ಸಲ್ಲಿಕೆಯಾಗಿದ್ವು. ಇವುಗಳ ಬಗ್ಗೆ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಲಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ, ರೋಹಿಂಟನ್ ಫಾಲಿ ನಾರಿಮನ್, ಜಸ್ಟೀಸ್ ಎ.ಎಂ.ಖಾನ್ ವಿಲಕರ್, ಜಸ್ಟೀಸ್ ಡಿ.ವೈ.ಚಂದ್ರಚೂಢ ಹಾಗೂ ಜಸ್ಟೀಸ್ ಇಂದೂ ಮಲ್ಹೋತ್ರಾ ಅವರನ್ನೊಳಗೊಂಡ ಪೀಠವು ಮರುಪರಿಶೀಲನಾ ಅರ್ಜಿಯ ಬಗ್ಗೆ ತೀರ್ಪು ನೀಡಲಿದೆ.

Published On - 7:17 am, Thu, 14 November 19

Follow Us
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ