ರಫೇಲ್, ಶಬರಿಮಲೆ ಕೇಸ್​ಗಳ ‘ಸುಪ್ರೀಂ​’ ತೀರ್ಪು ಇಂದು

ಸುಪ್ರೀಂಕೋರ್ಟ್​ನಲ್ಲಿಂದು ಮಹತ್ವದ ಪ್ರಕರಣಗಳ ತೀರ್ಪು ನೀಡಲಿದೆ. ರಫೇಲ್ ಯುದ್ಧ ವಿಮಾನಗಳ ಖರೀದಿ ಬಗ್ಗೆ, ಕೇರಳದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶಾವಕಾಶ ಪ್ರಕರಣದ ಬಗ್ಗೆ ಸುಪ್ರೀಂ ನೀಡೋ ತೀರ್ಪು ಕುತೂಹಲ ಹೆಚ್ಚಿಸಿದೆ. ರಫೇಲ್ ಅವ್ಯವಹಾರದ ಬಗ್ಗೆ ತೀರ್ಪು: ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಪ್ರಶಾಂತ್ ಭೂಷಣ್, ಅರುಣ್ ಶೌರಿ, ಯಶವಂತ್ ಸಿನ್ಹಾ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ರು. ಇದ್ರ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ರಫೇಲ್ ಯುದ್ಧ ವಿಮಾನ ಖರೀದಿಗೆ ತನ್ನ […]

ರಫೇಲ್, ಶಬರಿಮಲೆ ಕೇಸ್​ಗಳ ‘ಸುಪ್ರೀಂ​’ ತೀರ್ಪು ಇಂದು
ಸಾಧು ಶ್ರೀನಾಥ್​

Updated on: Nov 14, 2019 | 11:27 AM

ಸುಪ್ರೀಂಕೋರ್ಟ್​ನಲ್ಲಿಂದು ಮಹತ್ವದ ಪ್ರಕರಣಗಳ ತೀರ್ಪು ನೀಡಲಿದೆ. ರಫೇಲ್ ಯುದ್ಧ ವಿಮಾನಗಳ ಖರೀದಿ ಬಗ್ಗೆ, ಕೇರಳದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶಾವಕಾಶ ಪ್ರಕರಣದ ಬಗ್ಗೆ ಸುಪ್ರೀಂ ನೀಡೋ ತೀರ್ಪು ಕುತೂಹಲ ಹೆಚ್ಚಿಸಿದೆ.

ರಫೇಲ್ ಅವ್ಯವಹಾರದ ಬಗ್ಗೆ ತೀರ್ಪು:
ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಪ್ರಶಾಂತ್ ಭೂಷಣ್, ಅರುಣ್ ಶೌರಿ, ಯಶವಂತ್ ಸಿನ್ಹಾ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ರು. ಇದ್ರ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ರಫೇಲ್ ಯುದ್ಧ ವಿಮಾನ ಖರೀದಿಗೆ ತನ್ನ ಒಪ್ಪಿಗೆ ನೀಡಿ ತೀರ್ಪು ನೀಡಿತ್ತು. ಇದರಿಂದಾಗಿ ಮೋದಿ ಸರ್ಕಾರವು ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಸುಪ್ರೀಂಕೋರ್ಟ್ ಟೆಸ್ಟ್​ನಲ್ಲಿ ಪಾಸಾಗಿತ್ತು. ಸುಪ್ರೀಂಕೋರ್ಟ್ ತೀರ್ಪಿನ ಮರುಪರಿಶೀಲನೆ ಕೋರಿ ಅರುಣ್ ಶೌರಿ, ಯಶವಂತ್ ಸಿನ್ಹಾ ಅರ್ಜಿ ಸಲ್ಲಿಸಿದ್ರು. ಈ ಅರ್ಜಿ ಬಗ್ಗೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದೆ. ತೀರ್ಪಿನ ಮರುಪರಿಶೀಲನಾ ಅರ್ಜಿಯ ಬಗ್ಗೆ ಇಂದು ಸುಪ್ರೀಂಕೋರ್ಟ್ ತೀರ್ಪು ನೀಡಲಿದೆ.

ಶಬರಿಮಲೆ ತೀರ್ಪಿನ ಬಗ್ಗೆಯೂ ಕೌತುಕ:
ಎರಡನೆಯದಾಗಿ ಕೇರಳದ ಶಬರಿಮಲೆ ದೇವಾಲಯಕ್ಕೆ 10ರಿಂದ 50 ವರ್ಷದೊಳಗಿನ ಮಹಿಳೆಯರಿಗೂ ಪ್ರವೇಶಾವಕಾಶ ನೀಡಿ ಕಳೆದ ವರ್ಷವೇ ಸುಪ್ರೀಂ ತೀರ್ಪು ನೀಡಿದೆ. ಈ ತೀರ್ಪಿನ ಮರುಪರಿಶೀಲನೆ ಕೋರಿ 49 ಅರ್ಜಿಗಳು ಸಲ್ಲಿಕೆಯಾಗಿದ್ವು. ಇವುಗಳ ಬಗ್ಗೆ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಲಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ, ರೋಹಿಂಟನ್ ಫಾಲಿ ನಾರಿಮನ್, ಜಸ್ಟೀಸ್ ಎ.ಎಂ.ಖಾನ್ ವಿಲಕರ್, ಜಸ್ಟೀಸ್ ಡಿ.ವೈ.ಚಂದ್ರಚೂಢ ಹಾಗೂ ಜಸ್ಟೀಸ್ ಇಂದೂ ಮಲ್ಹೋತ್ರಾ ಅವರನ್ನೊಳಗೊಂಡ ಪೀಠವು ಮರುಪರಿಶೀಲನಾ ಅರ್ಜಿಯ ಬಗ್ಗೆ ತೀರ್ಪು ನೀಡಲಿದೆ.

Published On - 7:17 am, Thu, 14 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us