AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಸಂಸತ್ ಭವನದ ಶಿಲಾನ್ಯಾಸಕ್ಕೆ ಅಸ್ತು ಎಂದ ಸುಪ್ರೀಂಕೋರ್ಟ್​

ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸೋಮವಾರ ನಡೆಸಿದ ವಿಚಾರಣೆಯ ವೇಳೆ ಈ ಯೋಜನೆಗೆ ಪರಿಸರ ಇಲಾಖೆಯ ಅನುಮತಿ ಸೇರಿದಂತೆ ಇನ್ನಿತರ ಪ್ರಶ್ನೆಗಳನ್ನು ಆಧಾರವಾಗಿಟ್ಟುಕೊಂಡು 5 ನಿಮಿಷಗಳ ಕಾಲ ನೂತನ ಸಂಸತ್ ಭವನದ ನಿರ್ಮಾಣದ ಕುರಿತು ಸರ್ಕಾರದ ದೃಷ್ಟಿಕೋನವನ್ನು ತಿಳಿಸುವಂತೆ ನ್ಯಾಯಪೀಠ ಮೆಹ್ತಾ ಅವರನ್ನು ಕೇಳಿತು. ಇದರ ಜೊತೆಗೆ ಕೇಂದ್ರ ಸರ್ಕಾರ ಅಗತ್ಯ ದಾಖಲೆಗಳೊಂದಿಗೆ ಮುಂದುವರಿಯಬಹುದು ಎಂದು ನ್ಯಾಯಾಲಯ ತಿಳಿಸಿದೆ.

ನೂತನ ಸಂಸತ್ ಭವನದ ಶಿಲಾನ್ಯಾಸಕ್ಕೆ ಅಸ್ತು ಎಂದ ಸುಪ್ರೀಂಕೋರ್ಟ್​
ಸುಪ್ರೀಂ ಕೋರ್ಟ್​
preethi shettigar
| Edited By: |

Updated on:Dec 10, 2020 | 11:56 AM

Share

ದೆಹಲಿ: ಸಂಸತ್ತಿನ ನೂತನ ಭವನ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲು ಸುಪ್ರೀಂಕೋರ್ಟ್​ ಸೋಮವಾರ ಅನುಮತಿ ನೀಡಿದೆ. ಈ ಕುರಿತು ಬಾಕಿ ಇರುವ ದಾವೆಗಳ ವಿಚಾರಣೆ ಮುಕ್ತಾಯವಾವವರೆಗೂ ಯಾವುದೇ ರೀತಿಯ ನಿರ್ಮಾಣ ಅಥವಾ ತೆರವು ಕೆಲಸಗಳು ನಡೆಸುವುದಿಲ್ಲ ಎಂದು ಸರ್ಕಾರ ಭರವಸೆ ನೀಡಿದ ನಂತರ ಕೇಂದ್ರ ಸರ್ಕಾರದ ವಿಸ್ಟಾ ಯೋಜನೆಯ ಅಡಿಯಲ್ಲಿ ಸಂಸತ್​ನ ನೂತನ ಭವನದ ಶಿಲಾನ್ಯಾಸಕ್ಕೆ ಸುಪ್ರೀಂಕೋರ್ಟ್​ ಅನುಮತಿ ನೀಡಿತು.

ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸದ್ಯಕ್ಕೆ ಶಂಕುಸ್ಥಾಪನೆ ಸಮಾರಂಭ ಮಾತ್ರ ನಡೆಯಲ್ಲಿದೆ. ಯಾವುದೇ ನಿರ್ಮಾಣ, ತೆರವು ಮತ್ತು ಮರಗಳನ್ನು ಕಡಿತ ಮಾಡುವುದಿಲ್ಲ ಎಂದು ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.

ನೂತನ ಸಂಸತ್ ಭವನ ನಿರ್ಮಾಣ ಕುರಿತು ಪರಿಸರ ಇಲಾಖೆಯ ಅನುಮತಿ ವಿಚಾರವೂ ಸೇರಿದಂತೆ ಸರ್ಕಾರದ ದೃಷ್ಟಿಕೋನವನ್ನು ತಿಳಿಸುವಂತೆ ಮೆಹ್ತಾ ಅವರನ್ನು ನ್ಯಾಯಪೀಠ ಕೇಳಿತು. ಕೋರ್ಟ್ ಕೇಳಿದ ಎಲ್ಲಾ ಪ್ರಶ್ನೆಗೂ ಮೇಹ್ತಾ ಉತ್ತರ ನೀಡಿದ್ದು, ಸಂಸತ್ತಿನ ನೂತನ ಭವನದ ನಿರ್ಮಾಣಕ್ಕೆ ತರಾತುರಿಯಲ್ಲಿ ಕ್ರಮಗಳನ್ನು ಕೈಗೊಂಡಿಲ್ಲ. ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಡಿ.10 ರಂದು ಸಂಸತ್ತಿನ ಹೊಸ ಭವನಕ್ಕೆ ಶಿಲಾನ್ಯಾಸ ಮಾಡಲಿದ್ದಾರೆ. ಹೊಸ ಕಟ್ಟಡವು 64,500 ದರ ಮೀಟರ್ ವಿಸ್ತೀರ್ಣ ಹೊಂದಿದ್ದು, ₹ 971 ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ 2000 ಜನರು ನೇರವಾಗಿ ಮತ್ತು 9000 ಸಾವಿರ ಜನರು ಪರೋಕ್ಷವಾಗಿ ಭಾಗಿಯಾಗಲಿದ್ದಾರೆ. ಶಿಲಾನ್ಯಾಸ ಕಾರ್ಯಕ್ರಮಕ್ಕೆ ಎಲ್ಲಾ ರಾಜಕೀಯ ಪಕ್ಷಗಳಿಗೂ ಆಹ್ವಾನ ನೀಡಲಾಗಿದ್ದು, ಕೊರೊನಾ ಸಂಬಂಧಿತ ಮಾರ್ಗಸೂಚಿಗಳ ಆಧಾರದಲ್ಲಿ ಮಧ್ಯಾಹ್ನ 1 ಗಂಟೆಗೆ ಶಿಲಾನ್ಯಾಸ ಮಾಡಲಾಗುತ್ತದೆ ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದ್ದರು.

ಸಂಸತ್ತಿನ ಹೊಸ ಭವನಕ್ಕೆ ಶಿಲಾನ್ಯಾಸ ಮಾಡಲು ಮುಹೂರ್ತ ಫಿಕ್ಸ್

Published On - 5:36 pm, Mon, 7 December 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ