AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bullock Cart Race: ಎತ್ತಿನ ಬಂಡಿ ಓಟಕ್ಕೆ ಅನುಮತಿ ನೀಡಿದ ಸುಪ್ರೀಂಕೋರ್ಟ್; ಮಹಾರಾಷ್ಟ್ರದಲ್ಲಿ ಮತ್ತೆ ಆರಂಭವಾಗಲಿದೆ ಸ್ಪರ್ಧೆ

ಮಹಾರಾಷ್ಟ್ರದಲ್ಲಿ ಗೂಳಿ ರೇಸ್​​ಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಇದರಿಂದಾಗಿ ಏಳು ವರ್ಷಗಳ ನಂತರ ಮಹಾರಾಷ್ಟ್ರದಲ್ಲಿ ಮತ್ತೆ ಸ್ಪರ್ಧೆ ಆರಂಭವಾಗಲಿದೆ.

Bullock Cart Race: ಎತ್ತಿನ ಬಂಡಿ ಓಟಕ್ಕೆ ಅನುಮತಿ ನೀಡಿದ ಸುಪ್ರೀಂಕೋರ್ಟ್; ಮಹಾರಾಷ್ಟ್ರದಲ್ಲಿ ಮತ್ತೆ ಆರಂಭವಾಗಲಿದೆ ಸ್ಪರ್ಧೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shivaprasad.hs

Updated on:Dec 16, 2021 | 1:05 PM

ನವದೆಹಲಿ: ಮಹಾರಾಷ್ಟ್ರದಲ್ಲಿ (Maharastra) ಗೂಳಿ ರೇಸ್‌ಗೆ ಸುಪ್ರೀಂಕೋರ್ಟ್ (Supreme Court) ಅನುಮತಿ ನೀಡಿದೆ. ಇದರಿಂದಾಗಿ ಏಳು ವರ್ಷದ ಬಳಿಕ ಮತ್ತೆ ಮಹಾರಾಷ್ಟ್ರದಲ್ಲಿ ಎತ್ತಿನ ಬಂಡಿ ಓಟದ ಸ್ಪರ್ಧೆಗಳು ನಡೆಯಲಿವೆ. ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ ಮತ್ತು ಅದರ ಅಡಿಯಲ್ಲಿ ಮಾಡಲಾದ ನಿಯಮಗಳಿಗೆ ಮಾಡಿದ ತಿದ್ದುಪಡಿಗಳ ಆಧಾರದ ಮೇಲೆ ಮಹಾರಾಷ್ಟ್ರ ರಾಜ್ಯವು ರಾಜ್ಯದಲ್ಲಿ ಎತ್ತಿನ ಗಾಡಿ ಓಟವನ್ನು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ. 2018ರಲ್ಲಿ ಬಾಂಬೆ ಹೈಕೋರ್ಟ್ ರಾಜ್ಯದಲ್ಲಿ ಎತ್ತಿನಗಾಡಿ ಓಟದ ಸ್ಪರ್ಧೆಗಳನ್ನು ನಡೆಸುವುದರ ವಿರುದ್ಧ ನೀಡಿದ್ದ ತಡೆಯಾಜ್ಞೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಎಮ್ ಖಾನ್ವಿಲಾರ್ ಮತ್ತು ಸಿಟಿ ರವಿಕುಮಾರ್ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸುತ್ತಿದೆ. ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿ ಜಲ್ಲಿಕಟ್ಟುವಿನಂತಹ ಸಾಂಪ್ರದಾಯಿಕ ಪ್ರಾಣಿ ಕ್ರೀಡೆಗಳನ್ನು ನಿಷೇಧಿಸಿದ ಪ್ರಾಣಿ ಕಲ್ಯಾಣ ಮಂಡಳಿ ವಿರುದ್ಧ ಎ ನಾಗರಾಜ ಪ್ರಕರಣದ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಹೈಕೋರ್ಟ್ ಈ ಆದೇಶ ನೀಡಿದೆ. 

ಗೂಳಿ ಕಾಳಗದ ಮೇಲಿನ ನಿಷೇಧವನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಿನ್ನೆ (ಬುಧವಾರ) ಸುಪ್ರೀಂ ಕೋರ್ಟ್ ನಲ್ಲಿ ನಡೆದಿತ್ತು . ಈ ಹಿಂದೆ ಇತರ ರಾಜ್ಯಗಳಿಗೂ ಈ ಸಂಬಂಧ ನೋಟಿಸ್ ಜಾರಿ ಮಾಡಲಾಗಿತ್ತು. ಅವರಿಗೂ ಉತ್ತರಿಸಲು ಕಾಲಾವಕಾಶ ನೀಡಲಾಗಿತ್ತು. 2017 ರಲ್ಲಿ ಮುಂಬೈ ಹೈಕೋರ್ಟ್ ಎತ್ತಿನ ಬಂಡಿ ರೇಸ್ ನಿಷೇಧದ ತೆರವಿಗೆ ಒಪ್ಪಿರಲಿಲ್ಲ. ಇದನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ರಾಜ್ಯದ ಪರ ವಾದ ಮಂಡಿಸಿದ ಮುಕುಲ್ ರೋಹ್ಟಗಿ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ 2017ರ ಮಧ್ಯಂತರ ಆದೇಶದ ಅನ್ವಯ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ಆದರೆ ಇದೇ ಸ್ಥಾನದಲ್ಲಿರುವ ಮಹಾರಾಷ್ಟ್ರಕ್ಕೆ ಯಾಕೆ ಅನುಮತಿ ಇಲ್ಲ ವಾದ ಮಂಡಿಸಿದ್ದರು.

ವಾದ ಆಲಿಸಿದ ಸುಪ್ರೀಂ ಕೋರ್ಟ್ ಈ ರೇಸ್‌ಗಳಿಗೆ ಈಗ ಷರತ್ತುಬದ್ಧವಾಗಿ ಅನುಮತಿ ನೀಡಿದೆ. “ಒಂದು ದೇಶ, ಒಂದು ಜನಾಂಗ, ನಮಗೆ ಏಕರೂಪತೆ ಬೇಕು ಮತ್ತು ಒಂದೇ ನಿಯಮ ಇರಬೇಕು. ಬೇರೆ ರಾಜ್ಯಗಳಲ್ಲಿ ಓಟಗಳು ನಡೆಯುತ್ತಿದ್ದರೆ, ಮಹಾರಾಷ್ಟ್ರ ಏಕೆ ಅದಕ್ಕೆ ಅವಕಾಶ ನೀಡಬಾರದು” ಎಂದು ನ್ಯಾಯಮೂರ್ತಿ ಖಾನ್ವಿಲ್ಕರ್ ವಿಚಾರಣೆಯ ವೇಳೆ ಮೌಖಿಕವಾಗಿ ಹೇಳಿದರು. “ಇದು ಹಲವಾರು ವರ್ಷಗಳಿಂದ ನಡೆಯುತ್ತಿರುವ ಸಾಂಪ್ರದಾಯಿಕ ಕ್ರೀಡೆಯಾಗಿದೆ, ತೀರ್ಪು ಬಂದಿತು ಅದನ್ನು ನಿಲ್ಲಿಸಲಾಯಿತು. ತಿದ್ದುಪಡಿ ಬಂದಿತು- ನಿಯಂತ್ರಿತ ರೀತಿಯಲ್ಲಿ ಅನುಮತಿಸಲಾಗಿದೆ. ಇದು ಸಾಂಪ್ರದಾಯಿಕ ಕ್ರೀಡೆಯಾಗಿದೆ ಮತ್ತು ಮಹಾರಾಷ್ಟ್ರವನ್ನು ಹೊರತುಪಡಿಸಿ ದೇಶದೆಲ್ಲೆಡೆ ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿ ಮಾತ್ರ ನಿಲ್ಲಿಸುವುದರಲ್ಲಿ ಅರ್ಥವಿಲ್ಲ’’ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.

ಈ ನಿರ್ಧಾರದಿಂದ 2014ರ ಬಳಿಕ ಮೊದಲ ಬಾರಿಗೆ ಅಧಿಕೃತವಾಗಿ ಮಹಾರಾಷ್ಟ್ರದಲ್ಲಿ ಮತ್ತೆ ಎತ್ತಿನಗಾಡಿ ಓಟ ಆರಂಭವಾಗಲಿದೆ. ಮಹಾರಾಷ್ಟ್ರದ ಗ್ರಾಮೀಣ ಭಾಗಗಳಲ್ಲಿ ಎತ್ತಿನ ಬಂಡಿಗಳ ಓಟಕ್ಕೆ ಬಹಳ ಆಕರ್ಷಣೆಯಿದೆ. ಆದರೆ ಓಟದ ವೇಳೆ ಪ್ರಾಣಿಗಳ ಹಿಂಸೆ ನಡೆಸಲಾಗುತ್ತದೆ ಎಂದು ಪ್ರಾಣಿಪ್ರಿಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ನಿಯಮಗಳ ಅನುಸಾರ ಓಟಕ್ಕೆ ಅನುಮತಿ ನೀಡಲಾಗಿದೆ.

ಇದನ್ನೂ ಓದಿ:

ಆಶ್ಲೆ ಇಂಟರ್ ನ್ಯಾಷನಲ್ ಸ್ಕೂಲ್ ವಿರುದ್ಧ ಮತಾಂತರ ಯತ್ನ ಆರೋಪ, ಶಾಲೆ ವಿರುದ್ದ ಕ್ರಮಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ

ಉದ್ಯೋಗಿಗಳಿಗೆ 2 ಉಚಿತ ಮನೆಗಳನ್ನು ನೀಡುವುದಾಗಿ ಘೋಷಿಸಿದ ಕಂಪನಿ; ಇದಕ್ಕೆ ಮೀಸಲಿಟ್ಟ ಹಣವೆಷ್ಟು?

Published On - 12:29 pm, Thu, 16 December 21

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ