AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹಿತ ಮಹಿಳೆಯಂತೆ ಅವಿವಾಹಿತೆಗೂ ಗರ್ಭಪಾತದ ಹಕ್ಕಿದೆ: ಸುಪ್ರೀಂಕೋರ್ಟ್​

ತನ್ನ ಮಹತ್ವದ ನಿರ್ಧಾರವೊಂದರಲ್ಲಿ, 24 ವಾರಗಳ ಗರ್ಭಿಣಿಯಾಗಿರುವ ಅವಿವಾಹಿತ ಮಹಿಳೆಗೆ ಗರ್ಭಪಾತಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ವಿವಾಹಿತ ಮಹಿಳೆಯಂತೆ ಅವಿವಾಹಿತೆಗೂ ಗರ್ಭಪಾತದ ಹಕ್ಕಿದೆ: ಸುಪ್ರೀಂಕೋರ್ಟ್​
Supreme court
TV9 Web
| Edited By: |

Updated on: Jul 22, 2022 | 10:12 AM

Share

ತನ್ನ ಮಹತ್ವದ ನಿರ್ಧಾರವೊಂದರಲ್ಲಿ, 24 ವಾರಗಳ ಗರ್ಭಿಣಿಯಾಗಿರುವ ಅವಿವಾಹಿತ ಮಹಿಳೆಗೆ ಗರ್ಭಪಾತಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಲಿವ್-ಇನ್ ರಿಲೇಷನ್​ಶಿಪ್​ನಲ್ಲಿರುವಾಗ ಗರ್ಭಿಣಿಯಾಗಿದ್ದ ಅವಿವಾಹಿತ ಮಹಿಳೆಯೊಬ್ಬರು ತನಗೆ ಬೇಡವಾದ 24 ವಾರಗಳ ಭ್ರೂಣದ ಗರ್ಭಪಾತಕ್ಕೆ ಅವಕಾಶ ನೀಡುವಂತೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಕೋರ್ಟ್ ಆಕೆಯ ಮನವಿಯನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಮಹಿಳೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಗರ್ಭಪಾತದಿಂದ ಜೀವಕ್ಕೆ ಯಾವುದೇ ಅಪಾಯವಿಲ್ಲವೆಂಬುದನ್ನು ಖಾತರಿಪಡಿಸಿಕೊಂಡು ಗರ್ಭಪಾತ ಮಾಡುವುದಕ್ಕೆ ಅವಕಾಶ ನೀಡಬೇಕು ಎಂದು ಹೇಳಿದೆ.

ವೈದ್ಯಕೀಯ ಗರ್ಭಪಾತ ಕಾಯ್ದೆಗೆ 2021ರಲ್ಲಿ ತಂದಿರುವ ತಿದ್ದುಪಡಿಯಲ್ಲಿ ಗಂಡ ಎಂಬ ಬದಲು ಸಂಗಾತಿ ಎಂಬ ಪದ ಬಳಸಲಾಗಿದೆ. ಇದು ಈ ಕಾಯ್ದೆಯಲ್ಲಿ ಅವಿವಾಹಿತ ಮಹಿಳೆಯನ್ನು ಕೂಡ ಒಳಗೊಳ್ಳಲು ಇರುವ ಶಾಸನದ ಉದ್ದೇಶವನ್ನು ತೋರಿಸುತ್ತದೆ ಎಂದು ಸುಪ್ರೀಂಕೋರ್ಟ್​ ಹೇಳಿದೆ.

ಇಂತಹ ಪರಿಸ್ಥಿತಿಯಲ್ಲಿ ಅವಿವಾಹಿತ ಮಹಿಳೆಯರೂ ಈ ಕಾಯ್ದೆಯ ವ್ಯಾಪ್ತಿಗೆ ಬರುತ್ತಾರೆ. ಅರ್ಜಿದಾರ ಮಹಿಳೆ ಅವಿವಾಹಿತ ಮಹಿಳೆ ಎಂಬ ಕಾರಣಕ್ಕೆ ಕಾಯ್ದೆಯ ಪ್ರಯೋಜನವನ್ನು ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಶಾಸಕಾಂಗವು ಮಾಡಿದ ಕಾನೂನಿನ ಉದ್ದೇಶವು ಕೇವಲ ವೈವಾಹಿಕ ಸಂಬಂಧದಿಂದ ಅನಪೇಕ್ಷಿತ ಗರ್ಭಧಾರಣೆಯ ವಿಷಯಕ್ಕೆ ಸೀಮಿತವಾಗಿಲ್ಲ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.

ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಮಹಿಳೆಯ ಗರ್ಭಪಾತಕ್ಕೆ ಅವಕಾಶ ನೀಡಿದ್ದು, ದೆಹಲಿಯ ಏಮ್ಸ್ ಮುಖ್ಯಸ್ಥರಿಗೆ ಸೂಚನೆ ನೀಡಿದ್ದು ವೈದ್ಯಕೀಯ ಮಂಡಳಿ ಸ್ಥಾಪಿಸಿ ಮಹಿಳೆಗೆ ಯಾವುದೇ ಅಪಾಯವಾಗದಂತೆ ಗರ್ಭಪಾತ ಮಾಡಿಸಲು ಸೂಚಿಸಿದೆ.

ವಿವಾಹಿತರು ಮತ್ತು ಅವಿವಾಹಿತರು ಎಂಬ ಭೇದವಿದ್ದರೆ ಮಾಡಿದ ಕಾನೂನಿನ ಉದ್ದೇಶ ಈಡೇರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಗಮನಾರ್ಹ ಸಂಗತಿಯೆಂದರೆ, ಅರ್ಜಿದಾರರು ಅವಿವಾಹಿತ ಮಹಿಳೆಯಾಗಿದ್ದು, ಸಮ್ಮತಿಯ ಸಂಬಂಧದಿಂದ ಗರ್ಭಿಣಿಯಾಗಿದ್ದಾರೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ