Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹಿತ ಮಹಿಳೆಯಂತೆ ಅವಿವಾಹಿತೆಗೂ ಗರ್ಭಪಾತದ ಹಕ್ಕಿದೆ: ಸುಪ್ರೀಂಕೋರ್ಟ್​

ತನ್ನ ಮಹತ್ವದ ನಿರ್ಧಾರವೊಂದರಲ್ಲಿ, 24 ವಾರಗಳ ಗರ್ಭಿಣಿಯಾಗಿರುವ ಅವಿವಾಹಿತ ಮಹಿಳೆಗೆ ಗರ್ಭಪಾತಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ವಿವಾಹಿತ ಮಹಿಳೆಯಂತೆ ಅವಿವಾಹಿತೆಗೂ ಗರ್ಭಪಾತದ ಹಕ್ಕಿದೆ: ಸುಪ್ರೀಂಕೋರ್ಟ್​
Supreme court
Follow us
TV9 Web
| Updated By: ನಯನಾ ರಾಜೀವ್

Updated on: Jul 22, 2022 | 10:12 AM

ತನ್ನ ಮಹತ್ವದ ನಿರ್ಧಾರವೊಂದರಲ್ಲಿ, 24 ವಾರಗಳ ಗರ್ಭಿಣಿಯಾಗಿರುವ ಅವಿವಾಹಿತ ಮಹಿಳೆಗೆ ಗರ್ಭಪಾತಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಲಿವ್-ಇನ್ ರಿಲೇಷನ್​ಶಿಪ್​ನಲ್ಲಿರುವಾಗ ಗರ್ಭಿಣಿಯಾಗಿದ್ದ ಅವಿವಾಹಿತ ಮಹಿಳೆಯೊಬ್ಬರು ತನಗೆ ಬೇಡವಾದ 24 ವಾರಗಳ ಭ್ರೂಣದ ಗರ್ಭಪಾತಕ್ಕೆ ಅವಕಾಶ ನೀಡುವಂತೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಕೋರ್ಟ್ ಆಕೆಯ ಮನವಿಯನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಮಹಿಳೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಗರ್ಭಪಾತದಿಂದ ಜೀವಕ್ಕೆ ಯಾವುದೇ ಅಪಾಯವಿಲ್ಲವೆಂಬುದನ್ನು ಖಾತರಿಪಡಿಸಿಕೊಂಡು ಗರ್ಭಪಾತ ಮಾಡುವುದಕ್ಕೆ ಅವಕಾಶ ನೀಡಬೇಕು ಎಂದು ಹೇಳಿದೆ.

ವೈದ್ಯಕೀಯ ಗರ್ಭಪಾತ ಕಾಯ್ದೆಗೆ 2021ರಲ್ಲಿ ತಂದಿರುವ ತಿದ್ದುಪಡಿಯಲ್ಲಿ ಗಂಡ ಎಂಬ ಬದಲು ಸಂಗಾತಿ ಎಂಬ ಪದ ಬಳಸಲಾಗಿದೆ. ಇದು ಈ ಕಾಯ್ದೆಯಲ್ಲಿ ಅವಿವಾಹಿತ ಮಹಿಳೆಯನ್ನು ಕೂಡ ಒಳಗೊಳ್ಳಲು ಇರುವ ಶಾಸನದ ಉದ್ದೇಶವನ್ನು ತೋರಿಸುತ್ತದೆ ಎಂದು ಸುಪ್ರೀಂಕೋರ್ಟ್​ ಹೇಳಿದೆ.

ಇಂತಹ ಪರಿಸ್ಥಿತಿಯಲ್ಲಿ ಅವಿವಾಹಿತ ಮಹಿಳೆಯರೂ ಈ ಕಾಯ್ದೆಯ ವ್ಯಾಪ್ತಿಗೆ ಬರುತ್ತಾರೆ. ಅರ್ಜಿದಾರ ಮಹಿಳೆ ಅವಿವಾಹಿತ ಮಹಿಳೆ ಎಂಬ ಕಾರಣಕ್ಕೆ ಕಾಯ್ದೆಯ ಪ್ರಯೋಜನವನ್ನು ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಶಾಸಕಾಂಗವು ಮಾಡಿದ ಕಾನೂನಿನ ಉದ್ದೇಶವು ಕೇವಲ ವೈವಾಹಿಕ ಸಂಬಂಧದಿಂದ ಅನಪೇಕ್ಷಿತ ಗರ್ಭಧಾರಣೆಯ ವಿಷಯಕ್ಕೆ ಸೀಮಿತವಾಗಿಲ್ಲ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.

ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಮಹಿಳೆಯ ಗರ್ಭಪಾತಕ್ಕೆ ಅವಕಾಶ ನೀಡಿದ್ದು, ದೆಹಲಿಯ ಏಮ್ಸ್ ಮುಖ್ಯಸ್ಥರಿಗೆ ಸೂಚನೆ ನೀಡಿದ್ದು ವೈದ್ಯಕೀಯ ಮಂಡಳಿ ಸ್ಥಾಪಿಸಿ ಮಹಿಳೆಗೆ ಯಾವುದೇ ಅಪಾಯವಾಗದಂತೆ ಗರ್ಭಪಾತ ಮಾಡಿಸಲು ಸೂಚಿಸಿದೆ.

ವಿವಾಹಿತರು ಮತ್ತು ಅವಿವಾಹಿತರು ಎಂಬ ಭೇದವಿದ್ದರೆ ಮಾಡಿದ ಕಾನೂನಿನ ಉದ್ದೇಶ ಈಡೇರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಗಮನಾರ್ಹ ಸಂಗತಿಯೆಂದರೆ, ಅರ್ಜಿದಾರರು ಅವಿವಾಹಿತ ಮಹಿಳೆಯಾಗಿದ್ದು, ಸಮ್ಮತಿಯ ಸಂಬಂಧದಿಂದ ಗರ್ಭಿಣಿಯಾಗಿದ್ದಾರೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ