AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಖಿಂಪುರ ಖೇರಿ ಹಿಂಸಾಚಾರ: ತನಿಖೆ ಮೇಲ್ವಿಚಾರಣೆಗೆ ನಿವೃತ್ತ ನ್ಯಾಯಾಧೀಶರನ್ನು ನಿಯೋಜಿಸಿದ ಸುಪ್ರೀಂಕೋರ್ಟ್​

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್​, ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ಪ್ರಕರಣವನ್ನು ಸುಮೊಟೊ ವಿಚಾರಣೆಗೆ ಕೈಗೆತ್ತಿಕೊಂಡಿದೆ.

ಲಖಿಂಪುರ ಖೇರಿ ಹಿಂಸಾಚಾರ: ತನಿಖೆ ಮೇಲ್ವಿಚಾರಣೆಗೆ ನಿವೃತ್ತ ನ್ಯಾಯಾಧೀಶರನ್ನು ನಿಯೋಜಿಸಿದ ಸುಪ್ರೀಂಕೋರ್ಟ್​
ಸುಪ್ರೀಂ ಕೋರ್ಟ್
TV9 Web
| Edited By: |

Updated on: Nov 17, 2021 | 2:31 PM

Share

ಅಕ್ಟೋಬರ್​ 3ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರ (Lakhimpur Kheri Violence Case) ಪ್ರಕರಣದ ತನಿಖೆಯ ಮೇಲ್ವಿಚಾರಣೆ ನಡೆಸಲು, ಸುಪ್ರೀಂಕೋರ್ಟ್​​ ಇಂದು ಪಂಜಾಬ್​ ಮತ್ತು ಹರ್ಯಾಣ ಹೈಕೋರ್ಟ್​​ನ ಮಾಜಿ ನ್ಯಾಯಾಧೀಶ ರಾಕೇಶ್​​ ಕುಮಾರ್​ ಜೈನ್​​ರನ್ನು ನೇಮಕ ಮಾಡಿದೆ. ಅಂದು ಲಖಿಂಪುರ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಸಚಿವ ಅಜಯ್​ ಕುಮಾರ್ ಮಿಶ್ರಾರ ಪುತ್ರ ಆಶಿಶ್​ ಮಿಶ್ರಾ ಬೆಂಗಾವಲು ವಾಹನ ಹರಿದು ರೈತನೊಬ್ಬ ಮೃತಪಟ್ಟಿದ್ದರು. ಅದಾದ ಮೇಲೆ ಹಿಂಸಾಚಾರ ಭುಗಿಲೆದ್ದು, ಒಟ್ಟು 8 ಮಂದಿ ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಶಿಶ್​ ಮಿಶ್ರಾ ಆಗಿದ್ದು, ಸದ್ಯ ಅವರು ಬಂಧನದಲ್ಲಿದ್ದಾರೆ. ನಿನ್ನೆಯಷ್ಟೇ ಜಿಲ್ಲಾ ನ್ಯಾಯಾಲಯ ಅವರಿಗೆ ಜಾಮೀನು ನಿರಾಕರಿಸಿದೆ.   

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್​, ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ಪ್ರಕರಣವನ್ನು ಸುಮೊಟೊ ವಿಚಾರಣೆಗೆ ಕೈಗೆತ್ತಿಕೊಂಡಿದೆ. ನ್ಯಾಯಸಮ್ಮತತೆ, ಪಾರದರ್ಶಕತೆ ಮತ್ತು ಸಂಪೂರ್ಣ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂಬ ಕಾರಣಕ್ಕೆ ಪಂಜಾಬ್​ ಮತ್ತು ಹರ್ಯಾಣ ಹೈಕೋರ್ಟ್​​ನ ನಿವೃತ್ತ ನ್ಯಾಯಾಧೀಶ ರಾಕೇಶ್​​ ಕುಮಾರ್​ ಜೈನ್​​ರನ್ನು ಮೇಲ್ವಿಚಾರಣೆಗಾಗಿ ನಿಯೋಜಿಸಿದೆ.  ಪ್ರಕರಣದ ತನಿಖೆಗಾಗಿ ಯುಪಿ ಸರ್ಕಾರ ಈಗಾಗಲೇ ರಚಿಸಿರುವ ವಿಶೇಷ ತನಿಖಾ ತಂಡದಲ್ಲಿ ಐಪಿಎಸ್ ಅಧಿಕಾರಿಗಳಾದ ಎಸ್​.ಬಿ.ಶಿರೋಡ್ಕರ್​, ದೀಪಿಂದರ್​ ಸಿಂಗ್​ ಮತ್ತು ಪದ್ಮಜಾ ಚೌಹಾಣ್​  ಅವರನ್ನು ಸೇರಿಸಿ, ಮರು ಸಂಘಟನೆ ಮಾಡಬೇಕು. ಅದಾದ ನಂತರ ಇದೀಗ ನಿಯೋಜಿಸಲಾದ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಮುಂದುವರಿಯಲಿದೆ. ಮೇಲ್ವಿಚಾರಣೆಗಾಗಿ ನೇಮಕಗೊಂಡ ನಿವೃತ್ತ ನ್ಯಾಯಾಧೀಶರು ಸಲ್ಲಿಸುವ ಸ್ಥಿತಿವರದಿಯನ್ನು ಆಧರಿಸಿ, ಚಾರ್ಜ್​ಶೀಟ್​ ಸಲ್ಲಿಕೆಯಾಗಲಿದೆ. ಬಳಿಕ ನಾವು ವಿಚಾರಣೆ ನಡೆಸುತ್ತೇವೆ ಎಂದು ಸುಪ್ರೀಂಕೋರ್ಟ್​ ಸಿಜೆಐ ಎನ್​. ವಿ.ರಮಣ ತಿಳಿಸಿದ್ದಾರೆ.

ನಾವು ಈ ಪ್ರಕರಣದ ತನಿಖೆಯನ್ನು ಮೇಲ್ವಿಚಾರಣೆ ನಡೆಸಲು ಬೇರೊಂದು ರಾಜ್ಯದ ಹೈಕೋರ್ಟ್​ನ ನಿವೃತ್ತ ನ್ಯಾಯಾಧೀಶರನ್ನು ನೇಮಕ ಮಾಡುವುದಾಗಿ ನವೆಂಬರ್​ 8ರಂದು ನಡೆಸಿದ್ದ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಹೇಳಿತ್ತು. ಅದಕ್ಕೆ ಉತ್ತರ ಪ್ರದೇಶ ಸರ್ಕಾರವೂ ಕೂಡ ಒಪ್ಪಿಗೆ ನೀಡಿದ ಬಳಿಕ ಇದೀಗ ಪಂಜಾಬ್​-ಹರ್ಯಾಣ ಹೈಕೋರ್ಟ್​ನ ನಿವೃತ್ತ ಜಡ್ಜ್​​ ನೇಮಕ ಮಾಡಲಾಗಿದೆ.

ಇದನ್ನೂ ಓದಿ: ಶಕ್ತಿಧಾಮ ನೋಡಿಕೊಳ್ಳುವ ಬಗ್ಗೆ ಅಶ್ವಿನಿ​ ಜತೆ ವಿಶಾಲ್​ ಚರ್ಚೆ; ಪುನೀತ್​​ ಕುಟುಂಬದಿಂದ ಅನುಮತಿ ಸಿಗೋದು ಯಾವಾಗ?

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ