AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಖಿಂಪುರ ಖೇರಿ ಹಿಂಸಾಚಾರ: ತನಿಖೆ ಮೇಲ್ವಿಚಾರಣೆಗೆ ನಿವೃತ್ತ ನ್ಯಾಯಾಧೀಶರನ್ನು ನಿಯೋಜಿಸಿದ ಸುಪ್ರೀಂಕೋರ್ಟ್​

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್​, ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ಪ್ರಕರಣವನ್ನು ಸುಮೊಟೊ ವಿಚಾರಣೆಗೆ ಕೈಗೆತ್ತಿಕೊಂಡಿದೆ.

ಲಖಿಂಪುರ ಖೇರಿ ಹಿಂಸಾಚಾರ: ತನಿಖೆ ಮೇಲ್ವಿಚಾರಣೆಗೆ ನಿವೃತ್ತ ನ್ಯಾಯಾಧೀಶರನ್ನು ನಿಯೋಜಿಸಿದ ಸುಪ್ರೀಂಕೋರ್ಟ್​
ಸುಪ್ರೀಂ ಕೋರ್ಟ್
TV9 Web
| Edited By: |

Updated on: Nov 17, 2021 | 2:31 PM

Share

ಅಕ್ಟೋಬರ್​ 3ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರ (Lakhimpur Kheri Violence Case) ಪ್ರಕರಣದ ತನಿಖೆಯ ಮೇಲ್ವಿಚಾರಣೆ ನಡೆಸಲು, ಸುಪ್ರೀಂಕೋರ್ಟ್​​ ಇಂದು ಪಂಜಾಬ್​ ಮತ್ತು ಹರ್ಯಾಣ ಹೈಕೋರ್ಟ್​​ನ ಮಾಜಿ ನ್ಯಾಯಾಧೀಶ ರಾಕೇಶ್​​ ಕುಮಾರ್​ ಜೈನ್​​ರನ್ನು ನೇಮಕ ಮಾಡಿದೆ. ಅಂದು ಲಖಿಂಪುರ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಸಚಿವ ಅಜಯ್​ ಕುಮಾರ್ ಮಿಶ್ರಾರ ಪುತ್ರ ಆಶಿಶ್​ ಮಿಶ್ರಾ ಬೆಂಗಾವಲು ವಾಹನ ಹರಿದು ರೈತನೊಬ್ಬ ಮೃತಪಟ್ಟಿದ್ದರು. ಅದಾದ ಮೇಲೆ ಹಿಂಸಾಚಾರ ಭುಗಿಲೆದ್ದು, ಒಟ್ಟು 8 ಮಂದಿ ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಶಿಶ್​ ಮಿಶ್ರಾ ಆಗಿದ್ದು, ಸದ್ಯ ಅವರು ಬಂಧನದಲ್ಲಿದ್ದಾರೆ. ನಿನ್ನೆಯಷ್ಟೇ ಜಿಲ್ಲಾ ನ್ಯಾಯಾಲಯ ಅವರಿಗೆ ಜಾಮೀನು ನಿರಾಕರಿಸಿದೆ.   

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್​, ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ಪ್ರಕರಣವನ್ನು ಸುಮೊಟೊ ವಿಚಾರಣೆಗೆ ಕೈಗೆತ್ತಿಕೊಂಡಿದೆ. ನ್ಯಾಯಸಮ್ಮತತೆ, ಪಾರದರ್ಶಕತೆ ಮತ್ತು ಸಂಪೂರ್ಣ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂಬ ಕಾರಣಕ್ಕೆ ಪಂಜಾಬ್​ ಮತ್ತು ಹರ್ಯಾಣ ಹೈಕೋರ್ಟ್​​ನ ನಿವೃತ್ತ ನ್ಯಾಯಾಧೀಶ ರಾಕೇಶ್​​ ಕುಮಾರ್​ ಜೈನ್​​ರನ್ನು ಮೇಲ್ವಿಚಾರಣೆಗಾಗಿ ನಿಯೋಜಿಸಿದೆ.  ಪ್ರಕರಣದ ತನಿಖೆಗಾಗಿ ಯುಪಿ ಸರ್ಕಾರ ಈಗಾಗಲೇ ರಚಿಸಿರುವ ವಿಶೇಷ ತನಿಖಾ ತಂಡದಲ್ಲಿ ಐಪಿಎಸ್ ಅಧಿಕಾರಿಗಳಾದ ಎಸ್​.ಬಿ.ಶಿರೋಡ್ಕರ್​, ದೀಪಿಂದರ್​ ಸಿಂಗ್​ ಮತ್ತು ಪದ್ಮಜಾ ಚೌಹಾಣ್​  ಅವರನ್ನು ಸೇರಿಸಿ, ಮರು ಸಂಘಟನೆ ಮಾಡಬೇಕು. ಅದಾದ ನಂತರ ಇದೀಗ ನಿಯೋಜಿಸಲಾದ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಮುಂದುವರಿಯಲಿದೆ. ಮೇಲ್ವಿಚಾರಣೆಗಾಗಿ ನೇಮಕಗೊಂಡ ನಿವೃತ್ತ ನ್ಯಾಯಾಧೀಶರು ಸಲ್ಲಿಸುವ ಸ್ಥಿತಿವರದಿಯನ್ನು ಆಧರಿಸಿ, ಚಾರ್ಜ್​ಶೀಟ್​ ಸಲ್ಲಿಕೆಯಾಗಲಿದೆ. ಬಳಿಕ ನಾವು ವಿಚಾರಣೆ ನಡೆಸುತ್ತೇವೆ ಎಂದು ಸುಪ್ರೀಂಕೋರ್ಟ್​ ಸಿಜೆಐ ಎನ್​. ವಿ.ರಮಣ ತಿಳಿಸಿದ್ದಾರೆ.

ನಾವು ಈ ಪ್ರಕರಣದ ತನಿಖೆಯನ್ನು ಮೇಲ್ವಿಚಾರಣೆ ನಡೆಸಲು ಬೇರೊಂದು ರಾಜ್ಯದ ಹೈಕೋರ್ಟ್​ನ ನಿವೃತ್ತ ನ್ಯಾಯಾಧೀಶರನ್ನು ನೇಮಕ ಮಾಡುವುದಾಗಿ ನವೆಂಬರ್​ 8ರಂದು ನಡೆಸಿದ್ದ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಹೇಳಿತ್ತು. ಅದಕ್ಕೆ ಉತ್ತರ ಪ್ರದೇಶ ಸರ್ಕಾರವೂ ಕೂಡ ಒಪ್ಪಿಗೆ ನೀಡಿದ ಬಳಿಕ ಇದೀಗ ಪಂಜಾಬ್​-ಹರ್ಯಾಣ ಹೈಕೋರ್ಟ್​ನ ನಿವೃತ್ತ ಜಡ್ಜ್​​ ನೇಮಕ ಮಾಡಲಾಗಿದೆ.

ಇದನ್ನೂ ಓದಿ: ಶಕ್ತಿಧಾಮ ನೋಡಿಕೊಳ್ಳುವ ಬಗ್ಗೆ ಅಶ್ವಿನಿ​ ಜತೆ ವಿಶಾಲ್​ ಚರ್ಚೆ; ಪುನೀತ್​​ ಕುಟುಂಬದಿಂದ ಅನುಮತಿ ಸಿಗೋದು ಯಾವಾಗ?

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ