AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೆ ವಿರಾಮ ನೀಡಲು ಸುಪ್ರೀಂಕೋರ್ಟ್ ಸೂಚನೆ

ಕಳೆದ ಏಳೆಂಟು ತಿಂಗಳಿನಿಂದ ಕಾರ್ಯ ನಿರ್ವಹಿಸುತ್ತಿರುವ ಅವರಿಗೆ ವಿಶ್ರಾಂತಿ ಬೇಕು ಎಂದು ನ್ಯಾಯಾಲಯ ತಿಳಿಸಿದೆ.

ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೆ ವಿರಾಮ ನೀಡಲು ಸುಪ್ರೀಂಕೋರ್ಟ್ ಸೂಚನೆ
ಸುಪ್ರೀಂ ಕೋರ್ಟ್
TV9 Web
| Edited By: |

Updated on:Apr 07, 2022 | 10:41 AM

Share

ದೆಹಲಿ: ಕೊವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ವಿರಾಮವಿಲ್ಲದೆ ಶ್ರಮಿಸುತ್ತಿರುವ ವೈದ್ಯರಿಗೆ ವಿಶ್ರಾಂತಿ ಪಡೆದುಕೊಳ್ಳಲು ವ್ಯವಸ್ಥೆ ಮಾಡಿಕೊಡಿ ಎಂದು ಸುಪ್ರೀಂಕೋರ್ಟ್​ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಆಸ್ಪತ್ರೆಗಳಲ್ಲಿ ಸತತವಾಗಿ ಕೆಲಸ ಮಾಡುವುದು ವೈದ್ಯರ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಕಳೆದ ಏಳೆಂಟು ತಿಂಗಳಿನಿಂದ ಕಾರ್ಯ ನಿರ್ವಹಿಸುತ್ತಿರುವ ಅವರಿಗೆ ವಿಶ್ರಾಂತಿ ಬೇಕು ಎಂದು ನ್ಯಾಯಾಲಯ ತಿಳಿಸಿದೆ.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್.ಎಸ್. ರೆಡ್ಡಿ ಮತ್ತು ಎಂ.ಆರ್.ಶಾ ಅವರಿದ್ದ ನ್ಯಾಯಪೀಠವು ಕೇಂದ್ರ ಸರ್ಕಾರದ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ತಮ್ಮ ಸೂಚನೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸಿತು. ನ್ಯಾಯಾಲಯದ ಸೂಚನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದು ತುಷಾರ್ ಮೆಹ್ತಾ ಪ್ರತಿಕ್ರಿಯಿಸಿದರು.

ಕೊವಿಡ್​ಗೆ ಸೂಕ್ತ ಚಿಕಿತ್ಸೆ ಮತ್ತು ಕೊರೊನಾದಿಂದ ಮರಣ ಹೊಂದಿದ ಶವಗಳ ನಿರ್ವಹಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ ನ್ಯಾಯಪೀಠವು ಸ್ವಯಂ ಪ್ರೇರಿತವಾಗಿ ವಿಚಾರಣೆ ಆರಂಭಿಸಿದೆ.

ಈ ಸಂಬಂಧ ಗುಜರಾತ್ ನಡೆ ಬಗ್ಗೆ ಆಶ್ಚರ್ಯ ಸೂಚಿಸಿದೆ. ರಾಜ್ಯದಲ್ಲಿ ಮಾಸ್ಕ್ ಧರಿಸದೇ ಇರುವುದಕ್ಕೆ ₹ 90 ಕೋಟಿ ದಂಡ ವಿಧಿಸಿರುವ ಗುಜರಾತ್ ಸರ್ಕಾರ, ಕೊವಿಡ್ ಪರಿಸ್ಥಿತಿ ನಿರ್ವಹಣೆಯಲ್ಲಿ ವಿಫಲವಾಗಿದೆ. ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಆರೋಗ್ಯ ಮತ್ತು ಸುರಕ್ಷೆ ಖಾತ್ರಿಪಡಿಸಲು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಗುಜರಾತ್ ಸರ್ಕಾರಕ್ಕೆ ತಪರಾಕಿ ನೀಡಿತು.

ಕರ್ತವ್ಯ ಒತ್ತಡದಿಂದ ವೈದ್ಯ ಸಾವು ಆರೋಪ: ಸೂಕ್ತ ಪರಿಹಾರಕ್ಕೆ ವೈದ್ಯಾಧಿಕಾರಿಗಳ ಆಗ್ರಹ

Published On - 4:21 pm, Tue, 15 December 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್