AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್-19 ನಿಯಮ ಪಾಲನೆ, ಆಸ್ಪತ್ರೆಗಳ ಸುರಕ್ಷೆ ಬಗ್ಗೆ ವರದಿ ಕೇಳಿದ ಸುಪ್ರೀಂಕೋರ್ಟ್

ಆಸ್ಪತ್ರೆಗಳಲ್ಲಿ ಕೋವಿಡ್-19 ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿದೆ ಮತ್ತು ಕೊರೊನಾ ಸೋಂಕಿನಿಂದ ಮೃತರಾದವರ ದೇಹವನ್ನು ಗೌರವದಿಂದ ಕಾಣುವುದನ್ನು ಖಾತ್ರಿಪಡಿಸುವ ಬಗ್ಗೆ ಸುಪ್ರೀಂಕೋರ್ಟ್​ ಬುಧವಾರ ಸ್ವಯಂಪ್ರೇರಿತವಾಗಿ ವಿಚಾರಣೆ ಆರಂಭಿಸಿತು.

ಕೋವಿಡ್-19 ನಿಯಮ ಪಾಲನೆ, ಆಸ್ಪತ್ರೆಗಳ ಸುರಕ್ಷೆ ಬಗ್ಗೆ ವರದಿ ಕೇಳಿದ ಸುಪ್ರೀಂಕೋರ್ಟ್
ಸುಪ್ರೀಂ ಕೋರ್ಟ್​
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Dec 09, 2020 | 2:58 PM

ದೆಹಲಿ: ಮಾಸ್ಕ್ ಧರಿಸುವುದೂ ಸೇರಿದಂತೆ ಕೊರೊನಾ ಸೋಂಕು ನಿಯಂತ್ರಣಕ್ಕೆ ರೂಪಿಸಿರುವ ನಿಯಮಗಳ ಅನುಷ್ಠಾನ, ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷಾ ನಿಯಮಗಳ ಪಾಲನೆ ಬಗ್ಗೆ ಮಾಹಿತಿ ನೀಡಬೇಕೆಂದು ಸುಪ್ರೀಂಕೋರ್ಟ್​ ಬುಧವಾರ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

ಆಸ್ಪತ್ರೆಗಳಲ್ಲಿ ಕೋವಿಡ್-19 ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿದೆ ಮತ್ತು ಕೊರೊನಾ ಸೋಂಕಿನಿಂದ ಮೃತರಾದವರ ದೇಹವನ್ನು ಗೌರವದಿಂದ ಕಾಣುವುದನ್ನು ಖಾತ್ರಿಪಡಿಸುವ ಬಗ್ಗೆ ಸುಪ್ರೀಂಕೋರ್ಟ್​ ಬುಧವಾರ ಸ್ವಯಂಪ್ರೇರಿತವಾಗಿ ವಿಚಾರಣೆ ಆರಂಭಿಸಿತು.

ಗುಜರಾತ್​ನ ರಾಜ್​ಕೋಟ್​ ಪಟ್ಟಣದ ಕೋವಿಡ್-19 ಆಸ್ಪತ್ರೆಯಲ್ಲಿ ಈಚೆಗೆ ಸಂಭವಿಸಿದ್ದ ಅಗ್ನಿ ದುರಂತದಿಂದ ಕೆಲ ರೋಗಿಗಳು ಮೃತಪಟ್ಟಿದ್ದರು. ದೇಶದ ವಿವಿಧೆಡೆ ಸ್ಥಾಪಿಸಿರುವ ಕೋವಿಡ್-19 ಆಸ್ಪತ್ರೆಗಳಲ್ಲಿ ಅಗ್ನಿಸುರಕ್ಷಾ ನಿಯಮಗಳಿಗೆ ಸಂಬಂಧಿಸಿದ ಚರ್ಚೆಯನ್ನು ಇದು ಹುಟ್ಟುಹಾಕಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಮತ್ತು ಕೇಂದ್ರ ಸರ್ಕಾರದ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಮೂರು ದಿನಗಳ ಒಳಗೆ ವಿಸ್ತೃತ ಪ್ರಮಾಣಪತ್ರ ಸಲ್ಲಿಸುವಂತೆ ನ್ಯಾಯಮೂರ್ತಿ ಅಶೋಕ್​ ಭೂಷಣ್ ನೇತೃತ್ವದ ನ್ಯಾಯಪೀಠ ಸೂಚನೆ ನೀಡಿತು. ನ್ಯಾಯಮೂರ್ತಿ ಆರ್​.ಎಸ್.ರೆಡ್ಡಿ ಮತ್ತು ಎಂ.ಆರ್.ಶಾ ಈ ನ್ಯಾಯಪೀಠದಲ್ಲಿರುವ ಇತರ ನ್ಯಾಯಾಧೀಶರು.

ಈ ಕುರಿತು ಉಳಿದೆಲ್ಲಾ ರಾಜ್ಯಗಳು ಶುಕ್ರವಾರದ ಒಳಗೆ ಸುಪ್ರೀಂಕೋರ್ಟ್​ಗೆ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಸೂಚಿಸಿದ ನ್ಯಾಯಪೀಠವು, ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ 14ಕ್ಕೆ ಮುಂದೂಡಿತು.

ರಾಜ್​ಕೋಟ್ ಕೋವಿಡ್-19 ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅನಾಹುತದ ವಿಚಾರಣೆ ನಡೆಸುತ್ತಿರುವ ನಿವೃತ್ತ ನ್ಯಾಯಮೂರ್ತಿ ಡಿ.ಎ.ಮೆಹ್ತಾ ಸಮಿತಿಯು ಅಹಮದಾಬಾದ್​ ಬೆಂಕಿ ದುರಂತದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ನ್ಯಾಯಪೀಠವು ನಿರ್ದೇಶನ ನೀಡಿತು.

ಕೋವಿಡ್​ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ: ಐವರು ಕೊರೊನಾ ಸೋಂಕಿತರು ಬಲಿ..

Published On - 2:56 pm, Wed, 9 December 20

Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ