AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್-19 ನಿಯಮ ಪಾಲನೆ, ಆಸ್ಪತ್ರೆಗಳ ಸುರಕ್ಷೆ ಬಗ್ಗೆ ವರದಿ ಕೇಳಿದ ಸುಪ್ರೀಂಕೋರ್ಟ್

ಆಸ್ಪತ್ರೆಗಳಲ್ಲಿ ಕೋವಿಡ್-19 ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿದೆ ಮತ್ತು ಕೊರೊನಾ ಸೋಂಕಿನಿಂದ ಮೃತರಾದವರ ದೇಹವನ್ನು ಗೌರವದಿಂದ ಕಾಣುವುದನ್ನು ಖಾತ್ರಿಪಡಿಸುವ ಬಗ್ಗೆ ಸುಪ್ರೀಂಕೋರ್ಟ್​ ಬುಧವಾರ ಸ್ವಯಂಪ್ರೇರಿತವಾಗಿ ವಿಚಾರಣೆ ಆರಂಭಿಸಿತು.

ಕೋವಿಡ್-19 ನಿಯಮ ಪಾಲನೆ, ಆಸ್ಪತ್ರೆಗಳ ಸುರಕ್ಷೆ ಬಗ್ಗೆ ವರದಿ ಕೇಳಿದ ಸುಪ್ರೀಂಕೋರ್ಟ್
ಸುಪ್ರೀಂ ಕೋರ್ಟ್​
Ghanashyam D M | ಡಿ.ಎಂ.ಘನಶ್ಯಾಮ
|

Updated on:Dec 09, 2020 | 2:58 PM

Share

ದೆಹಲಿ: ಮಾಸ್ಕ್ ಧರಿಸುವುದೂ ಸೇರಿದಂತೆ ಕೊರೊನಾ ಸೋಂಕು ನಿಯಂತ್ರಣಕ್ಕೆ ರೂಪಿಸಿರುವ ನಿಯಮಗಳ ಅನುಷ್ಠಾನ, ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷಾ ನಿಯಮಗಳ ಪಾಲನೆ ಬಗ್ಗೆ ಮಾಹಿತಿ ನೀಡಬೇಕೆಂದು ಸುಪ್ರೀಂಕೋರ್ಟ್​ ಬುಧವಾರ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

ಆಸ್ಪತ್ರೆಗಳಲ್ಲಿ ಕೋವಿಡ್-19 ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿದೆ ಮತ್ತು ಕೊರೊನಾ ಸೋಂಕಿನಿಂದ ಮೃತರಾದವರ ದೇಹವನ್ನು ಗೌರವದಿಂದ ಕಾಣುವುದನ್ನು ಖಾತ್ರಿಪಡಿಸುವ ಬಗ್ಗೆ ಸುಪ್ರೀಂಕೋರ್ಟ್​ ಬುಧವಾರ ಸ್ವಯಂಪ್ರೇರಿತವಾಗಿ ವಿಚಾರಣೆ ಆರಂಭಿಸಿತು.

ಗುಜರಾತ್​ನ ರಾಜ್​ಕೋಟ್​ ಪಟ್ಟಣದ ಕೋವಿಡ್-19 ಆಸ್ಪತ್ರೆಯಲ್ಲಿ ಈಚೆಗೆ ಸಂಭವಿಸಿದ್ದ ಅಗ್ನಿ ದುರಂತದಿಂದ ಕೆಲ ರೋಗಿಗಳು ಮೃತಪಟ್ಟಿದ್ದರು. ದೇಶದ ವಿವಿಧೆಡೆ ಸ್ಥಾಪಿಸಿರುವ ಕೋವಿಡ್-19 ಆಸ್ಪತ್ರೆಗಳಲ್ಲಿ ಅಗ್ನಿಸುರಕ್ಷಾ ನಿಯಮಗಳಿಗೆ ಸಂಬಂಧಿಸಿದ ಚರ್ಚೆಯನ್ನು ಇದು ಹುಟ್ಟುಹಾಕಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಮತ್ತು ಕೇಂದ್ರ ಸರ್ಕಾರದ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಮೂರು ದಿನಗಳ ಒಳಗೆ ವಿಸ್ತೃತ ಪ್ರಮಾಣಪತ್ರ ಸಲ್ಲಿಸುವಂತೆ ನ್ಯಾಯಮೂರ್ತಿ ಅಶೋಕ್​ ಭೂಷಣ್ ನೇತೃತ್ವದ ನ್ಯಾಯಪೀಠ ಸೂಚನೆ ನೀಡಿತು. ನ್ಯಾಯಮೂರ್ತಿ ಆರ್​.ಎಸ್.ರೆಡ್ಡಿ ಮತ್ತು ಎಂ.ಆರ್.ಶಾ ಈ ನ್ಯಾಯಪೀಠದಲ್ಲಿರುವ ಇತರ ನ್ಯಾಯಾಧೀಶರು.

ಈ ಕುರಿತು ಉಳಿದೆಲ್ಲಾ ರಾಜ್ಯಗಳು ಶುಕ್ರವಾರದ ಒಳಗೆ ಸುಪ್ರೀಂಕೋರ್ಟ್​ಗೆ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಸೂಚಿಸಿದ ನ್ಯಾಯಪೀಠವು, ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ 14ಕ್ಕೆ ಮುಂದೂಡಿತು.

ರಾಜ್​ಕೋಟ್ ಕೋವಿಡ್-19 ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅನಾಹುತದ ವಿಚಾರಣೆ ನಡೆಸುತ್ತಿರುವ ನಿವೃತ್ತ ನ್ಯಾಯಮೂರ್ತಿ ಡಿ.ಎ.ಮೆಹ್ತಾ ಸಮಿತಿಯು ಅಹಮದಾಬಾದ್​ ಬೆಂಕಿ ದುರಂತದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ನ್ಯಾಯಪೀಠವು ನಿರ್ದೇಶನ ನೀಡಿತು.

ಕೋವಿಡ್​ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ: ಐವರು ಕೊರೊನಾ ಸೋಂಕಿತರು ಬಲಿ..

Published On - 2:56 pm, Wed, 9 December 20

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!