AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್-19 ನಿಯಮ ಪಾಲನೆ, ಆಸ್ಪತ್ರೆಗಳ ಸುರಕ್ಷೆ ಬಗ್ಗೆ ವರದಿ ಕೇಳಿದ ಸುಪ್ರೀಂಕೋರ್ಟ್

ಆಸ್ಪತ್ರೆಗಳಲ್ಲಿ ಕೋವಿಡ್-19 ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿದೆ ಮತ್ತು ಕೊರೊನಾ ಸೋಂಕಿನಿಂದ ಮೃತರಾದವರ ದೇಹವನ್ನು ಗೌರವದಿಂದ ಕಾಣುವುದನ್ನು ಖಾತ್ರಿಪಡಿಸುವ ಬಗ್ಗೆ ಸುಪ್ರೀಂಕೋರ್ಟ್​ ಬುಧವಾರ ಸ್ವಯಂಪ್ರೇರಿತವಾಗಿ ವಿಚಾರಣೆ ಆರಂಭಿಸಿತು.

ಕೋವಿಡ್-19 ನಿಯಮ ಪಾಲನೆ, ಆಸ್ಪತ್ರೆಗಳ ಸುರಕ್ಷೆ ಬಗ್ಗೆ ವರದಿ ಕೇಳಿದ ಸುಪ್ರೀಂಕೋರ್ಟ್
ಸುಪ್ರೀಂ ಕೋರ್ಟ್​
Ghanashyam D M | ಡಿ.ಎಂ.ಘನಶ್ಯಾಮ
|

Updated on:Dec 09, 2020 | 2:58 PM

Share

ದೆಹಲಿ: ಮಾಸ್ಕ್ ಧರಿಸುವುದೂ ಸೇರಿದಂತೆ ಕೊರೊನಾ ಸೋಂಕು ನಿಯಂತ್ರಣಕ್ಕೆ ರೂಪಿಸಿರುವ ನಿಯಮಗಳ ಅನುಷ್ಠಾನ, ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷಾ ನಿಯಮಗಳ ಪಾಲನೆ ಬಗ್ಗೆ ಮಾಹಿತಿ ನೀಡಬೇಕೆಂದು ಸುಪ್ರೀಂಕೋರ್ಟ್​ ಬುಧವಾರ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

ಆಸ್ಪತ್ರೆಗಳಲ್ಲಿ ಕೋವಿಡ್-19 ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿದೆ ಮತ್ತು ಕೊರೊನಾ ಸೋಂಕಿನಿಂದ ಮೃತರಾದವರ ದೇಹವನ್ನು ಗೌರವದಿಂದ ಕಾಣುವುದನ್ನು ಖಾತ್ರಿಪಡಿಸುವ ಬಗ್ಗೆ ಸುಪ್ರೀಂಕೋರ್ಟ್​ ಬುಧವಾರ ಸ್ವಯಂಪ್ರೇರಿತವಾಗಿ ವಿಚಾರಣೆ ಆರಂಭಿಸಿತು.

ಗುಜರಾತ್​ನ ರಾಜ್​ಕೋಟ್​ ಪಟ್ಟಣದ ಕೋವಿಡ್-19 ಆಸ್ಪತ್ರೆಯಲ್ಲಿ ಈಚೆಗೆ ಸಂಭವಿಸಿದ್ದ ಅಗ್ನಿ ದುರಂತದಿಂದ ಕೆಲ ರೋಗಿಗಳು ಮೃತಪಟ್ಟಿದ್ದರು. ದೇಶದ ವಿವಿಧೆಡೆ ಸ್ಥಾಪಿಸಿರುವ ಕೋವಿಡ್-19 ಆಸ್ಪತ್ರೆಗಳಲ್ಲಿ ಅಗ್ನಿಸುರಕ್ಷಾ ನಿಯಮಗಳಿಗೆ ಸಂಬಂಧಿಸಿದ ಚರ್ಚೆಯನ್ನು ಇದು ಹುಟ್ಟುಹಾಕಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಮತ್ತು ಕೇಂದ್ರ ಸರ್ಕಾರದ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಮೂರು ದಿನಗಳ ಒಳಗೆ ವಿಸ್ತೃತ ಪ್ರಮಾಣಪತ್ರ ಸಲ್ಲಿಸುವಂತೆ ನ್ಯಾಯಮೂರ್ತಿ ಅಶೋಕ್​ ಭೂಷಣ್ ನೇತೃತ್ವದ ನ್ಯಾಯಪೀಠ ಸೂಚನೆ ನೀಡಿತು. ನ್ಯಾಯಮೂರ್ತಿ ಆರ್​.ಎಸ್.ರೆಡ್ಡಿ ಮತ್ತು ಎಂ.ಆರ್.ಶಾ ಈ ನ್ಯಾಯಪೀಠದಲ್ಲಿರುವ ಇತರ ನ್ಯಾಯಾಧೀಶರು.

ಈ ಕುರಿತು ಉಳಿದೆಲ್ಲಾ ರಾಜ್ಯಗಳು ಶುಕ್ರವಾರದ ಒಳಗೆ ಸುಪ್ರೀಂಕೋರ್ಟ್​ಗೆ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಸೂಚಿಸಿದ ನ್ಯಾಯಪೀಠವು, ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ 14ಕ್ಕೆ ಮುಂದೂಡಿತು.

ರಾಜ್​ಕೋಟ್ ಕೋವಿಡ್-19 ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅನಾಹುತದ ವಿಚಾರಣೆ ನಡೆಸುತ್ತಿರುವ ನಿವೃತ್ತ ನ್ಯಾಯಮೂರ್ತಿ ಡಿ.ಎ.ಮೆಹ್ತಾ ಸಮಿತಿಯು ಅಹಮದಾಬಾದ್​ ಬೆಂಕಿ ದುರಂತದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ನ್ಯಾಯಪೀಠವು ನಿರ್ದೇಶನ ನೀಡಿತು.

ಕೋವಿಡ್​ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ: ಐವರು ಕೊರೊನಾ ಸೋಂಕಿತರು ಬಲಿ..

Published On - 2:56 pm, Wed, 9 December 20

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ