AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ನಿಂದ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ಪರಿಹಾರ ಕೊಡುವ ಬಗ್ಗೆ ಕೇಂದ್ರ ಸರ್ಕಾರದ ನಿಲುವು ಪ್ರಶ್ನಿಸಿದ ಸುಪ್ರೀಂಕೋರ್ಟ್

ಕೊವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ಪರಿಹಾರ ಧನ ನೀಡುವ ಕುರಿತು ತನ್ನ ನಿಲುವು ತಿಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತಿಳಿಸಿದೆ. ಕೊವಿಡ್ ಸೋಂಕು ತಡೆ ಮತ್ತು ನಿರ್ವಹಣೆಯ ಕುರಿತು ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್, ಕೊವಿಡ್​ನಿಂದ ಮೃತಪಟ್ಟವರಿಕೆ ಮರಣ ಪ್ರಮಾಣಪತ್ರವನ್ನು ನಿಡುವ ಕುರಿತು ಏಕ ರೂಪದ ಪ್ರಕ್ರಿಯೆಯನ್ನು ಐಸಿಎಂಆರ್​ ನಿರ್ದೇಶನಗಳ ಅನುಸಾರ ಪ್ರಕಟಿಸುವಂತೆ ಸೂಚನೆ ನೀಡಿದೆ. ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂಆರ್ ಶಾ ಅವರುಗಳಿದ್ದ ನ್ಯಾಯಪೀಠ ಈ ಅಭಿಪ್ರಾಯಪಟ್ಟಿದೆ. ಕೊವಿಡ್​ನಿಂದ ಮೃತಪಟ್ಟ ಕುಟುಂಬಕ್ಕೆ […]

ಕೊವಿಡ್​ನಿಂದ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ಪರಿಹಾರ ಕೊಡುವ ಬಗ್ಗೆ ಕೇಂದ್ರ ಸರ್ಕಾರದ ನಿಲುವು ಪ್ರಶ್ನಿಸಿದ ಸುಪ್ರೀಂಕೋರ್ಟ್
ಸುಪ್ರೀಂ​ ಕೋರ್ಟ್
guruganesh bhat
|

Updated on: May 24, 2021 | 7:42 PM

Share

ಕೊವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ಪರಿಹಾರ ಧನ ನೀಡುವ ಕುರಿತು ತನ್ನ ನಿಲುವು ತಿಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತಿಳಿಸಿದೆ. ಕೊವಿಡ್ ಸೋಂಕು ತಡೆ ಮತ್ತು ನಿರ್ವಹಣೆಯ ಕುರಿತು ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್, ಕೊವಿಡ್​ನಿಂದ ಮೃತಪಟ್ಟವರಿಕೆ ಮರಣ ಪ್ರಮಾಣಪತ್ರವನ್ನು ನಿಡುವ ಕುರಿತು ಏಕ ರೂಪದ ಪ್ರಕ್ರಿಯೆಯನ್ನು ಐಸಿಎಂಆರ್​ ನಿರ್ದೇಶನಗಳ ಅನುಸಾರ ಪ್ರಕಟಿಸುವಂತೆ ಸೂಚನೆ ನೀಡಿದೆ.

ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂಆರ್ ಶಾ ಅವರುಗಳಿದ್ದ ನ್ಯಾಯಪೀಠ ಈ ಅಭಿಪ್ರಾಯಪಟ್ಟಿದೆ.

ಕೊವಿಡ್​ನಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪರಾಮರ್ಶಿಸಿದ ಸುಪ್ರೀಂಕೋರ್ಟ್ ಈ ಸೂಚನೆ ನೀಡಿದೆ. ವಿಕೋಪ ನಿರ್ವಹಣಾ ನೀತಿ 2005ರ ಅನುಸಾರ ಕೊವಿಡ್​ನಿಂದ ವ್ಯಕ್ತಿ ನಿಧನರಾದಲ್ಲಿ ವ್ಯಕ್ತಿಯ ಕುಟುಂಬಕ್ಕೆ 4 ಲಕ್ಷ ಪರಿಹಾರ ನೀಡಬೇಕು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು. ಕೇಂದ್ರ ಸರ್ಕಾರ ಕೊವಿಡ್​ನಿಂದ ಮೃತಪಟ್ಟ ವ್ಯಕ್ತಿಯ ಮರಣ ಪ್ರಮಾಣ ಪತ್ರದಲ್ಲಿ ಏಕರೂಪತೆ ತರದಿದ್ದಲ್ಲಿ ಪರಿಹಾರ ನೀಡಿದರೂ ಫಲಾನುಭವಿಗಳಿಗೆ ದೊರೆಯುವ ಸಾಧ್ಯತೆ ಕಡಿಮೆಯಾಗಲಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಹೀಗಾಗಿ ಈ ಎರಡೂ ವಿಷಯಗಳ ಕುರಿತು ತ್ವರಿತವಾಗಿ ತನ್ನ ನಿಲುವನ್ನು ತಿಳಿಸಲು ಕೋರ್ಟ್ ಸೂಚಿಸಿದೆ.

ಇದನ್ನೂ ಓದಿ: ಕೊವಿಡ್ ವಾರ್​ರೂಂನಲ್ಲಿ ಸಹಾಯವಾಣಿಗೆ ಕರೆ ಮಾಡಿದ ವ್ಯಕ್ತಿಗೆ ಸ್ವತಃ ಬೆಡ್ ವ್ಯವಸ್ಥೆ ಮಾಡಿದ ಸಿಎಂ ಯಡಿಯೂರಪ್ಪ

ಕೊವಿಡ್ ವಾರಿಯರ್ಸ್ ವಿರುದ್ಧ ಹಲ್ಲೆ ಮಾಡಿದರೆ ಕ್ರಮ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್

(Supreme Court asks central govt to give compensation of 4 lakh to covid death familly)

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು