AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯೋತ್ಪಾದಕ ಸಂಘಟನೆ ಸಿಮಿ ನಿಷೇಧ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗೆ ಪ್ರತಿ ಅಫಿಡವಿಟ್ ಸಲ್ಲಿಸುವಂತೆ ಕೇಂದ್ರಕ್ಕೆ ಸುಪ್ರೀಂ ಸೂಚನೆ

ನ್ಯಾಯಮೂರ್ತಿ ಎಸ್.ಕೆ.ಕೌಲ್ ನೇತೃತ್ವದ ಪೀಠವು ನಾಲ್ಕು ವಾರಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ಕೇಂದ್ರಕ್ಕೆ ಸೂಚಿಸಿದೆ

ಭಯೋತ್ಪಾದಕ ಸಂಘಟನೆ ಸಿಮಿ ನಿಷೇಧ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗೆ ಪ್ರತಿ ಅಫಿಡವಿಟ್ ಸಲ್ಲಿಸುವಂತೆ ಕೇಂದ್ರಕ್ಕೆ ಸುಪ್ರೀಂ ಸೂಚನೆ
ಸುಪ್ರೀಂಕೋರ್ಟ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Aug 31, 2022 | 2:31 PM

Share

ಭಯೋತ್ಪಾದಕ ಸಂಘಟನೆಯಾದ ಸ್ಟೂಡೆಂಟ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (SIMI) ಮೇಲಿನ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳಲ್ಲಿ ಪ್ರತಿ ಅಫಿಡವಿಟ್ ಸಲ್ಲಿಸಲು ಸುಪ್ರೀಂಕೋರ್ಟ್ (Supreme Court) ಮಂಗಳವಾರ ಕೇಂದ್ರಕ್ಕೆ ಕೊನೆಯ ಅವಕಾಶವನ್ನು ನೀಡಿದೆ. ನ್ಯಾಯಮೂರ್ತಿ ಎಸ್.ಕೆ.ಕೌಲ್ ನೇತೃತ್ವದ ಪೀಠವು ನಾಲ್ಕು ವಾರಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ಕೇಂದ್ರಕ್ಕೆ ಸೂಚಿಸಿದೆ. ನ್ಯಾಯಾಲಯವು ಮುಂದಿನ ನವೆಂಬರ್ 1 ರಂದು ಪ್ರಕರಣದ ವಿಚಾರಣೆ ನಡೆಸಲಿದೆ. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಈ ವಿಷಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮುಂದೆ ಹಲವಾರು ವಿಷಯಗಳಿವೆ ಎಂದು ಹೇಳಿದ್ದಾರೆ. 2001ರಲ್ಲಿ ಮೊದಲ ಬಾರಿಗೆ ಸಿಮಿ ಮೇಲೆ ನಿಷೇಧ ಹೇರಲಾಗಿದ್ದು, 2019ರಲ್ಲಿ ನವೀಕರಣಗೊಂಡಿರುವ ಕೊನೆಯ ನಿಷೇಧ 2024ರವರೆಗೆ ಮುಂದುವರಿಯಲಿದೆ ಎಂದು ತಿಳಿಸಿದರು.

ನಿಷೇಧವನ್ನು ವಿಸ್ತರಿಸಿದಾಗ ಅದು ಸರಳವಾದ ವಿಸ್ತರಣೆಯಲ್ಲ ಎಂದು ಪೀಠ ಹೇಳಿದೆ. ನ್ಯಾಯಮಂಡಳಿಯು ನಿಷೇಧವನ್ನು ಆದೇಶಿಸಿದಾಗ ಮತ್ತು ಎತ್ತಿಹಿಡಿಯುವಾಗ ಇದ್ದ ಅಂಶಗಳು ಮತ್ತು ವಸ್ತುಗಳು ಇನ್ನೂ ಅಸ್ತಿತ್ವದಲ್ಲಿವೆ ಎಂಬುದನ್ನು ಕೂಲಂಕಷವಾಗಿ ಪರಿಶೀಲಿಸಬೇಕಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪ್ರಕರಣದಲ್ಲಿ ಪ್ರತಿ ಅಫಿಡವಿಟ್ ಅನ್ನು ಸಲ್ಲಿಸಲು ಕೋರಿದರು. ಆದ್ದರಿಂದ ಪೀಠವು, ‘ಸಾಲಿಸಿಟರ್ ಜನರಲ್ ಅವರು ಪ್ರತಿ ಅಫಿಡವಿಟ್ ಸಲ್ಲಿಸಲು ಕೊನೆಯ ಅವಕಾಶವನ್ನು ಕೋರಿದ್ದಾರೆ. ಅದನ್ನು ನಾಲ್ಕು ವಾರಗಳಲ್ಲಿ ಸಲ್ಲಿಸಬೇಕು. ಯಾವುದೇ ರಿಜೋಯಿಂಡರ್  ಅಫಿಡವಿಟ್ ಸಲ್ಲಿಸಿದರೆ, ಅದನ್ನು ಎರಡು ವಾರಗಳಲ್ಲಿ ಸಲ್ಲಿಸಲಾಗುವುದು. ಕಕ್ಷಿದಾರರು ಸಂಕ್ಷಿಪ್ತ ಸಾರಾಂಶವನ್ನು ಸಲ್ಲಿಸಬೇಕಾಗಿದೆ ಮತ್ತು ಈ ವಿಷಯವನ್ನು ನವೆಂಬರ್ 1 ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ.

ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (ಸಿಮಿ) ಮೇಲಿನ ನಿಷೇಧವನ್ನು 2019 ರಲ್ಲಿ ಕೇಂದ್ರವು ಇನ್ನೂ 5 ವರ್ಷಗಳ ಕಾಲ ವಿಸ್ತರಿಸಿತ್ತು. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, 1967 ರ ಮೂಲಕ ನೀಡಲಾದ ಅಧಿಕಾರವನ್ನು ಚಲಾಯಿಸುವ ಮೂಲಕ ಸಿಮಿಯನ್ನು ನಿಷೇಧಿಸುವ ಅಧಿಸೂಚನೆಯನ್ನು ಕೇಂದ್ರವು ಅಂಗೀಕರಿಸಿದೆ. ಕೇಂದ್ರ ಸರ್ಕಾರವು ಸಿಮಿಯನ್ನು ‘ಕಾನೂನುಬಾಹಿರ ಸಂಘ’ ಎಂದು ಘೋಷಿಸಿದ್ದು, ಅಧಿಸೂಚನೆಯು ಐದು ವರ್ಷಗಳ ಅವಧಿಗೆ ಜಾರಿಯಲ್ಲಿರುತ್ತದೆ.

ಮಾಸ್ಕ್‌ಮ್ಯಾನ್ ಬಂಧನ: ಕೆಲ ಹೊತ್ತಲ್ಲೇ ಕೋರ್ಟ್​ಗೆ ಹಾಜರು ಸಾಧ್ಯತೆ
ಮಾಸ್ಕ್‌ಮ್ಯಾನ್ ಬಂಧನ: ಕೆಲ ಹೊತ್ತಲ್ಲೇ ಕೋರ್ಟ್​ಗೆ ಹಾಜರು ಸಾಧ್ಯತೆ
ವಿರೇಂದ್ರ ಪಪ್ಪಿ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ
ವಿರೇಂದ್ರ ಪಪ್ಪಿ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ
‘ತುಂಬಾ ಸಣ್ಣ ಜೀವನ, ಪಾಸಿಟಿವ್ ಆಗಿರೋಣ’; ರಾಗಿಣಿ ದ್ವಿವೇದಿ ಹೀಗ್ಯಾಕಂದ್ರು?
‘ತುಂಬಾ ಸಣ್ಣ ಜೀವನ, ಪಾಸಿಟಿವ್ ಆಗಿರೋಣ’; ರಾಗಿಣಿ ದ್ವಿವೇದಿ ಹೀಗ್ಯಾಕಂದ್ರು?
ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!