AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲವೂ ಕೇಂದ್ರದ ಆಜ್ಞೆಯ ಮೇರೆಗೆ ನಡೆಯಬೇಕು ಎಂದಾದರೆ ದೆಹಲಿಯಲ್ಲಿ ಚುನಾಯಿತ ಸರ್ಕಾರ ಏಕೆ ಬೇಕು: ಸುಪ್ರೀಂಕೋರ್ಟ್​

ಎಲ್ಲವೂ ಕೇಂದ್ರದ ಆಜ್ಞೆಯಂತೆಯೇ ನಡೆಯಬೇಕು ಎಂದಾದರೆ ದೆಹಲಿಯಲ್ಲಿ ಚುನಾಯಿತ ಸರ್ಕಾರ ಏಕೆ ಬೇಕು ಎಂದು ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್​ ಪ್ರಶ್ನಿಸಿದೆ.

ಎಲ್ಲವೂ ಕೇಂದ್ರದ ಆಜ್ಞೆಯ ಮೇರೆಗೆ ನಡೆಯಬೇಕು ಎಂದಾದರೆ ದೆಹಲಿಯಲ್ಲಿ ಚುನಾಯಿತ ಸರ್ಕಾರ ಏಕೆ ಬೇಕು: ಸುಪ್ರೀಂಕೋರ್ಟ್​
ಸುಪ್ರೀಂಕೋರ್ಟ್​
TV9 Web
| Edited By: |

Updated on: Jan 13, 2023 | 7:55 AM

Share

ಎಲ್ಲವೂ ಕೇಂದ್ರದ ಆಜ್ಞೆಯಂತೆಯೇ ನಡೆಯಬೇಕು ಎಂದಾದರೆ ದೆಹಲಿಯಲ್ಲಿ ಚುನಾಯಿತ ಸರ್ಕಾರ ಏಕೆ ಬೇಕು ಎಂದು ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್​ ಪ್ರಶ್ನಿಸಿದೆ. ಸೇವೆಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರ ಮತ್ತು ಕೇಂದ್ರದ ನಡುವಿನ ವಿವಾದದ ವಿಚಾರಣೆ ನಡೆಸುತ್ತಿರುವ ಐದು ನ್ಯಾಯಾಧೀಶರ ಸಂವಿಧಾನ ಪೀಠದ ಅಧ್ಯಕ್ಷತೆ ವಹಿಸಿದ್ದ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಈ ಕುರಿತು ಕೇಳಿದರು.

ಹಾಗಾದರೆ ಚುನಾಯಿತ ಸರ್ಕಾರವನ್ನು ಹೊಂದುವ ಉದ್ದೇಶವೇನು? ಕೇಂದ್ರ ಸರ್ಕಾರದ ಅಣತಿಯಂತೆ ಮಾತ್ರ ಆಡಳಿತ ನಡೆಸಬೇಕಾದರೆ ದೆಹಲಿ ಸರ್ಕಾರ ಇದ್ದೂ ಏನು ಪ್ರಯೋಜನ ಎಂದು ಪ್ರಶ್ನಿಸಿದರು. ಪೌರಕಾರ್ಮಿಕರ ವರ್ಗಾವಣೆ ಮತ್ತು ಪೋಸ್ಟಿಂಗ್‌ಗಳ ಮೇಲೆ ಆಡಳಿತಾತ್ಮಕ ನಿಯಂತ್ರಣಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರ ಮತ್ತು ಕೇಂದ್ರದ ನಡುವಿನ ವಿಷಯವನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ನ್ಯಾಯಮೂರ್ತಿಗಳಾದ ಎಂಆರ್ ಶಾ, ಕೃಷ್ಣ ಮುರಾರಿ, ಹಿಮಾ ಕೊಹ್ಲಿ ಮತ್ತು ಪಿಎಸ್ ನರಸಿಂಹ ಅವರ ಪೀಠವು ಮೆಹ್ತಾ ಅವರನ್ನು ಕೇಳಿದೆ.

ಮತ್ತಷ್ಟು ಓದಿ: ಕೇಜ್ರಿವಾಲ್​ಗೆ ಸಂಕಷ್ಟ: ರಾಜಕೀಯ ಜಾಹೀರಾತು ಪ್ರಕಟ ಆರೋಪ: AAPಗೆ 164 ಕೋಟಿ ರೂ ಹಿಂದಿರುಗಿಸುವಂತೆ ನೋಟಿಸ್

ಎಲ್ಲವೂ ಕೇಂದ್ರದ ಇಚ್ಛೆಯ ಮೇರೆಗೆ ದೆಹಲಿಯಲ್ಲಿ ಚುನಾಯಿತ ಸರ್ಕಾರವನ್ನು ಹೊಂದಿರುವುದು ಏತಕ್ಕೆ ಎಂದರು. ಕೇಂದ್ರದ ಪ್ರಕಾರ, ಶಿಕ್ಷಣ, ಪರಿಸರ ಇತ್ಯಾದಿಗಳಿಗೆ ಸಂಬಂಧಿಸಿದ ಹುದ್ದೆಗಳಿಗೆ ನೇಮಕಾತಿ ಮಾಡಲು ದೆಹಲಿ ಸರ್ಕಾರಕ್ಕೆ ಯಾವುದೇ ಹಕ್ಕಿಲ್ಲ ಎಂದು ಗಮನಿಸಿದ ಸುಪ್ರೀಂ ಕೋರ್ಟ್ ಮೆಹ್ತಾ ಅವರನ್ನು ಕೇಳಿತು.

ಕಾರ್ಯಾಂಗದ ನಿಯಂತ್ರಣವು ಕೇಂದ್ರದ ಬಳಿ ಇದ್ದರೆ, ದೆಹಲಿ ಸರ್ಕಾರವು ಶಾಸಕಾಂಗ ಅಧಿಕಾರವನ್ನು ಹೊಂದಿರುವುದರ ಅರ್ಥವೇನು ಎಂದು ಸುಪ್ರೀಂ ಕೋರ್ಟ್ ಕೇಳಿದೆ. ಒಬ್ಬ ಅಧಿಕಾರಿ ತನ್ನ ಪಾತ್ರವನ್ನು ನಿರ್ವಹಿಸದಿದ್ದರೆ, ಅವನನ್ನು ವರ್ಗಾವಣೆ ಮಾಡಿ ಬೇರೆಯವರನ್ನು ಕರೆತರುವಲ್ಲಿ ದೆಹಲಿ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲವೇ?.

ಕೇಂದ್ರಾಡಳಿತ ಪ್ರದೇಶವಾಗಿರುವುದರಿಂದ ದೆಹಲಿಯು ಸಂವಿಧಾನದ 308ನೇ ವಿಧಿಯ ಪ್ರಕಾರ ತನ್ನದೇ ಆದ ಅಧಿಕಾರಿಗಳನ್ನು ಹೊಂದಲು ಸಾಧ್ಯವಿಲ್ಲ ಎಂದು ಮೆಹ್ತಾ ಸೂಚಿಸಿದರು.

ಸುಪ್ರೀಂ ಕೋರ್ಟ್ ಈಗ ಜನವರಿ 17 ರಂದು ಪ್ರಕರಣದ ವಾದವನ್ನು ಆಲಿಸಲಿದೆ. ಸುಪ್ರೀಂ ಕೋರ್ಟ್ ಕಳೆದ ವರ್ಷ ಮೇ ತಿಂಗಳಲ್ಲಿ ದೆಹಲಿಯಲ್ಲಿ ಸೇವೆಗಳ ನಿಯಂತ್ರಣದ ವಿಷಯವನ್ನು ಐವರು ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ವರ್ಗಾಯಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ