AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD: ತಿರುಪತಿ ದೇವಸ್ಥಾನದಲ್ಲಿ ಅನಿಯಮಿತ ಪೂಜೆ ಆರೋಪ; ಸ್ಪಷ್ಟನೆ ನೀಡಲು ಟಿಟಿಡಿಗೆ ಸುಪ್ರೀಂ ಕೋರ್ಟ್ ಆದೇಶ

Tirupati Temple | ನಾವೆಲ್ಲರೂ ವೆಂಕಟೇಶ್ವರ ಸ್ವಾಮಿ ಭಕ್ತರಾಗಿದ್ದೇವೆ. ತಿರುಪತಿಯಲ್ಲಿ ಸಂಪ್ರದಾಯದ ಪ್ರಕಾರ ಎಲ್ಲ ಧಾರ್ಮಿಕ ಪೂಜಾ ವಿಧಿ-ವಿಧಾನಗಳು ಹಾಗೂ ಸೇವೆ ನಡೆಯಬೇಕೆಂಬುದು ನಾವು ಕೂಡ ಬಯಸುತ್ತೇವೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್​ವಿ ರಮಣ ಅರ್ಜಿದಾರರಿಗೆ ಹೇಳಿದ್ದಾರೆ.

TTD: ತಿರುಪತಿ ದೇವಸ್ಥಾನದಲ್ಲಿ ಅನಿಯಮಿತ ಪೂಜೆ ಆರೋಪ; ಸ್ಪಷ್ಟನೆ ನೀಡಲು ಟಿಟಿಡಿಗೆ ಸುಪ್ರೀಂ ಕೋರ್ಟ್ ಆದೇಶ
ತಿರುಪತಿ ದೇವಸ್ಥಾನ
TV9 Web
| Updated By: ಸುಷ್ಮಾ ಚಕ್ರೆ|

Updated on: Sep 29, 2021 | 5:15 PM

Share

ನವದೆಹಲಿ: ತಿರುಮಲ ತಿರುಪತಿ ದೇವಸ್ಥಾನದಲ್ಲಿ ಅನಿಯಮಿತವಾಗಿ ಸೇವೆ ಹಾಗೂ ಪೂಜೆಗಳನ್ನು ನಡೆಸಲಾಗುತ್ತಿದೆ ಎಂದು ಭಕ್ತರೊಬ್ಬರು ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಉಂಟಾಗಿರುವ ಕುಂದು ಕೊರತೆಯ ಬಗ್ಗೆ ಭಕ್ತರು ಮಾಡಿರುವ ಆರೋಪಕ್ಕೆ ಸ್ಪಷ್ಟನೆ ನೀಡಬೇಕು ಹಾಗೂ ಈ ಬಗ್ಗೆ ಕೋರ್ಟ್​ಗೂ ವಿವರಣೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್​ವಿ ರಮಣ, ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರನ್ನೊಳಗೊಂಡ ನ್ಯಾಯಪೀಠ ಈ ಬಗ್ಗೆ ಸಲ್ಲಿಕೆಯಾದ ವಿಶೇಷ ಅರ್ಜಿ ವಿಚಾರಣೆಯನ್ನು ಇಂದು ನಡೆಸಿತು. ಈ ಕುರಿತು ಆಂಧ್ರಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ತಿರುಪತಿಯನ್ನು ಎಲ್ಲ ಸೇವೆಗಳನ್ನೂ ನಿಯಮಿತವಾಗಿ ನಡೆಸುವಂತೆ ಆದೇಶ ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 6ಕ್ಕೆ ಸುಪ್ರೀಂ ಕೋರ್ಟ್ ನ್ಯಾಯಪೀಠ ಮುಂದಿನ ವಿಚಾರಣೆ ನಡೆಸಲಿದೆ. ಇದು ತಿರುಪತಿಯ ದೇವಸ್ಥಾನದ ಆಡಳಿತ ಮಂಡಳಿಗೆ ಸಂಬಂಧಿಸಿದ ವಿಷಯವಾಗಿದ್ದು, ಮುಂದಿನ ವಿಚಾರಣೆ ವೇಳೆಯೂ ಸುಪ್ರೀಂಕೋರ್ಟ್ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವ ಸಾಧ್ಯತೆಗಳು ಕಡಿಮೆ. ನಾವೆಲ್ಲರೂ ವೆಂಕಟೇಶ್ವರ ಸ್ವಾಮಿ ಭಕ್ತರಾಗಿದ್ದೇವೆ. ತಿರುಪತಿಯಲ್ಲಿ ಸಂಪ್ರದಾಯದ ಪ್ರಕಾರ ಎಲ್ಲ ಧಾರ್ಮಿಕ ಪೂಜಾ ವಿಧಿ-ವಿಧಾನಗಳು ಹಾಗೂ ಸೇವೆ ನಡೆಯಬೇಕೆಂಬುದು ನಾವು ಕೂಡ ಬಯಸುತ್ತೇವೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್​ವಿ ರಮಣ ಅರ್ಜಿದಾರರಿಗೆ ಹೇಳಿದ್ದಾರೆ.

ಹಾಗೇ, ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಇನ್ನು ಮುಂದೆ ಕೊವಿಡ್ ಎರಡೂ ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಅವಕಾಶ. ಅಥವಾ ಕೊರೊನಾ ನೆಗೆಟಿವ್ ವರದಿಯನ್ನು ನೀಡುವುದು ಕಡ್ಡಾಯ. ಅ. 1ರಿಂದ ಈ ಹೊಸ ನಿಯಮ ಜಾರಿಯಾಗಲಿದೆ. ಆಂಧ್ರಪ್ರದೇಶದಲ್ಲೂ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಈ ನಿಯಮವನ್ನು ಜಾರಿಗೊಳಿಸಲಾಗಿದೆ. ತಿಮ್ಮಪ್ಪನ ದರ್ಶನಕ್ಕೆ ಬರುವ ಭಕ್ತರಿಗೆ ಕೊರೊನಾ ನೆಗೆಟಿವ್ ರಿಪೋರ್ಟ್ ಅಥವಾ ಎರಡೋ ಡೋಸ್ ಕೊರೊನಾ ಲಸಿಕೆಯ ಸರ್ಟಿಫಿಕೆಟ್ ಎರಡರಲ್ಲಿ ಒಂದು ಕಡ್ಡಾಯವಾಗಿದೆ. ಕೊರೊನಾ ನೆಗೆಟಿವ್ ಸರ್ಟಿಫಿಕೆಟ್ ಕೂಡ 72 ಗಂಟೆಯೊಳಗೆ ಪಡೆದಿದ್ದಾಗಿರಬೇಕು.

ಇದನ್ನೂ ಓದಿ: TTD: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಕೊವಿಡ್ ನೆಗೆಟಿವ್ ಸರ್ಟಿಫಿಕೆಟ್, ಕೊರೊನಾ ಲಸಿಕೆ ಕಡ್ಡಾಯ

Hassan: ತಿರುಪತಿ ಮಾದರಿಯಲ್ಲಿ ಹಾಸನಾಂಬೆ ದರ್ಶನಕ್ಕೆ ಚಿಂತನೆ: ಜಿಲ್ಲಾಧಿಕಾರಿ ಆರ್ ಗಿರೀಶ್ ಹೇಳಿಕೆ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!