AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD: ತಿರುಪತಿ ದೇವಸ್ಥಾನದಲ್ಲಿ ಅನಿಯಮಿತ ಪೂಜೆ ಆರೋಪ; ಸ್ಪಷ್ಟನೆ ನೀಡಲು ಟಿಟಿಡಿಗೆ ಸುಪ್ರೀಂ ಕೋರ್ಟ್ ಆದೇಶ

Tirupati Temple | ನಾವೆಲ್ಲರೂ ವೆಂಕಟೇಶ್ವರ ಸ್ವಾಮಿ ಭಕ್ತರಾಗಿದ್ದೇವೆ. ತಿರುಪತಿಯಲ್ಲಿ ಸಂಪ್ರದಾಯದ ಪ್ರಕಾರ ಎಲ್ಲ ಧಾರ್ಮಿಕ ಪೂಜಾ ವಿಧಿ-ವಿಧಾನಗಳು ಹಾಗೂ ಸೇವೆ ನಡೆಯಬೇಕೆಂಬುದು ನಾವು ಕೂಡ ಬಯಸುತ್ತೇವೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್​ವಿ ರಮಣ ಅರ್ಜಿದಾರರಿಗೆ ಹೇಳಿದ್ದಾರೆ.

TTD: ತಿರುಪತಿ ದೇವಸ್ಥಾನದಲ್ಲಿ ಅನಿಯಮಿತ ಪೂಜೆ ಆರೋಪ; ಸ್ಪಷ್ಟನೆ ನೀಡಲು ಟಿಟಿಡಿಗೆ ಸುಪ್ರೀಂ ಕೋರ್ಟ್ ಆದೇಶ
ತಿರುಪತಿ ದೇವಸ್ಥಾನ
TV9 Web
| Edited By: |

Updated on: Sep 29, 2021 | 5:15 PM

Share

ನವದೆಹಲಿ: ತಿರುಮಲ ತಿರುಪತಿ ದೇವಸ್ಥಾನದಲ್ಲಿ ಅನಿಯಮಿತವಾಗಿ ಸೇವೆ ಹಾಗೂ ಪೂಜೆಗಳನ್ನು ನಡೆಸಲಾಗುತ್ತಿದೆ ಎಂದು ಭಕ್ತರೊಬ್ಬರು ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಉಂಟಾಗಿರುವ ಕುಂದು ಕೊರತೆಯ ಬಗ್ಗೆ ಭಕ್ತರು ಮಾಡಿರುವ ಆರೋಪಕ್ಕೆ ಸ್ಪಷ್ಟನೆ ನೀಡಬೇಕು ಹಾಗೂ ಈ ಬಗ್ಗೆ ಕೋರ್ಟ್​ಗೂ ವಿವರಣೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್​ವಿ ರಮಣ, ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರನ್ನೊಳಗೊಂಡ ನ್ಯಾಯಪೀಠ ಈ ಬಗ್ಗೆ ಸಲ್ಲಿಕೆಯಾದ ವಿಶೇಷ ಅರ್ಜಿ ವಿಚಾರಣೆಯನ್ನು ಇಂದು ನಡೆಸಿತು. ಈ ಕುರಿತು ಆಂಧ್ರಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ತಿರುಪತಿಯನ್ನು ಎಲ್ಲ ಸೇವೆಗಳನ್ನೂ ನಿಯಮಿತವಾಗಿ ನಡೆಸುವಂತೆ ಆದೇಶ ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 6ಕ್ಕೆ ಸುಪ್ರೀಂ ಕೋರ್ಟ್ ನ್ಯಾಯಪೀಠ ಮುಂದಿನ ವಿಚಾರಣೆ ನಡೆಸಲಿದೆ. ಇದು ತಿರುಪತಿಯ ದೇವಸ್ಥಾನದ ಆಡಳಿತ ಮಂಡಳಿಗೆ ಸಂಬಂಧಿಸಿದ ವಿಷಯವಾಗಿದ್ದು, ಮುಂದಿನ ವಿಚಾರಣೆ ವೇಳೆಯೂ ಸುಪ್ರೀಂಕೋರ್ಟ್ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವ ಸಾಧ್ಯತೆಗಳು ಕಡಿಮೆ. ನಾವೆಲ್ಲರೂ ವೆಂಕಟೇಶ್ವರ ಸ್ವಾಮಿ ಭಕ್ತರಾಗಿದ್ದೇವೆ. ತಿರುಪತಿಯಲ್ಲಿ ಸಂಪ್ರದಾಯದ ಪ್ರಕಾರ ಎಲ್ಲ ಧಾರ್ಮಿಕ ಪೂಜಾ ವಿಧಿ-ವಿಧಾನಗಳು ಹಾಗೂ ಸೇವೆ ನಡೆಯಬೇಕೆಂಬುದು ನಾವು ಕೂಡ ಬಯಸುತ್ತೇವೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್​ವಿ ರಮಣ ಅರ್ಜಿದಾರರಿಗೆ ಹೇಳಿದ್ದಾರೆ.

ಹಾಗೇ, ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಇನ್ನು ಮುಂದೆ ಕೊವಿಡ್ ಎರಡೂ ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಅವಕಾಶ. ಅಥವಾ ಕೊರೊನಾ ನೆಗೆಟಿವ್ ವರದಿಯನ್ನು ನೀಡುವುದು ಕಡ್ಡಾಯ. ಅ. 1ರಿಂದ ಈ ಹೊಸ ನಿಯಮ ಜಾರಿಯಾಗಲಿದೆ. ಆಂಧ್ರಪ್ರದೇಶದಲ್ಲೂ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಈ ನಿಯಮವನ್ನು ಜಾರಿಗೊಳಿಸಲಾಗಿದೆ. ತಿಮ್ಮಪ್ಪನ ದರ್ಶನಕ್ಕೆ ಬರುವ ಭಕ್ತರಿಗೆ ಕೊರೊನಾ ನೆಗೆಟಿವ್ ರಿಪೋರ್ಟ್ ಅಥವಾ ಎರಡೋ ಡೋಸ್ ಕೊರೊನಾ ಲಸಿಕೆಯ ಸರ್ಟಿಫಿಕೆಟ್ ಎರಡರಲ್ಲಿ ಒಂದು ಕಡ್ಡಾಯವಾಗಿದೆ. ಕೊರೊನಾ ನೆಗೆಟಿವ್ ಸರ್ಟಿಫಿಕೆಟ್ ಕೂಡ 72 ಗಂಟೆಯೊಳಗೆ ಪಡೆದಿದ್ದಾಗಿರಬೇಕು.

ಇದನ್ನೂ ಓದಿ: TTD: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಕೊವಿಡ್ ನೆಗೆಟಿವ್ ಸರ್ಟಿಫಿಕೆಟ್, ಕೊರೊನಾ ಲಸಿಕೆ ಕಡ್ಡಾಯ

Hassan: ತಿರುಪತಿ ಮಾದರಿಯಲ್ಲಿ ಹಾಸನಾಂಬೆ ದರ್ಶನಕ್ಕೆ ಚಿಂತನೆ: ಜಿಲ್ಲಾಧಿಕಾರಿ ಆರ್ ಗಿರೀಶ್ ಹೇಳಿಕೆ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ