ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಖಚಿತಪಡಿಸಿಕೊಳ್ಳಲು ನೀವೇನು ಮಾಡುತ್ತಿದ್ದೀರಿ?: ತ್ರಿಪುರಾ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

Tripura civic Polls ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಲು ನೀವು ಏನು ಮಾಡುತ್ತಿದ್ದೀರಿ ಎಂದು ನಾವು ತಿಳಿದುಕೊಳ್ಳಲು ಬಯಸುತ್ತೇವೆ. ಎಣಿಕೆ ಯಾವಾಗ ಮತ್ತು ಇಂದು ಮತ್ತು ಎಣಿಕೆಯ ದಿನದ ನಡುವೆ ಏನೂ ಆಗದಂತೆ ನೀವು ಯಾವ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೀರಿ?" ಎಂದು ತ್ರಿಪುರಾ ಸರ್ಕಾರಕ್ಕೆ ಕೇಳಿದ ಸುಪ್ರೀಂಕೋರ್ಟ್.

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಖಚಿತಪಡಿಸಿಕೊಳ್ಳಲು ನೀವೇನು ಮಾಡುತ್ತಿದ್ದೀರಿ?: ತ್ರಿಪುರಾ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ
ಪ್ರಾತಿನಿಧಿಕ ಚಿತ್ರ
Follow us
| Updated By: ರಶ್ಮಿ ಕಲ್ಲಕಟ್ಟ

Updated on: Nov 23, 2021 | 12:42 PM

ದೆಹಲಿ: ತ್ರಿಪುರಾದಲ್ಲಿ(Tripura) ಸ್ಥಳೀಯ ಸಂಸ್ಥೆಗಳು ಚುನಾವಣೆ (civic body elections)ಹತ್ತಿರ ಬರುತ್ತಿದ್ದಂತೆ  ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ (TMC) ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್(Supreme Court) ಮಂಗಳವಾರ ಮತದಾನದ ಸಮಯದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ವಿವರವಾದ ಹೇಳಿಕೆಯನ್ನು ನೀಡಿ ಎಂದು ಬಿಪ್ಲಬ್ ದೇಬ್ (Biplab Deb) ಸರ್ಕಾರಕ್ಕೆ ಸೂಚಿಸಿದೆ. “ನೀವು ನಿಮ್ಮ ಮನೆಯಲ್ಲಿ ಪ್ರತ್ಯೇಕವಾಗಿರುತ್ತೀರಿ ಎಂದು ನಮಗೆ ತಿಳಿದಿದೆ. ನಾವು ಏನು ಮಾಡುತ್ತೇವೆ ಎಂದರೆ ನಾವು ನಿಮಗೆ ಒಂದೂವರೆ ಗಂಟೆ ಸಮಯ ನೀಡುತ್ತೇವೆ. ಇಂದು ಮತ್ತು ನಾಳೆ ಮತಗಟ್ಟೆಗಳಲ್ಲಿ ಯಾವ ರೀತಿಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಮತ್ತು ಫಲಿತಾಂಶ ಪ್ರಕಟವಾಗುವವರೆಗೆ ಮತದಾನದ ದಿನದ ಸುರಕ್ಷತಾ ಕ್ರಮಗಳ ಬಗ್ಗೆ ಪೊಲೀಸ್ ಮತ್ತು ಗೃಹ ಕಾರ್ಯದರ್ಶಿಯಿಂದ ವಿವರವಾದ ಸೂಚನೆಗಳನ್ನು ತೆಗೆದುಕೊಳ್ಳಿ, ”ಎಂದು ಸುಪ್ರೀಂಕೋರ್ಟ್ ಹೇಳಿರುವುದಾಗಿ ಬಾರ್ ಅಂಡ್ ಬೆಂಚ್ ವರದಿ ಮಾಡಿದೆ. ಈ ವಿವರವಾದ ಸೂಚನೆಗಳನ್ನು ತೆಗೆದುಕೊಳ್ಳಿ ಮತ್ತು ಮಧ್ಯಾಹ್ನ 12:45 ಕ್ಕೆ ಹಿಂತಿರುಗಿ. ಇಂದು ನೀವು ಯಾವ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವಿರಿ, ಚುನಾವಣಾ ಪೂರ್ವ ಪ್ರಕ್ರಿಯೆ, ಫಲಿತಾಂಶಗಳ ಘೋಷಣೆಯವರೆಗಿನ ಮತದಾನ ಪ್ರಕ್ರಿಯೆಯ ಕುರಿತು ನೀವು ಹೇಳಿಕೆ ನೀಡಬೇಕೆಂದು ನಾವು ಬಯಸುತ್ತೇವೆ, ”ಎಂದು ನ್ಯಾಯಾಧೀಶರು ಹೇಳಿದ್ದಾರೆ.

ವಿಚಾರಣೆಯ ಆರಂಭದಲ್ಲಿ ಟಿಎಂಸಿಯ ವಕೀಲರು, ತ್ರಿಪುರಾದಲ್ಲಿ ನಡೆದ ಹಲವಾರು ಹಿಂಸಾಚಾರದ ಘಟನೆಗಳ ಬಗ್ಗೆ ಮಾತನಾಡಿದರು. ಈ ಸ್ಕ್ರೀನ್‌ಶಾಟ್‌ಗಳಲ್ಲಿ ಹಿಂಸಾಚಾರ ನಡೆಯುತ್ತಿರುವಾಗ ಪೊಲೀಸರು ನಿಂತಿದ್ದಾರೆ ಮತ್ತು ಏನನ್ನೂ ಮಾಡುತ್ತಿಲ್ಲ ಎಂಬುದನ್ನು ನೀವು ನೋಡಬಹುದು” ಎಂದು ಟಿಎಂಸಿ ವಕೀಲರು  ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯವು ತ್ರಿಪುರಾ ಸರ್ಕಾರದ ವಕೀಲ ಮಹೇಶ್ ಜೇಠ್ಮಲಾನಿ ಅವರಲ್ಲಿ “ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಲು ನೀವು ಏನು ಮಾಡುತ್ತಿದ್ದೀರಿ ಎಂದು ನಾವು ತಿಳಿದುಕೊಳ್ಳಲು ಬಯಸುತ್ತೇವೆ. ಎಣಿಕೆ ಯಾವಾಗ ಮತ್ತು ಇಂದು ಮತ್ತು ಎಣಿಕೆಯ ದಿನದ ನಡುವೆ ಏನೂ ಆಗದಂತೆ ನೀವು ಯಾವ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೀರಿ?” ಎಂದು ಕೇಳಿದೆ.

ಈ ಪ್ರಕರಣದ ವಿಚಾರಣೆಯನ್ನು ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠ ನಡೆಸಿತು. ನವೆಂಬರ್ 11 ರಂದು ಟಿಎಂಸಿಯ ಮನವಿಯನ್ನು ಆಲಿಸಿದ ಸುಪ್ರೀಂಕೋರ್ಟ್, ಯಾವುದೇ ರಾಜಕೀಯ ಪಕ್ಷವು “ಕಾನೂನಿಗೆ ಅನುಸಾರವಾಗಿ ತನ್ನ ಚುನಾವಣಾ ಹಕ್ಕುಗಳನ್ನು ಅನುಸರಿಸುವುದರಿಂದ ಮತ್ತು ಶಾಂತಿಯುತ ಮತ್ತು ಕ್ರಮಬದ್ಧವಾಗಿ ಪ್ರಚಾರ ಮಾಡುವುದನ್ನು ತಡೆಯುವುದಿಲ್ಲ” ಎಂದು ಖಚಿತಪಡಿಸಿಕೊಳ್ಳಲು ತ್ರಿಪುರಾ ಸರ್ಕಾರವನ್ನು ಕೇಳಿದೆ. ನ್ಯಾಯಾಲಯವು ತನ್ನ ಆದೇಶದ ಬೆಳಕಿನಲ್ಲಿ ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ವಿವರಿಸುವ ಅಫಿಡವಿಟ್ ಸಲ್ಲಿಸಲು ಮತ್ತು ಚುನಾವಣೆ ಪ್ರಕ್ರಿಯೆಯು ಮುಕ್ತ ಮತ್ತು ನ್ಯಾಯಸಮ್ಮತವಾಗಿ ಉಳಿದಿದೆ ಎಂದು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಇದನ್ನೂ ಓದಿ: ಕೃಷಿ ಕಾನೂನುಗಳು ಜನಪ್ರಿಯವಾಗಿವೆ ಎಂದು ತೋರಿಸುತ್ತಿದೆ ಸಿವೋಟರ್ ಸಮೀಕ್ಷೆ; ಮೋದಿ ಅವರ ಮೌಲ್ಯಮಾಪನ ಸರಿಯಾಗಿದೆ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ