AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gyanvapi Mosque Case: ಜ್ಞಾನವಾಪಿ ಮಸೀದಿಯಲ್ಲಿ ‘ಶಿವಲಿಂಗ’ ವೈಜ್ಞಾನಿಕ ಸಮೀಕ್ಷೆಗೆ ಅನುಮತಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ಜ್ಞಾನವಾಪಿ ಮಸೀದಿಯಲ್ಲಿ 'ಶಿವಲಿಂಗ' ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್​ ತಡೆ ನೀಡಿದೆ.

Gyanvapi Mosque Case: ಜ್ಞಾನವಾಪಿ ಮಸೀದಿಯಲ್ಲಿ 'ಶಿವಲಿಂಗ' ವೈಜ್ಞಾನಿಕ ಸಮೀಕ್ಷೆಗೆ ಅನುಮತಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:May 19, 2023 | 4:51 PM

Share

ದೆಹಲಿ: ಜ್ಞಾನವಾಪಿ ಮಸೀದಿಯಲ್ಲಿ (Gyanvapi Mosque) ‘ಶಿವಲಿಂಗ’ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್​ ತಡೆ ನೀಡಿದೆ. ಕಳೆದ ವರ್ಷ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಕಂಡುಬಂದ ಶಿವಲಿಂಗದ ವೈಜ್ಞಾನಿಕ ಸಮೀಕ್ಷೆಗೆ ಅವಕಾಶ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಜ್ಞಾನವಾಪಿ ಮಸೀದಿ ಆಡಳಿತ ಸಮಿತಿಯ ಮೇಲ್ಮನವಿಯ ಮೇರೆಗೆ ಈ ಆದೇಶ ನೀಡಲಾಗಿದೆ.

ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಕಂಡುಬಂದಿರುವ ಶಿವಲಿಂಗದ ಕುರಿತು ವೈಜ್ಞಾನಿಕ ಸಮೀಕ್ಷೆಯನ್ನು ಮಾಡದಂತೆ ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ನಾವು ಈ ವಿಷಯದಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಹಾಕಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: Gyanvapi Mosque case: ಏ.14ಕ್ಕೆ ಜ್ಞಾನವಾಪಿ ಮಸೀದಿ ವಿಚಾರಣೆ, ಮಸೀದಿ ಆವರಣದೊಳಗೆ ಶುಚಿಗೊಳಿಸಲು ಅವಕಾಶ

ಶಿವಲಿಂಗದ ಬಗ್ಗೆ ವೈಜ್ಞಾನಿಕ ಸಮೀಕ್ಷೆ ನಡೆಸುವ ಬಗ್ಗೆ ಮೇ 12 ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಈ ಬಗ್ಗೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಈ ಆದೇಶದ ಪರಿಣಾಮಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲು ಅವಕಾಶ ಮಾಡಬೇಕು, ಈಗಾಗಲೇ ಹೈಕೋರ್ಟ್​​ ನೀಡಲಾಗಿರುವ ಆದೇಶವನ್ನು ತಡೆಹಿಡಿದು, ಮುಂದಿನ ತಿಂಗಳು ಈ ಬಗ್ಗೆ ವಿಚಾರಣೆ ಮಾಡಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಹೇಳಿದೆ.

ಶಿವಲಿಂಗದ ವೈಜ್ಞಾನಿಕ ಸಮೀಕ್ಷೆ ಮತ್ತು ಕಾರ್ಬನ್ ಡೇಟಿಂಗ್‌ಗೆ ಹೈಕೋರ್ಟ್ ಆದೇಶದ ವಿರುದ್ಧ ಮಸೀದಿ ಸಮಿತಿಯ ಮನವಿಯ ಕುರಿತು ಪೀಠವು ಕೇಂದ್ರ, ಉತ್ತರ ಪ್ರದೇಶ ಸರ್ಕಾರ ಮತ್ತು ಹಿಂದೂ ಸಂಘಟನೆ ಅರ್ಜಿದಾರರಿಗೆ ನೋಟಿಸ್ ಜಾರಿ ಮಾಡಿದೆ. ಶಿವಲಿಂಗದ ಉದ್ದೇಶಿತ ವೈಜ್ಞಾನಿಕ ಸಮೀಕ್ಷೆಯನ್ನು ಸದ್ಯಕ್ಕೆ ಮುಂದೂಡಲು ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರ ಎರಡೂ ಒಪ್ಪಿಕೊಂಡಿವೆ.

Published On - 3:50 pm, Fri, 19 May 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್