AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gyanvapi Mosque Case: ಜ್ಞಾನವಾಪಿ ಮಸೀದಿಯಲ್ಲಿ ‘ಶಿವಲಿಂಗ’ ವೈಜ್ಞಾನಿಕ ಸಮೀಕ್ಷೆಗೆ ಅನುಮತಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ಜ್ಞಾನವಾಪಿ ಮಸೀದಿಯಲ್ಲಿ 'ಶಿವಲಿಂಗ' ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್​ ತಡೆ ನೀಡಿದೆ.

Gyanvapi Mosque Case: ಜ್ಞಾನವಾಪಿ ಮಸೀದಿಯಲ್ಲಿ 'ಶಿವಲಿಂಗ' ವೈಜ್ಞಾನಿಕ ಸಮೀಕ್ಷೆಗೆ ಅನುಮತಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:May 19, 2023 | 4:51 PM

Share

ದೆಹಲಿ: ಜ್ಞಾನವಾಪಿ ಮಸೀದಿಯಲ್ಲಿ (Gyanvapi Mosque) ‘ಶಿವಲಿಂಗ’ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್​ ತಡೆ ನೀಡಿದೆ. ಕಳೆದ ವರ್ಷ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಕಂಡುಬಂದ ಶಿವಲಿಂಗದ ವೈಜ್ಞಾನಿಕ ಸಮೀಕ್ಷೆಗೆ ಅವಕಾಶ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಜ್ಞಾನವಾಪಿ ಮಸೀದಿ ಆಡಳಿತ ಸಮಿತಿಯ ಮೇಲ್ಮನವಿಯ ಮೇರೆಗೆ ಈ ಆದೇಶ ನೀಡಲಾಗಿದೆ.

ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಕಂಡುಬಂದಿರುವ ಶಿವಲಿಂಗದ ಕುರಿತು ವೈಜ್ಞಾನಿಕ ಸಮೀಕ್ಷೆಯನ್ನು ಮಾಡದಂತೆ ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ನಾವು ಈ ವಿಷಯದಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಹಾಕಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: Gyanvapi Mosque case: ಏ.14ಕ್ಕೆ ಜ್ಞಾನವಾಪಿ ಮಸೀದಿ ವಿಚಾರಣೆ, ಮಸೀದಿ ಆವರಣದೊಳಗೆ ಶುಚಿಗೊಳಿಸಲು ಅವಕಾಶ

ಶಿವಲಿಂಗದ ಬಗ್ಗೆ ವೈಜ್ಞಾನಿಕ ಸಮೀಕ್ಷೆ ನಡೆಸುವ ಬಗ್ಗೆ ಮೇ 12 ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಈ ಬಗ್ಗೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಈ ಆದೇಶದ ಪರಿಣಾಮಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲು ಅವಕಾಶ ಮಾಡಬೇಕು, ಈಗಾಗಲೇ ಹೈಕೋರ್ಟ್​​ ನೀಡಲಾಗಿರುವ ಆದೇಶವನ್ನು ತಡೆಹಿಡಿದು, ಮುಂದಿನ ತಿಂಗಳು ಈ ಬಗ್ಗೆ ವಿಚಾರಣೆ ಮಾಡಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಹೇಳಿದೆ.

ಶಿವಲಿಂಗದ ವೈಜ್ಞಾನಿಕ ಸಮೀಕ್ಷೆ ಮತ್ತು ಕಾರ್ಬನ್ ಡೇಟಿಂಗ್‌ಗೆ ಹೈಕೋರ್ಟ್ ಆದೇಶದ ವಿರುದ್ಧ ಮಸೀದಿ ಸಮಿತಿಯ ಮನವಿಯ ಕುರಿತು ಪೀಠವು ಕೇಂದ್ರ, ಉತ್ತರ ಪ್ರದೇಶ ಸರ್ಕಾರ ಮತ್ತು ಹಿಂದೂ ಸಂಘಟನೆ ಅರ್ಜಿದಾರರಿಗೆ ನೋಟಿಸ್ ಜಾರಿ ಮಾಡಿದೆ. ಶಿವಲಿಂಗದ ಉದ್ದೇಶಿತ ವೈಜ್ಞಾನಿಕ ಸಮೀಕ್ಷೆಯನ್ನು ಸದ್ಯಕ್ಕೆ ಮುಂದೂಡಲು ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರ ಎರಡೂ ಒಪ್ಪಿಕೊಂಡಿವೆ.

Published On - 3:50 pm, Fri, 19 May 23

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ