AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Supreme Court: ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಆರೋಗ್ಯದಲ್ಲಿ ಏರುಪೇರು

ಭಾರತದ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್​​ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರು ಇಂದು ಯಾವುದೇ ಪ್ರಕರಣದ ಬಗ್ಗೆ ವಿಚಾರಣೆ ನಡೆಸುವುದಿಲ್ಲ

Supreme Court: ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಆರೋಗ್ಯದಲ್ಲಿ ಏರುಪೇರು
ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್​​
ಅಕ್ಷಯ್​ ಪಲ್ಲಮಜಲು​​
|

Updated on: Jul 28, 2023 | 12:02 PM

Share

ದೆಹಲಿ, ಜು.28: ಭಾರತದ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್​​ (DY Chandrachud) ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರು ಇಂದು ಯಾವುದೇ ಪ್ರಕರಣದ ಬಗ್ಗೆ ವಿಚಾರಣೆ ನಡೆಸುವುದಿಲ್ಲ ಎಂದು ಸುಪ್ರೀಂ ಕೋರ್ಟ್​ನಿಂದ ಅಧಿಕೃತ ಪತ್ರವೊಂದನ್ನು ಹೊರಡಿಸಲಾಗಿದೆ. ಈ ಪತ್ರದಲ್ಲಿ ತಿಳಿಸಿರುವಂತೆ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್​​ ಅವರು 28.7.2023ರಂದು ಯಾವುದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುವುದಿಲ್ಲ. ಮುಖ್ಯ ನ್ಯಾಯಮೂರ್ತಿ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠದ ವ್ಯಾಪ್ತಿಗೆ ಬರುವ ಯಾವುದೇ ಪ್ರಕರಣದ ಬಗ್ಗೆ ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಿಲ್ಲ. ಇಂದು ನಡೆಯಬೇಕಿದ್ದ ವಿಚಾರಣೆಯನ್ನು ಮುಂದೂಡಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರು ಈಗ ಏಕಸದಸ್ಯ ಪೀಠದ ವಿಚಾರಣೆಯನ್ನು ಮಾತ್ರ ಕೈಗೆತ್ತಿಕೊಳ್ಳಲಿದ್ದಾರೆ. ಅಂದರೆ 28.07.2023ರಂದು ನ್ಯಾಯಾಲಯದ 10ನೇ ಕೊಠಡಿಯಲ್ಲಿ 11.30ಗೆ ವರ್ಗಾವಣೆ ಅರ್ಜಿಗಳನ್ನು ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ:ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳ ವೇತನ, ಸರ್ಕಾರಿ ಸೌಲಭ್ಯಗಳೇನು? 

ಇಂದು ಡಿ.ವೈ ಚಂದ್ರಚೂಡ್​​ ಅವರು ವಿಚಾರಣೆ ನಡೆಸಬೇಕಿದ್ದ ಪ್ರಮುಖ ಪ್ರಕರಣಗಳು

1. ಮಣಿಪುರ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದ ಮತ್ತು ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೈರಲ್ ವೀಡಿಯೊದ ಪ್ರಕರಣದ ಕುರಿತು ವಿಚಾರಣೆ ನಡೆಸಬೇಕಿತ್ತು.

2. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿ ರುಜಿರಾ ಅವರ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಬೇಕಿತ್ತು.

3. ಬೇರೆ ಬೇರೆ ಹತ್ಯೆ ಪ್ರಕರಣಗಳ ಬಗ್ಗೆ ಇಂದು ವಿಚಾರಣೆ ನಡೆಸಬೇಕಿತ್ತು. ಅದರಲ್ಲಿ ಒಂದು ಕುಖ್ಯಾತ ನಿಥಾರಿ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಮೊನೀಂದರ್ ಸಿಂಗ್ ಪಂಧೇರ್ ಅವರ ಮನವಿಯನ್ನು ನ್ಯಾಯಾಲಯವು ವಿಚಾರಣೆಗೆ ನಿಗದಿಪಡಿಸಿತ್ತು.

4. ಇನ್ನೂ ಹಲವು ಪ್ರಮುಖ ಪ್ರಕರಣದ ಕುರಿತು ವಿಚಾರಣೆ ಮತ್ತು ಆದೇಶಗಳನ್ನು ನೀಡಬೇಕಿತ್ತು ಎಂದು ಹೇಳಲಾಗಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ