AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Supreme Court: ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಆರೋಗ್ಯದಲ್ಲಿ ಏರುಪೇರು

ಭಾರತದ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್​​ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರು ಇಂದು ಯಾವುದೇ ಪ್ರಕರಣದ ಬಗ್ಗೆ ವಿಚಾರಣೆ ನಡೆಸುವುದಿಲ್ಲ

Supreme Court: ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಆರೋಗ್ಯದಲ್ಲಿ ಏರುಪೇರು
ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್​​
ಅಕ್ಷಯ್​ ಪಲ್ಲಮಜಲು​​
|

Updated on: Jul 28, 2023 | 12:02 PM

Share

ದೆಹಲಿ, ಜು.28: ಭಾರತದ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್​​ (DY Chandrachud) ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರು ಇಂದು ಯಾವುದೇ ಪ್ರಕರಣದ ಬಗ್ಗೆ ವಿಚಾರಣೆ ನಡೆಸುವುದಿಲ್ಲ ಎಂದು ಸುಪ್ರೀಂ ಕೋರ್ಟ್​ನಿಂದ ಅಧಿಕೃತ ಪತ್ರವೊಂದನ್ನು ಹೊರಡಿಸಲಾಗಿದೆ. ಈ ಪತ್ರದಲ್ಲಿ ತಿಳಿಸಿರುವಂತೆ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್​​ ಅವರು 28.7.2023ರಂದು ಯಾವುದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುವುದಿಲ್ಲ. ಮುಖ್ಯ ನ್ಯಾಯಮೂರ್ತಿ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠದ ವ್ಯಾಪ್ತಿಗೆ ಬರುವ ಯಾವುದೇ ಪ್ರಕರಣದ ಬಗ್ಗೆ ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಿಲ್ಲ. ಇಂದು ನಡೆಯಬೇಕಿದ್ದ ವಿಚಾರಣೆಯನ್ನು ಮುಂದೂಡಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರು ಈಗ ಏಕಸದಸ್ಯ ಪೀಠದ ವಿಚಾರಣೆಯನ್ನು ಮಾತ್ರ ಕೈಗೆತ್ತಿಕೊಳ್ಳಲಿದ್ದಾರೆ. ಅಂದರೆ 28.07.2023ರಂದು ನ್ಯಾಯಾಲಯದ 10ನೇ ಕೊಠಡಿಯಲ್ಲಿ 11.30ಗೆ ವರ್ಗಾವಣೆ ಅರ್ಜಿಗಳನ್ನು ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ:ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳ ವೇತನ, ಸರ್ಕಾರಿ ಸೌಲಭ್ಯಗಳೇನು? 

ಇಂದು ಡಿ.ವೈ ಚಂದ್ರಚೂಡ್​​ ಅವರು ವಿಚಾರಣೆ ನಡೆಸಬೇಕಿದ್ದ ಪ್ರಮುಖ ಪ್ರಕರಣಗಳು

1. ಮಣಿಪುರ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದ ಮತ್ತು ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೈರಲ್ ವೀಡಿಯೊದ ಪ್ರಕರಣದ ಕುರಿತು ವಿಚಾರಣೆ ನಡೆಸಬೇಕಿತ್ತು.

2. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿ ರುಜಿರಾ ಅವರ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಬೇಕಿತ್ತು.

3. ಬೇರೆ ಬೇರೆ ಹತ್ಯೆ ಪ್ರಕರಣಗಳ ಬಗ್ಗೆ ಇಂದು ವಿಚಾರಣೆ ನಡೆಸಬೇಕಿತ್ತು. ಅದರಲ್ಲಿ ಒಂದು ಕುಖ್ಯಾತ ನಿಥಾರಿ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಮೊನೀಂದರ್ ಸಿಂಗ್ ಪಂಧೇರ್ ಅವರ ಮನವಿಯನ್ನು ನ್ಯಾಯಾಲಯವು ವಿಚಾರಣೆಗೆ ನಿಗದಿಪಡಿಸಿತ್ತು.

4. ಇನ್ನೂ ಹಲವು ಪ್ರಮುಖ ಪ್ರಕರಣದ ಕುರಿತು ವಿಚಾರಣೆ ಮತ್ತು ಆದೇಶಗಳನ್ನು ನೀಡಬೇಕಿತ್ತು ಎಂದು ಹೇಳಲಾಗಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More