AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಸ್ಥಾನಕ್ಕೆ ಎನ್​.ವಿ.ರಮಣ ಹೆಸರನ್ನು ಶಿಫಾರಸು ಮಾಡಿದ ಸಿಜಿಐ ಬೋಬ್ಡೆ..; ಕೇಂದ್ರ ಸಚಿವರ ಪತ್ರಕ್ಕೆ ಉತ್ತರ

ಕಳೆದವರ್ಷ ಅಕ್ಟೋಬರ್​ನಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್​.ಜಗನ್​ ಮೋಹನ್​ ರೆಡ್ಡಿ ಮತ್ತು ಎನ್​.ವಿ.ರಮಣ ಮಧ್ಯೆ ವಿವಾದವೊಂದು ಎದ್ದಿತ್ತು. ಜಗನ್​ ಮೋಹನ್​ ರೆಡ್ಡಿಯವರು ರಮಣ ವಿರುದ್ಧ ಗಂಭೀರ ಆರೋಪ ಮಾಡಿ, ಸಿಜೆಐ ಬೋಬ್ಡೆಯವರಿಗೆ ಪತ್ರ ಬರೆದಿದ್ದರು.

ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಸ್ಥಾನಕ್ಕೆ ಎನ್​.ವಿ.ರಮಣ ಹೆಸರನ್ನು ಶಿಫಾರಸು ಮಾಡಿದ ಸಿಜಿಐ ಬೋಬ್ಡೆ..; ಕೇಂದ್ರ ಸಚಿವರ ಪತ್ರಕ್ಕೆ ಉತ್ತರ
ಎನ್.ವಿ.ರಮಣ ಮತ್ತು ಎಸ್​.ಎ.ಬೋಬ್ಡೆ
Follow us
Lakshmi Hegde
|

Updated on: Mar 24, 2021 | 2:17 PM

ದೆಹಲಿ: ಸುಪ್ರೀಂಕೋರ್ಟ್​​ ಮುಖ್ಯ ನ್ಯಾಯಮೂರ್ತಿ ಎಸ್​.ಎ.ಬೋಬ್ಡೆ ಏಪ್ರಿಲ್​ನಲ್ಲಿ ನಿವೃತ್ತಿಯಾಗಲಿದ್ದು, ಅವರ ನಂತರ ಸಿಜೆಐ ಸ್ಥಾನವನ್ನು ಯಾರು ವಹಿಸಿಕೊಳ್ಳಲಿದ್ದಾರೆ ಎಂಬ ಪ್ರಶ್ನೆ ಸಹಜವಾಗಿಯೇ ಎದ್ದಿದೆ. ಈ ಮಧ್ಯೆ ಎಸ್​. ಎ.ಬೊಬ್ಡೆ ತಮ್ಮ ಉತ್ತರಾಧಿಕಾರಿಯನ್ನಾಗಿ ಎನ್​. ವಿ.ರಮಣ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ. ಬೋಬ್ಡೆ 2019ರ ನವೆಂಬರ್​ 18ರಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ಏಪ್ರಿಲ್​ 23ರಂದು ನಿವೃತ್ತರಾಗಲಿದ್ದಾರೆ. ನಿಮ್ಮ ಉತ್ತರಾಧಿಕಾರಿಯನ್ನಾಗಿ ಯಾರ ಹೆಸರನ್ನು ಹೇಳುತ್ತೀರಿ ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್​ ಪತ್ರ ಬರೆದಿದ್ದರು. ಇದಕ್ಕೆ ಉತ್ತರಿಸಿದ ಬೋಬ್ಡೆ ಎನ್​​ವಿ ರಮಣ ಹೆಸರನ್ನೇ ಸ್ಪಷ್ಟಪಡಿಸಿದ್ದಾರೆ.

ಮುಂದಿನ ಸಿಜೆಐ ಹುದ್ದೆಗೆ ನ್ಯಾಯಮೂರ್ತಿ ರಮಣ (64) ಅವರ ಹೆಸರೇ ಬಲವಾಗಿ ಕೇಳಿಬರುತ್ತಿದ್ದು, ಇವರು ಮೂಲತಃ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯವರು. 1983ರ ಫೆಬ್ರವರಿ 10ರಿಂದ ವಕೀಲಿ ವೃತ್ತಿಯನ್ನು ಪ್ರಾರಂಭಿಸಿದರು. 2000 ರ ಜೂನ್​ 27ರಿಂದ-2013ರ ಸೆಪ್ಟೆಂಬರ್​ 1ರವರೆಗೆ ಆಂಧ್ರಪ್ರದೇಶ ಹೈಕೋರ್ಟ್​ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸಿದ್ದ ರಮಣ ಅವರನ್ನು, 2013ರ ಸೆಪ್ಟೆಂಬರ್​ 2ರಂದು ದೆಹಲಿ ಹೈಕೋರ್ಟ್​ನ ಮುಖ್ಯ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಯಿತು. 2014ರ ಫೆಬ್ರವರಿ 16ರವರೆಗೆ ಇದೇ ಹುದ್ದೆಯಲ್ಲಿ ಮುಂದುವರಿದರು. ಈ ಮಧ್ಯೆ 2013ರ ಮಾರ್ಚ್​ 10ರಿಂದ ಮೇ 20ರವರೆಗೆ ಆಂಧ್ರಪ್ರದೇಶ ಹೈಕೋರ್ಟ್​ನ ಮುಖ್ಯನ್ಯಾಯಮೂರ್ತಿ ಹುದ್ದೆಯನ್ನೂ ಎನ್​.ವಿ.ರಮಣ ಅವರೇ ನಿಭಾಯಿಸಿದ್ದರು.

ಅದಾದ ಬಳಿಕ 2014ರ ಫೆಬ್ರವರಿ 17ರಂದು ಸುಪ್ರಿಂಕೋರ್ಟ್ ಜಡ್ಜ್​ ಆಗಿ ನೇಮಕಗೊಂಡಿದ್ದಾರೆ. 2022ರ ಆಗಸ್ಟ್​ 22ಕ್ಕೆ ನಿವೃತ್ತಿಯಾಗಲಿದ್ದಾರೆ. ಇವರೀಗ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದರೆ ಒಂದು ವರ್ಷದವರೆಗೆ ಹುದ್ದೆಯಲ್ಲಿ ಮುಂದುವರಿಯಬಹುದಾಗಿದೆ. ಇನ್ನು ಬೋಬ್ಡೆಯವರ ನಂತರ ಇರುವ ಅತ್ಯಂತ ಹಿರಿಯ ನ್ಯಾಯಮೂರ್ತಿಗಳೂ ಎನ್​.ವಿ.ರಮಣ ಅವರೇ ಆಗಿದ್ದಾರೆ.

ವಿವಾದಕ್ಕೂ ಒಳಪಟ್ಟಿದ್ದರು ಕಳೆದವರ್ಷ ಅಕ್ಟೋಬರ್​ನಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್​.ಜಗನ್​ ಮೋಹನ್​ ರೆಡ್ಡಿ ಮತ್ತು ಎನ್​.ವಿ.ರಮಣ ಮಧ್ಯೆ ವಿವಾದವೊಂದು ಎದ್ದಿತ್ತು. ಜಗನ್​ ಮೋಹನ್​ ರೆಡ್ಡಿಯವರು ರಮಣ ವಿರುದ್ಧ ಗಂಭೀರ ಆರೋಪ ಮಾಡಿ, ಸಿಜೆಐ ಬೋಬ್ಡೆಯವರಿಗೆ ಪತ್ರ ಬರೆದಿದ್ದರು. ನ್ಯಾ. ರಮಣ ಅವರು ಆಂಧ್ರಪ್ರದೇಶ ಹೈಕೋರ್ಟ್​ನ ಕಾರ್ಯದಲ್ಲಿ, ಇಲ್ಲಿನ ನ್ಯಾಯಮೂರ್ತಿಗಳ ಸಭೆಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು. ತಮ್ಮ ಮೇಲಿನ ಆರೋಪಕ್ಕೆ ರಮಣ ಅವರು ಶಾಂತವಾಗಿಯೇ ಪ್ರತಿಕ್ರಿಯೆ ನೀಡಿದ್ದರು. ಎಲ್ಲ ಒತ್ತಡಗಳು, ಅಡೆತಡೆಗಳನ್ನು ಧೈರ್ಯವಾಗಿ ಎದುರಿಸುವ ಸ್ವಭಾವವನ್ನು ಪ್ರತಿ ನ್ಯಾಯಾಧೀಶರೂ ಅಳವಡಿಸಿಕೊಳ್ಳುವುದು ತುಂಬ ಮುಖ್ಯ ಎಂದಿದ್ದರು.

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ