AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹೈಕೋರ್ಟ್​ನ 10 ಹೆಚ್ಚುವರಿ ನ್ಯಾಯಾಧೀಶರ ಖಾಯಂ ನೇಮಕಾತಿಗೆ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸ್ಸು; ಇಲ್ಲಿದೆ ಪಟ್ಟಿ

ಕೇರಳ ಹೈಕೋರ್ಟ್​ ಜಡ್ಜ್​ಗಳ ಖಾಯಂಗಾಗಿ ಒಂದು ಮತ್ತು ಕರ್ನಾಟಕದ 10 ಹೆಚ್ಚುವರಿ ನ್ಯಾಯಾಧೀಶರ ಸಂಬಂಧ ಎರಡು ಪ್ರಕಟಣೆಯನ್ನು ಸುಪ್ರೀಂಕೋರ್ಟ್​ ಕೊಲಿಜಿಯಂ ಬಿಡುಗಡೆ ಮಾಡಿದೆ.

ಕರ್ನಾಟಕ ಹೈಕೋರ್ಟ್​ನ 10 ಹೆಚ್ಚುವರಿ ನ್ಯಾಯಾಧೀಶರ ಖಾಯಂ ನೇಮಕಾತಿಗೆ  ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸ್ಸು; ಇಲ್ಲಿದೆ ಪಟ್ಟಿ
ಸುಪ್ರೀಂಕೋರ್ಟ್​
TV9 Web
| Edited By: |

Updated on: Sep 08, 2021 | 6:11 PM

Share

ಕರ್ನಾಟಕ ಹೈಕೋರ್ಟ್ (Karnataka Highcourt)​ನ 10 ನ್ಯಾಯಾಧೀಶರು ಮತ್ತು ಕೇರಳ ಹೈಕೋರ್ಟ್ (Kerala Highcourt)​ನ ಇಬ್ಬರು ನ್ಯಾಯಾಧೀಶರನ್ನು ಆಯಾ ಹೈಕೋರ್ಟ್​ನಲ್ಲಿ ಖಾಯಂ ಮಾಡುವಂತೆ ನಿನ್ನೆ (ಸೆಪ್ಟೆಂಬರ್​ 8) ಸುಪ್ರೀಂಕೋರ್ಟ್(Supreme Court)​ನ ಕೊಲಿಜಿಯಂ ಶಿಫಾರಸ್ಸು ಮಾಡಿ, ಈ ಸಂಬಂಧ ಮೂರು ಪ್ರಕಟಣೆ ಹೊರಡಿಸಿದೆ.  ಕೇರಳ ಹೈಕೋರ್ಟ್​ ಜಡ್ಜ್​ಗಳ ಖಾಯಂಗಾಗಿ ಒಂದು ಮತ್ತು ಕರ್ನಾಟಕದ 10 ಹೆಚ್ಚುವರಿ ನ್ಯಾಯಾಧೀಶರ ಸಂಬಂಧ ಎರಡು ಪ್ರಕಟಣೆಯನ್ನು ಸುಪ್ರೀಂಕೋರ್ಟ್​ ಕೊಲಿಜಿಯಂ ಬಿಡುಗಡೆ ಮಾಡಿದೆ. 

ಇದೀಗ ಖಾಯಂ ನೇಮಕಾತಿಗಾಗಿ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿರುವ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ಇವರು.. 1. ನ್ಯಾಯಾಧೀಶ ಶಿವಶಂಕರ್​ ಅಮರಣ್ಣವರ್​ 2. ನ್ಯಾ.ಎಂ.ಗಣೇಶಯ್ಯ ಉಮಾ 3. ಜಸ್ಟೀಸ್​ ವೇದವ್ಯಾಸಾಚಾರ್​ ಶ್ರೀಶಾನಂದಾ 4. ಜಸ್ಟೀಸ್​ ಹಂಚಾಟೆ ಸಂಜೀವ್​ಕುಮಾರ್​ 5. ನ್ಯಾ.ಪದ್ಮರಾಜ್​ ನೇಮಾಚಂದ್ರ ದೇಸಾಯಿ 6. ಜಸ್ಟೀಸ್ ಪಿ.ಕೃಷ್ಣ ಭಟ್​ 7. ನ್ಯಾ.ಮರಲೂರ್​ ಇಂದ್ರಕುಮಾರ್ ಅರುಣ್​ 8. ಜಸ್ಟೀಸ್​ ಎಂಗಲಗುಪ್ಪೆ ಸೀತಾರಾಮಯ್ಯ ಇಂದಿರೇಶ್​ 9. ನ್ಯಾ.ರವಿ ವೆಂಕಪ್ಪ ಹೊಸ್ಮನಿ 10. ಸವಣೂರ್​ ವಿಶ್ವಜಿತ್ ಶೆಟ್ಟಿ

ಹಾಗೇ, ಕೇರಳ ಹೈಕೋರ್ಟ್ ಹೆಚ್ಚುವರಿ ನ್ಯಾಯಾಧೀಶರ ಪಟ್ಟಿ ಹೀಗಿದೆ.. 1.ಎಂ.ಆರ್​.ಅನಿತಾ 2.ಕೆ.ನಾಯರ್ ಹರಿಪಾಲ್​

ಕೇರಳದ ಈ ಇಬ್ಬರಲ್ಲಿ ಎಂ.ಆರ್​.ಅನಿತಾ 2020ರ ಮಾರ್ಚ್​ನಲ್ಲಿ ಮತ್ತು ಕೆ.ನಾಯರ್ ಹರಿಪಾಲ್​ ಮೇ ಅದೇ ವರ್ಷ ಮೇ ತಿಂಗಳಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು. ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಾಧೀಶರ ಪೈಕಿ, ನ್ಯಾ.ಇಂದ್ರಕುಮಾರ್ ಅರುಣ್​ ಮತ್ತು ನ್ಯಾ.ರವಿ ವೆಂಕಪ್ಪ ಹೊಸ್ಮನಿ 2020ರ ಜನವರಿಯಲ್ಲಿ, ನ್ಯಾ. ವಿಶ್ವಜಿತ್ ಶೆಟ್ಟಿಯವರು 2020ರ ಏಪ್ರಿಲ್​ನಲ್ಲಿ ಹೈಕೋರ್ಟ್​ಗೆ ನೇಮಕಗೊಂಡಿದ್ದಾರೆ. ಉಳಿದ ಆರೂ ನ್ಯಾಯಾಧೀಶರು 2020ರ ಮೇ ತಿಂಗಳಲ್ಲಿ ನೇಮಕಗೊಂಡವರು.

ಇದನ್ನೂ ಓದಿ: ಅಸ್ಸಾಂನ ಬ್ರಹ್ಮಪುತ್ರ ನದಿಯಲ್ಲಿ 100 ಪ್ರಯಾಣಿಕರಿದ್ದ ಬೋಟ್​ಗಳು ಡಿಕ್ಕಿ; ದುರಂತದಲ್ಲಿ ನಾಪತ್ತೆಯಾದವರಿಗಾಗಿ ಶೋಧ ಕಾರ್ಯ

ನವೆಂಬರ್​ನಲ್ಲಿ ಇನ್​ವೆಸ್ಟ್ ಕರ್ನಾಟಕ ಹೂಡಿಕೆ ಸಮಾವೇಶ: ಮುರುಗೇಶ್ ನಿರಾಣಿ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​