AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕವಿತಾಗೆ ಜಾಮೀನು ನೀಡಿದ್ದಕ್ಕೆ ಟೀಕೆ ಮಾಡಿದ ತೆಲಂಗಾಣ ಸಿಎಂಗೆ ಸುಪ್ರೀಂಕೋರ್ಟ್ ತರಾಟೆ

ಅವರು ಹೇಳಿದ್ದನ್ನು ನೀವು ಪತ್ರಿಕೆಯಲ್ಲಿ ಓದಿದ್ದೀರಾ? ಅವರು ಹೇಳಿರುವುದನ್ನು ಓದಿ. ಒಬ್ಬ ಜವಾಬ್ದಾರಿಯುತ ಮುಖ್ಯಮಂತ್ರಿ ನೀಡುವ ಹೇಳಿಕೆಯೇ ಇದು?. ಅವರ ಹೇಳಿಕೆ ಜನರ ಮನಸ್ಸಿನಲ್ಲಿ ಆತಂಕವನ್ನು ಉಂಟುಮಾಡಬಹುದು. ಇದು ಮುಖ್ಯಮಂತ್ರಿಯೊಬ್ಬರು ಮಾಡಬೇಕಾದ ಹೇಳಿಕೆಯೇ? ಸಾಂವಿಧಾನಿಕ ಅಧಿಕಾರಿಯೊಬ್ಬರು ಈ ರೀತಿ ಮಾತನಾಡುತ್ತಿದ್ದಾರೆಯೇ? ಎಂದು ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠವು ರೆಡ್ಡಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರಿಗೆ ಹೇಳಿದೆ.

ಕವಿತಾಗೆ ಜಾಮೀನು ನೀಡಿದ್ದಕ್ಕೆ ಟೀಕೆ ಮಾಡಿದ ತೆಲಂಗಾಣ ಸಿಎಂಗೆ ಸುಪ್ರೀಂಕೋರ್ಟ್ ತರಾಟೆ
ಸುಪ್ರೀಂಕೋರ್ಟ್
ರಶ್ಮಿ ಕಲ್ಲಕಟ್ಟ
|

Updated on: Aug 29, 2024 | 8:01 PM

Share

ದೆಹಲಿ ಆಗಸ್ಟ್ 29: ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ನಾಯಕಿ ಕೆ ಕವಿತಾಗೆ (K Kavitha ) ಜಾಮೀನು ನೀಡಿದ್ದಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ (Revanth Reddy) ಮಾಡಿದ ಟೀಕೆಗಳಿಗೆ ಸುಪ್ರೀಂಕೋರ್ಟ್ (Supreme Court)  ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರಂತಹ ಇತರರಿಗೆ ಜಾಮೀನು ನಿರಾಕರಿಸಲಾಗಿದೆ. ಆದರೆ ಕವಿತಾ ಅವರು ಕೇವಲ ಐದು ತಿಂಗಳ ನಂತರ ಜಾಮೀನು ಪಡೆದದ್ದು ಹೇಗೆ ಎಂದು ರೆಡ್ಡಿ ಸಾರ್ವಜನಿಕವಾಗಿ ಪ್ರಶ್ನಿಸಿದ್ದರು.

2024ರ ಲೋಕಸಭಾ ಚುನಾವಣೆಯಲ್ಲಿ ಬಿಆರ್‌ಎಸ್ ಬಿಜೆಪಿ ಗೆಲುವಿಗೆ ಶ್ರಮಿಸಿದ್ದು ಸತ್ಯ. ಬಿಆರ್‌ಎಸ್ ಮತ್ತು ಬಿಜೆಪಿ ನಡುವಿನ ಡೀಲ್‌ನಿಂದಾಗಿ ಕವಿತಾಗೆ ಜಾಮೀನು ಸಿಕ್ಕಿದೆ ಎಂಬ ಮಾತು ಕೂಡ ಇದೆ ಎಂದು ತೆಲಂಗಾಣ ಮುಖ್ಯಮಂತ್ರಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದದ ವೇಳೆ ಆರೋಪಿಸಿದ್ದರು.

ತೆಲಂಗಾಣ ಸಿಎಂ ಹೇಳಿಕೆಗೆ ಸುಪ್ರೀಂಕೋರ್ಟ್ ಹೇಳಿದ್ದೇನು?

ರೆಡ್ಡಿಯವರ ಹೇಳಿಕೆಯಿಂದ ಕೆರಳಿದ ಸುಪ್ರೀಂಕೋರ್ಟ್, ಇದು ನ್ಯಾಯಾಂಗದ ಬಗ್ಗೆ ಜನರ ಮನಸ್ಸಿನಲ್ಲಿ ಆತಂಕವನ್ನು ಉಂಟುಮಾಡಬಹುದು ಎಂದು ಹೇಳಿದೆ.  “ಅವರು ಹೇಳಿದ್ದನ್ನು ನೀವು ಪತ್ರಿಕೆಯಲ್ಲಿ ಓದಿದ್ದೀರಾ? ಅವರು ಹೇಳಿರುವುದನ್ನು ಓದಿ. ಒಬ್ಬ ಜವಾಬ್ದಾರಿಯುತ ಮುಖ್ಯಮಂತ್ರಿ ನೀಡುವ ಹೇಳಿಕೆಯೇ ಇದು?. ಅವರ ಹೇಳಿಕೆ ಜನರ ಮನಸ್ಸಿನಲ್ಲಿ ಆತಂಕವನ್ನು ಉಂಟುಮಾಡಬಹುದು. ಇದು ಮುಖ್ಯಮಂತ್ರಿಯೊಬ್ಬರು ಮಾಡಬೇಕಾದ ಹೇಳಿಕೆಯೇ? ಸಾಂವಿಧಾನಿಕ ಅಧಿಕಾರಿಯೊಬ್ಬರು ಈ ರೀತಿ ಮಾತನಾಡುತ್ತಿದ್ದಾರೆಯೇ? ಎಂದು ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠವು ರೆಡ್ಡಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರಿಗೆ ಹೇಳಿದೆ.

“ರಾಜಕೀಯ ಪೈಪೋಟಿಯಲ್ಲಿ ಅವರು ನ್ಯಾಯಾಲಯವನ್ನು ಏಕೆ ಎಳೆಯಬೇಕು? ನಾವು ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚನೆ ಮಾಡಿ ಆದೇಶಗಳನ್ನು ನೀಡುತ್ತೇವೆಯೇ?. ರಾಜಕಾರಣಿಗಳಿಂದ ಅಥವಾ ಯಾರಾದರೂ ನಮ್ಮ ಆದೇಶಗಳನ್ನು ಟೀಕಿಸಿದರೆ ನಮಗೆ ತೊಂದರೆಯಾಗುವುದಿಲ್ಲ. ನಾವು ಆತ್ಮಸಾಕ್ಷಿ ಮತ್ತು ಪ್ರಮಾಣ ವಚನದಂತೆ ನಮ್ಮ ಕರ್ತವ್ಯವನ್ನು ಮಾಡುತ್ತೇವೆ” ಎಂದು ಪೀಠ ಹೇಳಿದೆ.

ಇದನ್ನೂ ಓದಿ: ‘ಬಂಗಾಳವನ್ನು ಸುಟ್ಟರೆ…’; ಪ್ರಧಾನಿ ಮೋದಿಗೆ ಎಚ್ಚರಿಕೆ ನೀಡಿದ ಮಮತಾ ಬ್ಯಾನರ್ಜಿ ವಿರುದ್ಧ ದೂರು

ಸಂಸ್ಥೆಗಳ ಬಗ್ಗೆ ಪರಸ್ಪರ ಗೌರವವನ್ನು ಹೊಂದುವುದು ಮತ್ತು ಒಂದು ತೋಳಿನ ಅಂತರವನ್ನು ಕಾಯ್ದುಕೊಳ್ಳುವುದು ಮೂಲಭೂತ ಕರ್ತವ್ಯ ಎಂದು ಸುಪ್ರೀಂಕೋರ್ಟ್ ಹೇಳಿದೆ.

“ನಾವು ಯಾವಾಗಲೂ ಶಾಸಕಾಂಗದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳುತ್ತೇವೆ, ಆಗ ಅವರಿಂದಲೂ ಅದನ್ನು ನಿರೀಕ್ಷಿಸಲಾಗುತ್ತದೆ. ನಾವು ರಾಜಕೀಯ ಪರಿಗಣನೆಗಳ ಮೇಲೆ ಆದೇಶಗಳನ್ನು ನೀಡುತ್ತೇವೆಯೇ?” ಎಂದು ನ್ಯಾಯಮೂರ್ತಿಗಳಾದ ಪಿ ಕೆ ಮಿಶ್ರಾ ಮತ್ತು ಕೆ ವಿ ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ಕೇಳಿದೆ. ರೆಡ್ಡಿ ಆರೋಪಿಯಾಗಿರುವ 2015ರ ವೋಟಿಗಾಗಿ ನಗದು ಹಗರಣ ಪ್ರಕರಣದ ವಿಚಾರಣೆಯನ್ನು ತೆಲಂಗಾಣದಿಂದ ಭೋಪಾಲ್‌ಗೆ ವರ್ಗಾಯಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಡೆಸುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ