AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chandigarh mayoral polls: ಎಎಪಿಯ ಕುಲದೀಪ್ ಕುಮಾರ್ ಚಂಡೀಗಢ ಮೇಯರ್ ಎಂದು ಘೋಷಿಸಿದ ಸುಪ್ರೀಂಕೋರ್ಟ್

Kuldeep Kumar: ಚಂಡೀಗಢ ಮೇಯರ್ ಚುನಾವಣೆಯಲ್ಲಿ ಮತಪತ್ರ ತಿರುಚಿದ ಆರೋಪದ ಕುರಿತು ಇಂದು(ಮಂಗಳವಾರ) ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಚುನಾವಣಾ ಅಧಿಕಾರಿ ಅಸಿಂಧು ಎಂದು ಘೋಷಿಸಿದ ಮತಗಳನ್ನು ಮಾನ್ಯವೆಂದು ಪರಿಗಣಿಸಬೇಕು ಮತ್ತು ಮರುಎಣಿಕೆ ನಡೆಸಬೇಕು ಎಂದು ಹೇಳಿದ್ದು ಎಎಪಿಯ ಕುಲದೀಪ್ ಕುಮಾರ್ ಮೇಯರ್ ಎಂದು ಘೋಷಿಸಿದೆ.

Chandigarh mayoral polls: ಎಎಪಿಯ ಕುಲದೀಪ್ ಕುಮಾರ್ ಚಂಡೀಗಢ ಮೇಯರ್ ಎಂದು ಘೋಷಿಸಿದ ಸುಪ್ರೀಂಕೋರ್ಟ್
ಕುಲದೀಪ್ ಕುಮಾರ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Feb 20, 2024 | 5:24 PM

Share

ದೆಹಲಿ  ಫೆಬ್ರುವರಿ 20: ಚಂಡೀಗಢ ಮೇಯರ್ ಚುನಾವಣೆಯಲ್ಲಿ (Chandigarh mayoral election) ಎಎಪಿಯ ಕುಲದೀಪ್ ಕುಮಾರ್ (Kuldeep Kumar) ವಿಜೇತ ಎಂದು ಸುಪ್ರೀಂಕೋರ್ಟ್ (Supreme Court) ಘೋಷಿಸಿದೆ. ಮತಪತ್ರ ತಿರುಚಿದ ಆರೋಪದ ಕುರಿತು ಇಂದು(ಮಂಗಳವಾರ) ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಚುನಾವಣಾ ಅಧಿಕಾರಿ ಅಸಿಂಧು ಎಂದು ಘೋಷಿಸಿದ ಮತಗಳನ್ನು ಮಾನ್ಯವೆಂದು ಪರಿಗಣಿಸಬೇಕು ಮತ್ತು ಮರುಎಣಿಕೆ ನಡೆಸಬೇಕು ಎಂದು ಹೇಳಿದೆ.ಜನವರಿ 30 ರಂದು ನಡೆದ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಕುಲದೀಪ್ ಕುಮಾರ್ ವಿರುದ್ಧ ಬಿಜೆಪಿ  ಗೆಲುವು ಸಾಧಿಸಿತ್ತು. ಚುನಾವಣಾಧಿಕಾರಿಯು ಸಮ್ಮಿಶ್ರ ಪಾಲುದಾರರ ಎಂಟು ಮತಗಳನ್ನು ಅಸಿಂಧು ಎಂದು ಘೋಷಿಸಿದ್ದರಿಂದ ಕುಲದೀಪ್ ಸೋತಿದ್ದರು. ಇದೀಗ ಚುನಾವಣಾ ಅಧಿಕಾರಿ ಅಸಿಂಧು ಎಂದು ಘೋಷಿಸಿದ ಮತ ಅಸಿಂಧು ಅಲ್ಲ ಎಂದು ಹೇಳಿದ ನ್ಯಾಯಾಲಯ, ಎಎಪಿಯ ಕುಲದೀಪ್ ಕುಮಾರ್ ಅವರನ್ನು ಮೇಯರ್ ಎಂದು ಘೋಷಿಸಿದೆ.

ಸುಪ್ರೀಂ ತೀರ್ಪು  ನಂತರ ಸುದ್ದಿಸಂಸ್ಥೆ ಪಿಟಿಐ ಜತೆ ಮಾತನಾಡಿದ ಕುಲದೀಪ್ ಕುಮಾರ್,  ನಾನು ಸುಪ್ರೀಂ ಕೋರ್ಟ್‌ಗೆ ಧನ್ಯವಾದ ಹೇಳಲು ಬಯಸುತ್ತೇನೆ. ಇದು ಚಂಡೀಗಢದ ಜನತೆ ಮತ್ತು ಇಂಡಿಯಾ ಮೈತ್ರಿಕೂಟದ ಗೆಲುವಾಗಿದೆ. ಬಿಜೆಪಿಯನ್ನು ಅಜೇಯ ಅಲ್ಲ ಎಂಬುದನ್ನು ಇದು ತೋರಿಸುತ್ತದೆ.  ನಾವು ಒಗ್ಗಟ್ಟಾಗಿ ಇದ್ದರೆ ಅವರನ್ನು ಸೋಲಿಸಬಹುದು ಎಂದು ಹೇಳಿದ್ದಾರೆ.

ಮೇಯರ್ ಕುಲದೀಪ್ ಕುಮಾರ್ ಮಾತು

ಚಂಡೀಗಢದ ಮೇಯರ್ ಆಗಿ ಆಪ್ ಕುಲದೀಪ್ ಕುಮಾರ್ ಅವರನ್ನು ಸುಪ್ರೀಂ ಕೋರ್ಟ್ ಘೋಷಿಸಿದ್ದು ಬಿಜೆಪಿಗೆ ದೊಡ್ಡ  ಮಟ್ಟದ ಹಿನ್ನಡೆ  ಆಗಿದೆ

ಅಮಾನ್ಯಗೊಂಡ ಎಲ್ಲಾ ಎಂಟು ಮತಪತ್ರಗಳು ಆಪ್ ಮೇಯರ್ ಅಭ್ಯರ್ಥಿ ಕುಲದೀಪ್ ಕುಮಾರ್ ಪರವಾಗಿ ಚಲಾವಣೆಯಾದ ಮತಗಳು. ಅವು ಅಸಿಂಧುವಲ್ಲ. ಈ ಎಂಟು ಮತಗಳನ್ನು ಮಾನ್ಯವೆಂದು ಪರಿಗಣಿಸಬೇಕು ಎಂದು ಅದು ನಿರ್ದೇಶಿಸಿದ ಸುಪ್ರೀಂಕೋರ್ಟ್, ಅದರ ಆಧಾರದ ಮೇಲೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಿತ್ತು.

“ನಾವು ಮೇಯರ್ ಚುನಾವಣಾ ಫಲಿತಾಂಶವನ್ನು ರದ್ದುಗೊಳಿಸುವಂತೆ ನಿರ್ದೇಶಿಸುತ್ತೇವೆ” ಎಂದು ಸುಪ್ರೀಂ ಕೋರ್ಟ್  “ಚಂಡೀಗಢ ಮೇಯರ್ ಚುನಾವಣೆಯ ಚುನಾವಣಾಧಿಕಾರಿ ಅನಿಲ್ ಮಸಿಹ್ ವಿರುದ್ಧ ಸೆಕ್ಷನ್ 340 CrPC ಅಡಿಯಲ್ಲಿ ವಿಚಾರಣೆಯನ್ನು ಪ್ರಾರಂಭಿಸಲು ಆದೇಶಿಸಿದೆ. ಅದೇ ವೇಳೆ  ಅವರ ವಿರುದ್ಧ ಏಕೆ ಕ್ರಮಕೈಗೊಳ್ಳಬಾರದು ಎಂಬುದಕ್ಕೆ ಕಾರಣ ತೋರಿಸಲು ನೋಟಿಸ್ ನೀಡುವಂತೆ ರಿಜಿಸ್ಟ್ರಾರ್ ಜುಡಿಷಿಯಲ್ ಅವರಿಗೆ ನಿರ್ದೇಶನ ನೀಡಿದೆ.

ಇದನ್ನೂ ಓದಿ: ಚಂಡೀಗಢ ಮೇಯರ್ ಚುನಾವಣೆ: 8 ಮತಗಳು ಅಸಿಂಧು ಅಲ್ಲ, ಮರುಎಣಿಕೆಗೆ ಸುಪ್ರೀಂಕೋರ್ಟ್ ಆದೇಶ

ಚುನಾವಣೆಯಲ್ಲಿ ಬಿಜೆಪಿ ಮನೋಜ್ ಸೋಂಕರ್  16 ಮತಗಳಿಸಿದರೆ,   ಕುಲದೀಪ್  ಕುಮಾರ್ 12 ಮತಗಳಿಸಿದ್ದರು. ಮೇಯರ್ ಚುನಾವಣೆಯಲ್ಲಿ  ಗೆದ್ದ ಮನೋಜ್ ಆಮೇಲೆ ರಾಜೀನಾಮೆ ನೀಡಿದ್ದರು.

ಇತ್ತ ಚುನಾವಣಾ ಅಧಿಕಾರಿ ಬ್ಯಾಲೆಟ್ ಪೇಪರ್ ತಿರುಚಿದ್ದಾರೆ ಎಂದು ಆರೋಪಿಸಿ ಕೋರ್ಟ್ ಮೆಟ್ಟಿಲೇರಿತ್ತು. ಚುನಾವಣಾ ಅಧಿಕಾರಿ ಬ್ಯಾಲೆಟ್  ಪೇಪರ್ ಮೇಲೆ ಗೆರೆ ಎಳೆಯುವುದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು.  ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಚುನಾವಣಾ ಅಧಿಕಾರಿ ಅನಿಲ್ ಮಸಿಹ್ ಅವರನ್ನು ತರಾಟೆಗೆ ತೆಗೆದುಕೊಂಡಿತ್ತು. ಎಂಟು ಮತ ಪತ್ರಗಳನ್ನು ತಿರುಚಿದ್ದರಿಂದಲೇ  ಕುಲದೀಪ್ ಅವರು ಚುನಾವಣೆಯಲ್ಲಿ ಪರಾಭವಗೊಂಡಿದ್ದರು.  ಬ್ಯಾಲೆಟ್ ಪೇಪರ್ ತಿರುಚಿದ್ದರ ಬಗ್ಗೆ ಕೋರ್ಟ್ ಪ್ರಶ್ನಿಸಿದಾಗ  ಬ್ಯಾಲೆಟ್ ಪೇಪರ್‌ಗಳು ಮಿಶ್ರವಾಗದಂತೆ ನೋಡಿಕೊಳ್ಳಲು ‘X’ ಗುರುತು ಹಾಕಿದ್ದಾಗಿ ಚುನಾವಣಾಧಿಕಾರಿ ಒಪ್ಪಿಕೊಂಡಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:47 pm, Tue, 20 February 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!