AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಯ ವ್ಯರ್ಥ ಮಾಡದೆ ಕೋವಿಡ್​​ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡಿ: ರಾಜ್ಯಗಳಿಗೆ ಸುಪ್ರೀಂ ನಿರ್ದೇಶನ

ನ್ಯಾಯಮೂರ್ತಿ ಎಂಆರ್ ಶಾ ಮತ್ತು ಬಿ.ವಿ. ನಾಗರತ್ನ ಅವರ ನ್ಯಾಯಪೀಠವು ಯಾವುದೇ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಲಭಿಸದೇ ಇದ್ದರೆ ಅಥವಾ ಪರಿಹಾರ ನಿರಾಕರಿಸಿದ್ದರೆ ಅವರು ಸಂಬಂಧಪಟ್ಟ ಕುಂದುಕೊರತೆ ಪರಿಹಾರ ಸಮಿತಿ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ಸಮಯ ವ್ಯರ್ಥ ಮಾಡದೆ ಕೋವಿಡ್​​ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡಿ: ರಾಜ್ಯಗಳಿಗೆ ಸುಪ್ರೀಂ ನಿರ್ದೇಶನ
ಸುಪ್ರೀಂಕೋರ್ಟ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jul 18, 2022 | 3:16 PM

Share

ದೆಹಲಿ: ಸಮಯ ವ್ಯರ್ಥ ಮಾಡದೆ ಕೋವಿಡ್ (Covid 19) ಸಂತ್ರಸ್ತರ ಕುಟುಂಬದ ಸದಸ್ಯರಿಗೆ ಪರಿಹಾರ (Compensation) ನೀಡಿ ಎಂದು ಸುಪ್ರೀಂಕೋರ್ಟ್ (Supreme Court)  ಸೋಮವಾರ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸಿದೆ. ನ್ಯಾಯಮೂರ್ತಿ ಎಂಆರ್ ಶಾ ಮತ್ತು ಬಿ.ವಿ. ನಾಗರತ್ನ ಅವರ ನ್ಯಾಯಪೀಠವು ಯಾವುದೇ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಲಭಿಸದೇ ಇದ್ದರೆ ಅಥವಾ ಪರಿಹಾರ ನಿರಾಕರಿಸಿದ್ದರೆ ಅವರು ಸಂಬಂಧಪಟ್ಟ ಕುಂದುಕೊರತೆ ಪರಿಹಾರ ಸಮಿತಿ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ. ಕುಂದುಕೊರತೆ ಪರಿಹಾರ ಸಮಿತಿಯು ಹಕ್ಕುದಾರರ ಅರ್ಜಿಯನ್ನು ಪರಿಶೀಲಿಸಿ ನಾಲ್ಕು ವಾರಗಳೊಳಗೆ ನಿರ್ಧಾರ ಕೈಗೊಳ್ಳಬೇಕು ಎಂದು ಸುಪ್ರೀಂಕೋರ್ಟ್ ನಿರ್ದೇಶಿಸಿದೆ. ಆಂಧ್ರಪ್ರದೇಶ ಸರ್ಕಾರವು ರಾಜ್ಯ ವಿಪತ್ತು ನಿರ್ವಹಣಾ ಪಡೆಯಿಂದ ವೈಯಕ್ತಿಕ ಠೇವಣಿ ಖಾತೆಗೆ ಹಣ ವರ್ಗಾಯಿಸಿದೆ ಎಂಬ ಆರೋಪದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಎರಡು ದಿನಗಳೊಳಗೆ ಹಣವನ್ನು ಎಸ್ ಡಿಆರ್ ಎಫ್ ಖಾತೆಗೆ ವರ್ಗಾಯಿಸಬೇಕು ಎಂದು ಹೇಳಿದೆ.  ನಾವು ಈ ವಿಚಾರಣೆಯನ್ನು ಮುಕ್ತಾಯಗೊಳಿಸುತ್ತಿದ್ದೇವೆ. ಅದೇ ವೇಳೆ ಸಮಯ ವ್ಯರ್ಥ ಮಾಡದೆ ಅರ್ಹ ವ್ಯಕ್ತಿಗಳಿಗೆ ಪರಿಹಾರವನ್ನು ಆದಷ್ಟು ಬೇಗನೆ ನೀಡಬೇಕು ಎಂದು ಎಲ್ಲ ರಾಜ್ಯಗಳಿಗೆ ನಿರ್ದೇಶಿಸುತ್ತೇವೆ. ಯಾವುದೇ ಹಕ್ಕುದಾರರಿಗೆ ಕುಂದುಕೊರತೆ ಇದ್ದರೆ ಅವರು ಕುಂದುಕೊರತೆ ಪರಿಹಾರ ಸಮಿತಿಯನ್ನು ಸಂಪರ್ಕಿಸಬಹುದು ಎಂದು ನ್ಯಾಯಪೀಠ ಹೇಳಿದೆ.

ಆಂಧ್ರಪ್ರದೇಶ ಸರ್ಕಾರವು ರಾಜ್ಯ ವಿಪತ್ತು ನಿರ್ವಹಣಾ ಪಡೆಯಿಂದ ವೈಯಕ್ತಿಕ ಠೇವಣಿ ಖಾತೆಗೆ ಹಣ ವರ್ಗಾಯಿಸಿದೆ ಎಂಬ ಅರ್ಜಿ ವಿಚಾರಣೆಯನ್ನು ಈ ಹಿಂದೆ ನಡೆಸಿದಾಗ ಇದಕ್ಕೆ ಪ್ರತಿಕ್ರಿಯಿಸುವಂತೆ ಆಂಧ್ರ ಸರ್ಕಾರಕ್ಕೆ ಕೊನೆ ಅವಕಾಶ ನೀಡಿತ್ತು. ರಾಜ್ಯ ಸರ್ಕಾರಗಳು ನಿಧಿಯನ್ನು ಬೇರೆಡೆಗೆ ವರ್ಗಾಯಿಸುವಂತಿಲ್ಲ ಎಂದು ಹೇಳಿದ್ದ ನ್ಯಾಯಾಲಯ ಈ ಬಗ್ಗೆ ಆಂಧ್ರ ಸರ್ಕಾರಕ್ಕೆ ನೋಟಿಸ್ ನೀಡಿತ್ತು.

ಇದನ್ನೂ ಓದಿ
Image
ಉತ್ತರ ಪ್ರದೇಶದಲ್ಲಿನ ಎಫ್ಐಆರ್ ರದ್ದು ಮಾಡುವಂತೆ ಮೊಹಮ್ಮದ್ ಜುಬೇರ್ ಅರ್ಜಿ, ಸಿಜೆಐ ಹೇಳಿದ್ದೇನು?
Image
ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್​ ಬಗ್ಗೆ ನ್ಯಾಯಮೂರ್ತಿ ಸಂದೇಶ್ ವ್ಯಕ್ತಪಡಿಸಿದ್ದ ಅಭಿಪ್ರಾಯಕ್ಕೆ ಸುಪ್ರೀಂ ಕೋರ್ಟ್​ ತಡೆ
Image
India Covid Updates: ಭಾರತದಲ್ಲಿ 16,935 ಮಂದಿಗೆ ಹೊಸದಾಗಿ ಕೊರೊನಾ ಸೋಂಕು, 51 ಸಾವು
Image
ಕೊವಿಡ್ ಲಸಿಕೆ ನೀಡಿಕೆಯಲ್ಲಿ 200 ಕೋಟಿ ಮೈಲುಗಲ್ಲು ದಾಟಿದ ಭಾರತ

ಆಂಧ್ರಪ್ರದೇಶ ಸರ್ಕಾರ ಎಸ್​​ಡಿಆರ್​​ಎಫ್​​ನಿಂದ ವೈಯಕ್ತಿಕ ಠೇವಣಿ ಖಾತೆಗೆ ಫಂಡ್ ವರ್ಗಾಯಿಸಿದೆ ಎಂದು ಅರ್ಜಿದಾರ ಪಲ್ಲ ಶ್ರೀನಿವಾಸ ರಾವ್ ಆರೋಪಿಸಿದ್ದು ಅರ್ಜಿದಾರರ ಪರ ವಕೀಲ ಗೌರವ್ ಬನ್ಸಾಲ್ ಹಾಜರಾಗಿದ್ದಾರೆ. ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಈ ರೀತಿ ಮಾಡಲು ಅನುಮತಿ ಇಲ್ಲ ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 46 (2)ರಲ್ಲಿ ನಿರ್ದಿಷ್ಟ ಪಡಿಸಿದ ಉದ್ದೇಶಗಳ ಹೊರತಾಗಿ ರಾಜ್ಯ ಸರ್ಕಾರವು ಎಸ್​​ಡಿಆರ್​​ಎಫ್​​ನಿಂದ ಕಾನೂನುಬಾಹಿರವಾಗಿ ಹಣವನ್ನು ಬಳಸುತ್ತಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ