Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಯ ವ್ಯರ್ಥ ಮಾಡದೆ ಕೋವಿಡ್​​ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡಿ: ರಾಜ್ಯಗಳಿಗೆ ಸುಪ್ರೀಂ ನಿರ್ದೇಶನ

ನ್ಯಾಯಮೂರ್ತಿ ಎಂಆರ್ ಶಾ ಮತ್ತು ಬಿ.ವಿ. ನಾಗರತ್ನ ಅವರ ನ್ಯಾಯಪೀಠವು ಯಾವುದೇ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಲಭಿಸದೇ ಇದ್ದರೆ ಅಥವಾ ಪರಿಹಾರ ನಿರಾಕರಿಸಿದ್ದರೆ ಅವರು ಸಂಬಂಧಪಟ್ಟ ಕುಂದುಕೊರತೆ ಪರಿಹಾರ ಸಮಿತಿ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ಸಮಯ ವ್ಯರ್ಥ ಮಾಡದೆ ಕೋವಿಡ್​​ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡಿ: ರಾಜ್ಯಗಳಿಗೆ ಸುಪ್ರೀಂ ನಿರ್ದೇಶನ
ಸುಪ್ರೀಂಕೋರ್ಟ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 18, 2022 | 3:16 PM

ದೆಹಲಿ: ಸಮಯ ವ್ಯರ್ಥ ಮಾಡದೆ ಕೋವಿಡ್ (Covid 19) ಸಂತ್ರಸ್ತರ ಕುಟುಂಬದ ಸದಸ್ಯರಿಗೆ ಪರಿಹಾರ (Compensation) ನೀಡಿ ಎಂದು ಸುಪ್ರೀಂಕೋರ್ಟ್ (Supreme Court)  ಸೋಮವಾರ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸಿದೆ. ನ್ಯಾಯಮೂರ್ತಿ ಎಂಆರ್ ಶಾ ಮತ್ತು ಬಿ.ವಿ. ನಾಗರತ್ನ ಅವರ ನ್ಯಾಯಪೀಠವು ಯಾವುದೇ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಲಭಿಸದೇ ಇದ್ದರೆ ಅಥವಾ ಪರಿಹಾರ ನಿರಾಕರಿಸಿದ್ದರೆ ಅವರು ಸಂಬಂಧಪಟ್ಟ ಕುಂದುಕೊರತೆ ಪರಿಹಾರ ಸಮಿತಿ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ. ಕುಂದುಕೊರತೆ ಪರಿಹಾರ ಸಮಿತಿಯು ಹಕ್ಕುದಾರರ ಅರ್ಜಿಯನ್ನು ಪರಿಶೀಲಿಸಿ ನಾಲ್ಕು ವಾರಗಳೊಳಗೆ ನಿರ್ಧಾರ ಕೈಗೊಳ್ಳಬೇಕು ಎಂದು ಸುಪ್ರೀಂಕೋರ್ಟ್ ನಿರ್ದೇಶಿಸಿದೆ. ಆಂಧ್ರಪ್ರದೇಶ ಸರ್ಕಾರವು ರಾಜ್ಯ ವಿಪತ್ತು ನಿರ್ವಹಣಾ ಪಡೆಯಿಂದ ವೈಯಕ್ತಿಕ ಠೇವಣಿ ಖಾತೆಗೆ ಹಣ ವರ್ಗಾಯಿಸಿದೆ ಎಂಬ ಆರೋಪದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಎರಡು ದಿನಗಳೊಳಗೆ ಹಣವನ್ನು ಎಸ್ ಡಿಆರ್ ಎಫ್ ಖಾತೆಗೆ ವರ್ಗಾಯಿಸಬೇಕು ಎಂದು ಹೇಳಿದೆ.  ನಾವು ಈ ವಿಚಾರಣೆಯನ್ನು ಮುಕ್ತಾಯಗೊಳಿಸುತ್ತಿದ್ದೇವೆ. ಅದೇ ವೇಳೆ ಸಮಯ ವ್ಯರ್ಥ ಮಾಡದೆ ಅರ್ಹ ವ್ಯಕ್ತಿಗಳಿಗೆ ಪರಿಹಾರವನ್ನು ಆದಷ್ಟು ಬೇಗನೆ ನೀಡಬೇಕು ಎಂದು ಎಲ್ಲ ರಾಜ್ಯಗಳಿಗೆ ನಿರ್ದೇಶಿಸುತ್ತೇವೆ. ಯಾವುದೇ ಹಕ್ಕುದಾರರಿಗೆ ಕುಂದುಕೊರತೆ ಇದ್ದರೆ ಅವರು ಕುಂದುಕೊರತೆ ಪರಿಹಾರ ಸಮಿತಿಯನ್ನು ಸಂಪರ್ಕಿಸಬಹುದು ಎಂದು ನ್ಯಾಯಪೀಠ ಹೇಳಿದೆ.

ಆಂಧ್ರಪ್ರದೇಶ ಸರ್ಕಾರವು ರಾಜ್ಯ ವಿಪತ್ತು ನಿರ್ವಹಣಾ ಪಡೆಯಿಂದ ವೈಯಕ್ತಿಕ ಠೇವಣಿ ಖಾತೆಗೆ ಹಣ ವರ್ಗಾಯಿಸಿದೆ ಎಂಬ ಅರ್ಜಿ ವಿಚಾರಣೆಯನ್ನು ಈ ಹಿಂದೆ ನಡೆಸಿದಾಗ ಇದಕ್ಕೆ ಪ್ರತಿಕ್ರಿಯಿಸುವಂತೆ ಆಂಧ್ರ ಸರ್ಕಾರಕ್ಕೆ ಕೊನೆ ಅವಕಾಶ ನೀಡಿತ್ತು. ರಾಜ್ಯ ಸರ್ಕಾರಗಳು ನಿಧಿಯನ್ನು ಬೇರೆಡೆಗೆ ವರ್ಗಾಯಿಸುವಂತಿಲ್ಲ ಎಂದು ಹೇಳಿದ್ದ ನ್ಯಾಯಾಲಯ ಈ ಬಗ್ಗೆ ಆಂಧ್ರ ಸರ್ಕಾರಕ್ಕೆ ನೋಟಿಸ್ ನೀಡಿತ್ತು.

ಇದನ್ನೂ ಓದಿ
Image
ಉತ್ತರ ಪ್ರದೇಶದಲ್ಲಿನ ಎಫ್ಐಆರ್ ರದ್ದು ಮಾಡುವಂತೆ ಮೊಹಮ್ಮದ್ ಜುಬೇರ್ ಅರ್ಜಿ, ಸಿಜೆಐ ಹೇಳಿದ್ದೇನು?
Image
ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್​ ಬಗ್ಗೆ ನ್ಯಾಯಮೂರ್ತಿ ಸಂದೇಶ್ ವ್ಯಕ್ತಪಡಿಸಿದ್ದ ಅಭಿಪ್ರಾಯಕ್ಕೆ ಸುಪ್ರೀಂ ಕೋರ್ಟ್​ ತಡೆ
Image
India Covid Updates: ಭಾರತದಲ್ಲಿ 16,935 ಮಂದಿಗೆ ಹೊಸದಾಗಿ ಕೊರೊನಾ ಸೋಂಕು, 51 ಸಾವು
Image
ಕೊವಿಡ್ ಲಸಿಕೆ ನೀಡಿಕೆಯಲ್ಲಿ 200 ಕೋಟಿ ಮೈಲುಗಲ್ಲು ದಾಟಿದ ಭಾರತ

ಆಂಧ್ರಪ್ರದೇಶ ಸರ್ಕಾರ ಎಸ್​​ಡಿಆರ್​​ಎಫ್​​ನಿಂದ ವೈಯಕ್ತಿಕ ಠೇವಣಿ ಖಾತೆಗೆ ಫಂಡ್ ವರ್ಗಾಯಿಸಿದೆ ಎಂದು ಅರ್ಜಿದಾರ ಪಲ್ಲ ಶ್ರೀನಿವಾಸ ರಾವ್ ಆರೋಪಿಸಿದ್ದು ಅರ್ಜಿದಾರರ ಪರ ವಕೀಲ ಗೌರವ್ ಬನ್ಸಾಲ್ ಹಾಜರಾಗಿದ್ದಾರೆ. ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಈ ರೀತಿ ಮಾಡಲು ಅನುಮತಿ ಇಲ್ಲ ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 46 (2)ರಲ್ಲಿ ನಿರ್ದಿಷ್ಟ ಪಡಿಸಿದ ಉದ್ದೇಶಗಳ ಹೊರತಾಗಿ ರಾಜ್ಯ ಸರ್ಕಾರವು ಎಸ್​​ಡಿಆರ್​​ಎಫ್​​ನಿಂದ ಕಾನೂನುಬಾಹಿರವಾಗಿ ಹಣವನ್ನು ಬಳಸುತ್ತಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ