AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಟಿಟಿ ಕಂಟೆಂಟ್ ಪ್ರಸಾರಕ್ಕೂ ಮುನ್ನ ಪರಿಶೀಲನೆ ಅಗತ್ಯ; ಸುಪ್ರೀಕೋರ್ಟ್

OTT Regulation: ಪ್ರಸ್ತುತ ಓಟಿಟಿ ವೇದಿಕೆಗಳನ್ನು ಬಳಸುವುದು ಸರ್ವಸಾಮಾನ್ಯವಾಗಿದೆ. ಎಲ್ಲರೂ ಓಟಿಟಿ ಫ್ಲಾಟ್​ಫಾರ್ಮ್​ಗಳನ್ನು ವೀಕ್ಷಿಸುವುದರಿಂದ ಕಂಟೆಂಟ್ ಪ್ರಸಾರಕ್ಕೂ ಮುನ್ನ ‘ಸ್ಕ್ರೀನಿಂಗ್’ ನಡೆಸಲೇಬೇಕು. ಇತ್ತೀಚಿಗೆ ಓಟಿಟಿ ವೇದಿಕೆಗಳಲ್ಲಿ ಫೋರ್ನೋಗ್ರಫಿ ಸಹ ಪ್ರಸಾರವಾಗುತ್ತಿದೆ" ಎಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ತಿಳಿಸಿದ್ದಾರೆ.

ಓಟಿಟಿ ಕಂಟೆಂಟ್ ಪ್ರಸಾರಕ್ಕೂ ಮುನ್ನ ಪರಿಶೀಲನೆ ಅಗತ್ಯ; ಸುಪ್ರೀಕೋರ್ಟ್
ಓಟಿಟಿ ಕಂಟೆಂಟ್​ ಪ್ರಸಾರದ ಕುರಿತು ಸುಪ್ರೀಂ ಕೋರ್ಟ್ ಹೇಳಿದ್ದೇನು?
guruganesh bhat
| Edited By: |

Updated on:Mar 04, 2021 | 3:19 PM

Share

ದೆಹಲಿ: ಓಟಿಟಿ ವೇದಿಕೆಗಳು ಕಂಟೆಂಟ್ ಪ್ರಸಾರ ಮಾಡುವ ಮುನ್ನ  ಕಂಟೆಂಟ್​ ಪರಿಶೀಲನೆ ನಡೆಸಬೇಕು . ಪರಿಶೀಲನೆ ನಡೆಸದೇ ಓಟಿಟಿ ವೇದಿಕೆಗಳು ಕಂಟೆಂಟ್ ಪ್ರಸಾರ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೇ, ನಾಳೆ ಓಟಿಟಿ ಕಂಟೆಂಟ್​ ಮತ್ತು ಸಾಮಾಜಿಕ ಜಾಲತಾಣಗಳಿಗೆ ಸಂಬಂಧಿಸಿ ನೂತನ ಮಾರ್ಗದರ್ಶಿ ನಿಯಮಾವಳಿಗಳನ್ನು (OTT Regulation) ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

“ಪ್ರಸ್ತುತ ಇಂಟರ್​ನೆಟ್ ಮತ್ತು ಓಟಿಟಿ ವೇದಿಕೆಗಳಲ್ಲಿ ಸಿನಿಮಾ ವೀಕ್ಷಣೆ ಸಾಮಾನ್ಯವಾಗಿದೆ. ಎಲ್ಲರೂ ಓಟಿಟಿ ಫ್ಲಾಟ್​ಫಾರ್ಮ್​ಗಳನ್ನು ವೀಕ್ಷಿಸುವುದರಿಂದ ಕಂಟೆಂಟ್ ಪ್ರಸಾರಕ್ಕೂ ಮುನ್ನ ‘ಸ್ಕ್ರೀನಿಂಗ್’ ನಡೆಸಲೇಬೇಕು. ಇತ್ತೀಚಿಗೆ ಓಟಿಟಿ ವೇದಿಕೆಗಳಲ್ಲಿ ಫೋರ್ನೋಗ್ರಫಿ ಸಹ ಪ್ರಸಾರವಾಗುತ್ತಿದೆ” ಎಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ತಿಳಿಸಿದ್ದಾರೆ.

ಅಮೆಜಾನ್ ಇಂಡಿಯಾದ ಮುಖ್ಯಸ್ಥ, ಅಪರ್ಣಾ ಪುರೋಹಿತ್ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ತಾಂಡವ್ ವೆಬ್ ಸಿರೀಸ್ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆಯೆಂದು ಆರೋಪಿಸಿ ಓಟಿಟಿ ವೇದಿಕೆ​ ಅಮೆಜಾನ್ ಪ್ರೈಮ್​ನ ಭಾರತ ವಿಭಾಗದ ಮುಖ್ಯಸ್ಥ ಅಪರ್ಣಾ ಪುರೋಹಿತ್ ವಿರುದ್ಧ ದೂರು ದಾಖಲಾಗಿತ್ತು. ಅಪರ್ಣಾ ಪುರೋಹಿತ್ ಅವರ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ, ವೆಬ್ ಸಿರೀಸ್ ಪ್ರಸಾರ ಮಾಡಿದ ಸಂಸ್ಥೆಯ ಉದ್ಯೋಗಿಯ ಮೇಲೆ 10 ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ ಎಂದು ಆರೋಪಿಸಿದ್ದರು.

ತಾಂಡವ್ ವೆಬ್ ಸಿರೀಸ್​ ವಿರುದ್ಧ ಬಿಜೆಪಿ ನಾಯಕರು ದೂರು ದಾಖಲಿಸಿದ್ದರು. ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅಮೆಜಾನ್ ಪ್ರೈಮ್ ವಿಡಿಯೋ ವತಿಯಿಂದ ವಿವರಣೆ ಕೇಳಿತ್ತು.  ಮಹಾರಾಷ್ಟ್ರ ಬಿಜೆಪಿ ನಾಯಕ ರಾಮ್ ಕದಮ್ ಅವರು ತಾಂಡವ್ ವಿರೋಧಿಸಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದರು. ಜತೆಗೆ, ಬಿಜೆಪಿ ಸಂಸದ ಮನೋಜ್ ಕೊಟಾಕ್ ಅವರು ತಾಂಡವ್ ವೆಬ್ ಸರಣಿಯನ್ನು ನಿಷೇಧಿಸುವಂತೆ ಒತ್ತಾಯಿಸಿ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್​ಗೆ ಪತ್ರ ಬರೆದಿದ್ದರು.

ಓಟಿಟಿಯಲ್ಲಿ ಪ್ರಸಾರವಾಗುತ್ತಿರುವ ತಾಂಡವ್ ವೆಬ್ ಸಿರೀಸ್​ನಲ್ಲಿ ಸೆಕ್ಸ್, ಹಿಂಸೆ, ಮಾದಕ ವಸ್ತು, ದ್ವೇಷ ಮತ್ತು ಕೀಳುತನವನ್ನು ಬಿಂಬಿಸಲಾಗಿದೆ ಎಂದು ಬಿಜೆಪಿ ಸಂಸದ ಮನೋಜ್ ಕೊಟಾಕ್ ಪತ್ರದಲ್ಲಿ ಉಲ್ಲೇಖಿಸಿದ್ದರು. ದೇಶದ ಹಲವು ನಾಗರಿಕರು ಈ ವೆಬ್ ಸಿರೀಸ್​ ಬಗ್ಗೆ ನನ್ನಲ್ಲಿ ನಕಾರಾತ್ಮಕ ಅಭಿಪ್ರಾಯ ಹಂಚಿಕೊಂಡಿದ್ದರು.. ಹಿಂದೂ ಧರ್ಮ ಮತ್ತು ಹಿಂದೂ ದೇವತೆಗಳ ಕುರಿತು ಬೇಕೆಂದೇ ಕೀಳಾಗಿ ಈ ವೆಬ್ ಸಿರೀಸ್​ನಲ್ಲಿ ಚಿತ್ರಿಸಲಾಗಿದೆ ಎಂದು ಅವರು ಆರೋಪಿಸಿದ್ದರು.

ಇದನ್ನೂ ಓದಿ:  ಓಟಿಟಿ ವೇದಿಕೆಗಳಿಗೆ ನಿಯಂತ್ರಣ ವಿಧಿಸುವ ಯೋಚನೆ ಸರ್ಕಾರಕ್ಕಿದೆ: ಕೇಂದ್ರ ಸರ್ಕಾರ

ಸೋಷಿಯಲ್ ಮೀಡಿಯಾ, ಒಟಿಟಿ, ಡಿಜಿಟಲ್ ಕಂಟೆಂಟ್ ನಿಯಂತ್ರಣಕ್ಕೆ ಕೇಂದ್ರದಿಂದ ಹೊಸ ನಿಯಮ: ನೀವು ತಿಳಿಯಬೇಕಾದ 10 ಅಂಶಗಳು

Published On - 2:05 pm, Thu, 4 March 21

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ