AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಟಿಟಿ ಕಂಟೆಂಟ್ ಪ್ರಸಾರಕ್ಕೂ ಮುನ್ನ ಪರಿಶೀಲನೆ ಅಗತ್ಯ; ಸುಪ್ರೀಕೋರ್ಟ್

OTT Regulation: ಪ್ರಸ್ತುತ ಓಟಿಟಿ ವೇದಿಕೆಗಳನ್ನು ಬಳಸುವುದು ಸರ್ವಸಾಮಾನ್ಯವಾಗಿದೆ. ಎಲ್ಲರೂ ಓಟಿಟಿ ಫ್ಲಾಟ್​ಫಾರ್ಮ್​ಗಳನ್ನು ವೀಕ್ಷಿಸುವುದರಿಂದ ಕಂಟೆಂಟ್ ಪ್ರಸಾರಕ್ಕೂ ಮುನ್ನ ‘ಸ್ಕ್ರೀನಿಂಗ್’ ನಡೆಸಲೇಬೇಕು. ಇತ್ತೀಚಿಗೆ ಓಟಿಟಿ ವೇದಿಕೆಗಳಲ್ಲಿ ಫೋರ್ನೋಗ್ರಫಿ ಸಹ ಪ್ರಸಾರವಾಗುತ್ತಿದೆ" ಎಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ತಿಳಿಸಿದ್ದಾರೆ.

ಓಟಿಟಿ ಕಂಟೆಂಟ್ ಪ್ರಸಾರಕ್ಕೂ ಮುನ್ನ ಪರಿಶೀಲನೆ ಅಗತ್ಯ; ಸುಪ್ರೀಕೋರ್ಟ್
ಓಟಿಟಿ ಕಂಟೆಂಟ್​ ಪ್ರಸಾರದ ಕುರಿತು ಸುಪ್ರೀಂ ಕೋರ್ಟ್ ಹೇಳಿದ್ದೇನು?
guruganesh bhat
| Edited By: |

Updated on:Mar 04, 2021 | 3:19 PM

Share

ದೆಹಲಿ: ಓಟಿಟಿ ವೇದಿಕೆಗಳು ಕಂಟೆಂಟ್ ಪ್ರಸಾರ ಮಾಡುವ ಮುನ್ನ  ಕಂಟೆಂಟ್​ ಪರಿಶೀಲನೆ ನಡೆಸಬೇಕು . ಪರಿಶೀಲನೆ ನಡೆಸದೇ ಓಟಿಟಿ ವೇದಿಕೆಗಳು ಕಂಟೆಂಟ್ ಪ್ರಸಾರ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೇ, ನಾಳೆ ಓಟಿಟಿ ಕಂಟೆಂಟ್​ ಮತ್ತು ಸಾಮಾಜಿಕ ಜಾಲತಾಣಗಳಿಗೆ ಸಂಬಂಧಿಸಿ ನೂತನ ಮಾರ್ಗದರ್ಶಿ ನಿಯಮಾವಳಿಗಳನ್ನು (OTT Regulation) ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

“ಪ್ರಸ್ತುತ ಇಂಟರ್​ನೆಟ್ ಮತ್ತು ಓಟಿಟಿ ವೇದಿಕೆಗಳಲ್ಲಿ ಸಿನಿಮಾ ವೀಕ್ಷಣೆ ಸಾಮಾನ್ಯವಾಗಿದೆ. ಎಲ್ಲರೂ ಓಟಿಟಿ ಫ್ಲಾಟ್​ಫಾರ್ಮ್​ಗಳನ್ನು ವೀಕ್ಷಿಸುವುದರಿಂದ ಕಂಟೆಂಟ್ ಪ್ರಸಾರಕ್ಕೂ ಮುನ್ನ ‘ಸ್ಕ್ರೀನಿಂಗ್’ ನಡೆಸಲೇಬೇಕು. ಇತ್ತೀಚಿಗೆ ಓಟಿಟಿ ವೇದಿಕೆಗಳಲ್ಲಿ ಫೋರ್ನೋಗ್ರಫಿ ಸಹ ಪ್ರಸಾರವಾಗುತ್ತಿದೆ” ಎಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ತಿಳಿಸಿದ್ದಾರೆ.

ಅಮೆಜಾನ್ ಇಂಡಿಯಾದ ಮುಖ್ಯಸ್ಥ, ಅಪರ್ಣಾ ಪುರೋಹಿತ್ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ತಾಂಡವ್ ವೆಬ್ ಸಿರೀಸ್ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆಯೆಂದು ಆರೋಪಿಸಿ ಓಟಿಟಿ ವೇದಿಕೆ​ ಅಮೆಜಾನ್ ಪ್ರೈಮ್​ನ ಭಾರತ ವಿಭಾಗದ ಮುಖ್ಯಸ್ಥ ಅಪರ್ಣಾ ಪುರೋಹಿತ್ ವಿರುದ್ಧ ದೂರು ದಾಖಲಾಗಿತ್ತು. ಅಪರ್ಣಾ ಪುರೋಹಿತ್ ಅವರ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ, ವೆಬ್ ಸಿರೀಸ್ ಪ್ರಸಾರ ಮಾಡಿದ ಸಂಸ್ಥೆಯ ಉದ್ಯೋಗಿಯ ಮೇಲೆ 10 ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ ಎಂದು ಆರೋಪಿಸಿದ್ದರು.

ತಾಂಡವ್ ವೆಬ್ ಸಿರೀಸ್​ ವಿರುದ್ಧ ಬಿಜೆಪಿ ನಾಯಕರು ದೂರು ದಾಖಲಿಸಿದ್ದರು. ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅಮೆಜಾನ್ ಪ್ರೈಮ್ ವಿಡಿಯೋ ವತಿಯಿಂದ ವಿವರಣೆ ಕೇಳಿತ್ತು.  ಮಹಾರಾಷ್ಟ್ರ ಬಿಜೆಪಿ ನಾಯಕ ರಾಮ್ ಕದಮ್ ಅವರು ತಾಂಡವ್ ವಿರೋಧಿಸಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದರು. ಜತೆಗೆ, ಬಿಜೆಪಿ ಸಂಸದ ಮನೋಜ್ ಕೊಟಾಕ್ ಅವರು ತಾಂಡವ್ ವೆಬ್ ಸರಣಿಯನ್ನು ನಿಷೇಧಿಸುವಂತೆ ಒತ್ತಾಯಿಸಿ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್​ಗೆ ಪತ್ರ ಬರೆದಿದ್ದರು.

ಓಟಿಟಿಯಲ್ಲಿ ಪ್ರಸಾರವಾಗುತ್ತಿರುವ ತಾಂಡವ್ ವೆಬ್ ಸಿರೀಸ್​ನಲ್ಲಿ ಸೆಕ್ಸ್, ಹಿಂಸೆ, ಮಾದಕ ವಸ್ತು, ದ್ವೇಷ ಮತ್ತು ಕೀಳುತನವನ್ನು ಬಿಂಬಿಸಲಾಗಿದೆ ಎಂದು ಬಿಜೆಪಿ ಸಂಸದ ಮನೋಜ್ ಕೊಟಾಕ್ ಪತ್ರದಲ್ಲಿ ಉಲ್ಲೇಖಿಸಿದ್ದರು. ದೇಶದ ಹಲವು ನಾಗರಿಕರು ಈ ವೆಬ್ ಸಿರೀಸ್​ ಬಗ್ಗೆ ನನ್ನಲ್ಲಿ ನಕಾರಾತ್ಮಕ ಅಭಿಪ್ರಾಯ ಹಂಚಿಕೊಂಡಿದ್ದರು.. ಹಿಂದೂ ಧರ್ಮ ಮತ್ತು ಹಿಂದೂ ದೇವತೆಗಳ ಕುರಿತು ಬೇಕೆಂದೇ ಕೀಳಾಗಿ ಈ ವೆಬ್ ಸಿರೀಸ್​ನಲ್ಲಿ ಚಿತ್ರಿಸಲಾಗಿದೆ ಎಂದು ಅವರು ಆರೋಪಿಸಿದ್ದರು.

ಇದನ್ನೂ ಓದಿ:  ಓಟಿಟಿ ವೇದಿಕೆಗಳಿಗೆ ನಿಯಂತ್ರಣ ವಿಧಿಸುವ ಯೋಚನೆ ಸರ್ಕಾರಕ್ಕಿದೆ: ಕೇಂದ್ರ ಸರ್ಕಾರ

ಸೋಷಿಯಲ್ ಮೀಡಿಯಾ, ಒಟಿಟಿ, ಡಿಜಿಟಲ್ ಕಂಟೆಂಟ್ ನಿಯಂತ್ರಣಕ್ಕೆ ಕೇಂದ್ರದಿಂದ ಹೊಸ ನಿಯಮ: ನೀವು ತಿಳಿಯಬೇಕಾದ 10 ಅಂಶಗಳು

Published On - 2:05 pm, Thu, 4 March 21

Follow Us
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!