AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶವದ ಅಂಗಾಂಗ ಕಸಿ ನಿಯಮಗಳಲ್ಲಿ ಏಕರೂಪತೆಯ ಕೊರತೆ ಪರಿಶೀಲಿಸಲು ಕೇಂದ್ರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

ಮಾನವ ಅಂಗಗಳು ಮತ್ತು ಅಂಗಾಂಶಗಳ ಕಸಿ ಕಾಯಿದೆ, 1994 ರ ಅಡಿಯಲ್ಲಿ ನಿಯಮಗಳಲ್ಲಿ ಏಕರೂಪತೆಯನ್ನು ತರಲು ಮಾರ್ಗಸೂಚಿಗಳನ್ನು ರೂಪಿಸಲು ರಾಜ್ಯಗಳಿಗೆ ನಿರ್ದೇಶನ ನೀಡುವಂತೆ ಮನವಿ ಕೋರಿದೆ.

ಶವದ ಅಂಗಾಂಗ ಕಸಿ ನಿಯಮಗಳಲ್ಲಿ ಏಕರೂಪತೆಯ ಕೊರತೆ ಪರಿಶೀಲಿಸಲು ಕೇಂದ್ರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Dec 05, 2022 | 4:18 PM

Share

ದೆಹಲಿ: ಎಲ್ಲಾ ರಾಜ್ಯಗಳಲ್ಲಿ ಮೃತದೇಹದ ಅಂಗಾಂಗ ಕಸಿ ಮಾಡುವ ನಿಯಮಗಳ (cadaveric organ transplant) ಏಕರೂಪತೆಯನ್ನು ಕೋರಿ (uniformity of rules)ಸಲ್ಲಿಸಲಾದ ಮನವಿಯನ್ನು ಪ್ರಾತಿನಿಧ್ಯವಾಗಿ ಪರಿಗಣಿಸುವಂತೆ ಸುಪ್ರೀಂಕೋರ್ಟ್ (Supreme Court) ಸೋಮವಾರ ಕೇಂದ್ರವನ್ನು ಕೇಳಿದೆ. ‘ಗಿಫ್ಟ್ ಆಫ್ ಲೈಫ್ ಅಡ್ವೆಂಚರ್ ಫೌಂಡೇಶನ್’ ಹೆಸರಿನ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪೀಠವು ಅಂಗಾಂಗ ಕಸಿ ನಿಯಮಗಳಲ್ಲಿ ಏಕರೂಪತೆಯ ಕೊರತೆಯ ಬಗ್ಗೆ ತಿಳಿಸಿದೆ.ಶವದ ಅಂಗಾಂಗ ಕಸಿ ಸಂದರ್ಭದಲ್ಲಿ ಒಂದು ರಾಜ್ಯದಲ್ಲಿ ಅಂಗವನ್ನು ಸ್ವೀಕರಿಸುವವರಾಗಿ ನೋಂದಾಯಿಸಲು ನಿವಾಸದ ಪ್ರಮಾಣಪತ್ರ ಸಲ್ಲಿಕೆ ಆದೇಶವನ್ನು ಹೇರುವುದು “ಅನಿಯಂತ್ರಿತ” ಎಂದು ಮನವಿ ಹೇಳಿದೆ. ಏಕರೂಪತೆಯ ಕೊರತೆಯಿಂದಾಗಿ, ಕೆಲವು ರಾಜ್ಯಗಳು ಶವ ಅಂಗಾಂಗ ಕಸಿ ಮಾಡಲು ಅರ್ಹರಾಗಲು ಸ್ವೀಕರಿಸುವವರು 10 ರಿಂದ 15 ವರ್ಷಗಳ ಅವಧಿಯ ವಾಸಸ್ಥಳ ಪ್ರಮಾಣಪತ್ರವನ್ನು ನೀಡಬೇಕಾದ ಷರತ್ತುಗಳನ್ನು ವಿಧಿಸಿದ್ದಾರೆ ಎಂದುನ್ಯಾಯಾಲಯ ಹೇಳಿದೆ. ಪಿಐಎಲ್ ಪರಿಗಣಿಸಲು ನಿರಾಕರಿಸಿದ ಪೀಠವು, ಏಕರೂಪದ ನಿಯಮಗಳ ಕೊರತೆಯ ವಿಷಯದ ಪ್ರಾತಿನಿಧ್ಯವಾಗಿ ಮನವಿಯನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವನ್ನು ಕೇಳಲು ಒಪ್ಪಿಕೊಂಡಿತು.

ಮಾನವ ಅಂಗಗಳು ಮತ್ತು ಅಂಗಾಂಶಗಳ ಕಸಿ ಕಾಯಿದೆ, 1994 ರ ಅಡಿಯಲ್ಲಿ ನಿಯಮಗಳಲ್ಲಿ ಏಕರೂಪತೆಯನ್ನು ತರಲು ಮಾರ್ಗಸೂಚಿಗಳನ್ನು ರೂಪಿಸಲು ರಾಜ್ಯಗಳಿಗೆ ನಿರ್ದೇಶನ ನೀಡುವಂತೆ ಮನವಿ ಕೋರಿದೆ.

“ನಾವು ನಿಮ್ಮ ಅರ್ಜಿಯನ್ನು ವಜಾಗೊಳಿಸುತ್ತಿಲ್ಲ. ಅರ್ಜಿದಾರರ ಕುಂದುಕೊರತೆ ಏನೆಂದರೆ ಅಂಗಾಂಗ ಕಸಿ ನೋಂದಾಯಿಸಲು ನಿವಾಸ ಪ್ರಮಾಣಪತ್ರವನ್ನು ಪಡೆಯುವ ಅವಶ್ಯಕತೆಯನ್ನು ರಾಜ್ಯಗಳು ವಿಧಿಸಿವೆ. ಈ ವಿಷಯವನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಪರಿಶೀಲಿಸುತ್ತದೆ. ಕ್ರಮದ ಸೂಕ್ತ ಕಾರಣವನ್ನು ತ್ವರಿತವಾಗಿ ಅಳವಡಿಸಿಕೊಳ್ಳಲು ನೀತಿ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂಕೋರ್ಟ್ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು