AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲು ಸರ್ಕಾರ 6 ವಾರದಲ್ಲಿ ಮಾರ್ಗಸೂಚಿ ರೂಪಿಸಿ, ಪರಿಹಾರದ ಮೊತ್ತ ನಿರ್ಧರಿಸಬೇಕು – ಸುಪ್ರೀಂಕೋರ್ಟ್​

ಮೃತರ ಕುಟುಂಬಕ್ಕೆ ಪರಿಹಾರ ನೀಡುವ ವಿಚಾರದಲ್ಲಿ ಅದರ ಮೊತ್ತವನ್ನು ನಿರ್ಧರಿಸುವುದು ಸರ್ಕಾರ, NDMA ವಿವೇಚನೆಗೆ ಬಿಟ್ಟದ್ದು. ಆದರೆ, ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಬೇಕು. ಆ ಸಂಬಂಧ ಇನ್ನು ಆರು‌ ವಾರಗಳಲ್ಲಿ ಮಾರ್ಗಸೂಚಿ ರೂಪಿಸಬೇಕು: ಸರ್ವೋಚ್ಛ ನ್ಯಾಯಾಲಯ

ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲು ಸರ್ಕಾರ 6 ವಾರದಲ್ಲಿ ಮಾರ್ಗಸೂಚಿ ರೂಪಿಸಿ, ಪರಿಹಾರದ ಮೊತ್ತ ನಿರ್ಧರಿಸಬೇಕು - ಸುಪ್ರೀಂಕೋರ್ಟ್​
ಸುಪ್ರೀಂಕೋರ್ಟ್
Follow us
TV9 Web
| Updated By: Skanda

Updated on:Jun 30, 2021 | 11:59 AM

ದೆಹಲಿ: ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಬೇಕು. ಎಷ್ಟು ನೀಡಬೇಕು ಎನ್ನುವುದರ ಬಗ್ಗೆ ಪರಿಹಾರ ಮೊತ್ತವನ್ನು ಸರ್ಕಾರ ನಿರ್ಧರಿಸಲಿ ಎಂದು ಸರ್ವೋಚ್ಛ ನ್ಯಾಯಾಲಯದ ಜಸ್ಟೀಸ್ ಅಶೋಕ್ ಭೂಷಣ್ ಪೀಠ ಮಹತ್ತರ ಆದೇಶ ನೀಡಿದೆ. ಪರಿಹಾರದ ಬಗ್ಗೆ ಕರ್ತವ್ಯ ನಿರ್ವಹಣೆಯಲ್ಲಿ ರಾಷ್ಟ್ರೀಯ ಬಿಕ್ಕಟ್ಟು ನಿರ್ವಹಣಾ ಸಮಿತಿ (ಎನ್​ಡಿಎಂಎ) ವಿಫಲವಾಗಿದೆ. ಮಾರ್ಗಸೂಚಿ ರೂಪಿಸದೇ ಕರ್ತವ್ಯ ನಿರ್ವಹಿಸುವಲ್ಲಿ ಸರ್ಕಾರ ವಿಫಲಗೊಂಡಿದೆ ಎಂದು ಚಾಟಿ ಬೀಸಿರುವ ಸರ್ವೋಚ್ಛ ನ್ಯಾಯಾಲಯ, ಮುಂದಿನ ಆರು ವಾರದ ಒಳಗಾಗಿ ನಿರ್ದಿಷ್ಟ ಮಾರ್ಗಸೂಚಿ ರೂಪಿಸುವಂತೆ ರಾಷ್ಟ್ರೀಯ ಬಿಕ್ಕಟ್ಟು ನಿರ್ವಹಣಾ ಸಮಿತಿಗೆ ಸೂಚಿಸಿದೆ.

ಮೃತರ ಕುಟುಂಬಕ್ಕೆ ಪರಿಹಾರ ನೀಡುವ ವಿಚಾರದಲ್ಲಿ ಅದರ ಮೊತ್ತವನ್ನು ನಿರ್ಧರಿಸುವುದು ಸರ್ಕಾರ, NDMA ವಿವೇಚನೆಗೆ ಬಿಟ್ಟದ್ದು. ಆದರೆ, ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಬೇಕು. ಆ ಸಂಬಂಧ ಇನ್ನು ಆರು‌ ವಾರದಲ್ಲಿ ಮಾರ್ಗಸೂಚಿ ರೂಪಿಸಬೇಕು ಎಂದು ಸರ್ವೋಚ್ಛ ನ್ಯಾಯಾಲಯದ ಜಸ್ಟೀಸ್ ಅಶೋಕ್ ಭೂಷಣ್ ಪೀಠ ಆದೇಶ ನೀಡಿದೆ.

ಕೊರೊನಾದಿಂದ ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರದ ಅರ್ಜಿ ನೀಡಬೇಕು ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆದಿದ್ದು, ಪರಿಹಾರ ನೀಡಲು ಕೇಂದ್ರ, ರಾಜ್ಯಗಳಿಗೆ ನಿರ್ದೇಶನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಲಾಗಿದೆ. ಆದರೆ, NDRF, SDRF ನಿಧಿಯಿಂದ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿದೆ.

ನಿನ್ನೆ (ಜೂನ್​ 29) ಅಸಂಘಟಿತ ವಲಯದ ಕಾರ್ಮಿಕರ ನೋಂದಣಿಗೆ ರಾಷ್ಟ್ರೀಯ ಪೋರ್ಟಲ್ ರಚಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ವೊಚ್ಛ ನ್ಯಾಯಾಲಯ ಮಹತ್ತರ ಆದೇಶ ನೀಡಿತ್ತು. ಜುಲೈ 31ರ ಒಳಗೆ ಕೇಂದ್ರ ಸರ್ಕಾರ ಪೋರ್ಟಲ್ ಸಿದ್ಧಪಡಿಸಲು ಕ್ರಮ ಕೈಗೊಳ್ಳಬೇಕು. ಅಸಂಘಟಿತ ವಲಯದ ಕಾರ್ಮಿಕರ ನೋಂದಣಿ ಪ್ರಕ್ರಿಯೆಗೆ ರಾಷ್ಟ್ರೀಯ ಪೋರ್ಟಲ್ ಮಾಡಬೇಕು. ಜುಲೈ 31 ರ ಒಳಗೆ ಎಲ್ಲಾ ರಾಜ್ಯಗಳು ಒಂದು ರಾಷ್ಟ್ರ, ಒಂದು ಪಡಿತರ ಚೀಟಿ (ಒನ್ ನೇಷನ್, ಒನ್ ರೇಷನ್ ಕಾರ್ಡ್) ಯೋಜನೆ ಜಾರಿಗೊಳಿಸಬೇಕು ಎಂದು ಸರ್ವೋಚ್ಛ ನ್ಯಾಯಾಲಯ ತಿಳಿಸಿದೆ.

ವಲಸೆ ಕಾರ್ಮಿಕರ ಬಗ್ಗೆ ಸುಪ್ರೀಂಕೋರ್ಟ್​ ನೀಡಿರುವ ಆದೇಶ ಇದಾಗಿದ್ದು, ಆದೇಶದನ್ವಯ ಜುಲೈ 31 ರ ಒಳಗೆ ಎಲ್ಲಾ ರಾಜ್ಯಗಳಲ್ಲಿ ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆ ಕಡ್ಡಾಯವಾಗಿ ಜಾರಿಯಾಗಬೇಕಿದೆ. ಆ ಮೂಲಕ ಪಡಿತರ ಚೀಟಿ ಇಲ್ಲದವರಿಗೆ ಆಹಾರ ಧಾನ್ಯ ವಿತರಿಸಲು ರಾಜ್ಯಗಳು ಯೋಜನೆ ರೂಪಿಸಬೇಕು ಎಂದು ತಿಳಿಸಲಾಗಿದೆ. ಅಲ್ಲದೇ, ಇದಕ್ಕೆ ಕೇಂದ್ರ ಸರ್ಕಾರ ಆಹಾರ ಧಾನ್ಯ ಹಂಚಿಕೆ ಮಾಡಬೇಕು ಎನ್ನುವುದನ್ನೂ ಸೂಚಿಸಲಾಗಿದೆ. ಇನ್ನು ಸಮುದಾಯ ಕಿಚನ್ ಸೌಲಭ್ಯದ ಬಗ್ಗೆ ಅಭಿಪ್ರಾಯ ತಿಳಿಸಿರುವ ಸರ್ವೋಚ್ಛ ನ್ಯಾಯಾಲಯ ಕೊರೊನಾ ಇರುವವರೆಗೂ ಸಮುದಾಯ ಕಿಚನ್ ಸೌಲಭ್ಯ ಮುಂದುವರಿಸಬೇಕು ಎಂಬ ಆದೇಶ ನೀಡಿದೆ.

ಇದನ್ನೂ ಓದಿ: ಜುಲೈ 31ರ ಒಳಗೆ ಎಲ್ಲಾ ರಾಜ್ಯಗಳಲ್ಲೂ ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆ ಕಡ್ಡಾಯವಾಗಿ ಜಾರಿಯಾಗಬೇಕು: ಸುಪ್ರೀಂ ಕೋರ್ಟ್​ 

ಕೊವಿಡ್ ನಿರ್ವಹಣೆಯ ಸ್ವಯಂ ಪ್ರೇರಿತ ವಿಚಾರಣೆಯನ್ನು ಮುಂದೂಡಿದ ಸುಪ್ರೀಂ ಕೋರ್ಟ್​

Published On - 11:37 am, Wed, 30 June 21

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು