AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಮಿರನ್ನು ವಜಾ ಮಾಡಲು ವಿಚಾರಣೆ ಪ್ರಕ್ರಿಯೆ ಕಡ್ಡಾಯವಲ್ಲ: ಸುಪ್ರೀಂಕೋರ್ಟ್

ಕಾರ್ಮಿಕನನ್ನು ಕೆಲಸದಿಂದ ವಜಾ ಅಥವಾ ಕರ್ತವ್ಯದಿಂದ ಬಿಡುಗಡೆ ಮಾಡುವ ಮೊದಲು ವಿಚಾರಣೆ ನಡೆಸಲು ಸಾಧ್ಯವಾಗದಿದ್ದರೂ ಉದ್ಯೋಗದಾತರು ತಮ್ಮ ನಿರ್ಧಾರಕ್ಕೆ ಪೂರಕವಾದ ಪುರಾವೆಗಳನ್ನು ಕಾರ್ಮಿಕ ನ್ಯಾಯಾಲಯಗಳಿಗೆ ಸಲ್ಲಿಸಲು ಅವಕಾಶವಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಕಾರ್ಮಿರನ್ನು ವಜಾ ಮಾಡಲು ವಿಚಾರಣೆ ಪ್ರಕ್ರಿಯೆ ಕಡ್ಡಾಯವಲ್ಲ: ಸುಪ್ರೀಂಕೋರ್ಟ್
ಸುಪ್ರೀಂ ಕೋರ್ಟ್
TV9 Web
| Edited By: |

Updated on:Apr 06, 2022 | 8:44 PM

Share

ದೆಹಲಿ: ವಿಚಾರಣೆ ನಡೆಸದೇ ಕಾರ್ಮಿಕನನ್ನು ಕೆಲಸದಿಂದ ವಜಾ ಮಾಡಿದರೂ, ಆಡಳಿತ ಮಂಡಳಿ ಅಥವಾ ಉದ್ಯೋಗದಾತರು ತಮ್ಮ ಕ್ರಮವನ್ನು ಕಾರ್ಮಿಕ ನ್ಯಾಯಾಲಯದಲ್ಲಿ ಸಮರ್ಥಿಸಿಕೊಳ್ಳಲು ಸಾಧ್ಯವಾದರೆ ಅಂಥ ಪ್ರಕರಣಗಳಲ್ಲಿ ನ್ಯಾಯಾಲಯಗಳು ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಕಾರ್ಮಿಕನನ್ನು ಕೆಲಸದಿಂದ ವಜಾ ಅಥವಾ ಕರ್ತವ್ಯದಿಂದ ಬಿಡುಗಡೆ ಮಾಡುವ ಮೊದಲು ವಿಚಾರಣೆ ನಡೆಸಲು ಸಾಧ್ಯವಾಗದಿದ್ದರೂ ಉದ್ಯೋಗದಾತರು ತಮ್ಮ ನಿರ್ಧಾರಕ್ಕೆ ಪೂರಕವಾದ ಪುರಾವೆಗಳನ್ನು ಕಾರ್ಮಿಕ ನ್ಯಾಯಾಲಯಗಳಿಗೆ ಸಲ್ಲಿಸಲು ಅವಕಾಶವಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಹರಿದ್ವಾರದ ಜೈ ಭಾರತ್ ಜೂನಿಯರ್ ಹೈಸ್ಕೂಲ್​ನ ಸಹಶಿಕ್ಷಕಿಯೊಬ್ಬರು ಸತತವಾಗಿ ಕರ್ತವ್ಯಕ್ಕೆ ಗೈರುಹಾಜರಾದ ಕಾರಣ ಆಡಳಿತ ಮಂಡಳಿಯು ಅವರನ್ನು ಕೆಲಸದಿಂದ ವಜಾ ಮಾಡಿತ್ತು. ಬಳಿಕ, ಕೆಲಸದಿಂದ ವಜಾಗೊಂಡ ಶಿಕ್ಷಕಿಯ ವಿರುದ್ಧದ ಆರೋಪಕ್ಕೆ, ಶಾಲಾ ಆಡಳಿತ ಮಂಡಳಿಯ ಬಳಿ ಸೂಕ್ತ ಸಾಕ್ಷ್ಯಾಧಾರಗಳು ಇದ್ದುದರಿಂದ ಕಾರ್ಮಿಕ ನ್ಯಾಯಾಲಯವು ಸಹಶಿಕ್ಷಕಿಗೆ ಯಾವುದೇ ಪರಿಹಾರ ನೀಡುವಂತೆ ಶಾಲೆಗೆ ಆದೇಶಿಸಿರಲಿಲ್ಲ.

ಬಳಿಕ, ಕಾರ್ಮಿಕ ನ್ಯಾಯಾಲಯದ ತೀರ್ಪಿಗೆ ಪ್ರತಿಯಾಗಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಿಚಾರಣೆಗೆ ಅಂಗೀಕರಿಸಿತ್ತು. ಕೆಲಸಗಾರನ ಅಮಾನತಿನಲ್ಲಿ ಯಾವುದೇ ತನಿಖೆ, ವಿಚಾರಣೆಗಳು ನಡೆದಿಲ್ಲ ಎಂದು ಹೈಕೋರ್ಟ್​ ಹೇಳಿತ್ತು. ಹೈಕೋರ್ಟ್​ ತೀರ್ಪನ್ನು ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಲಾಯಿತು.

ಈ ಅಹವಾಲಿನ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್, ನವೀನ್ ಸಿನ್ಹಾ ಹಾಗೂ ಇಂದು ಮಲ್ಹೋತ್ರಾ ನೇತೃತ್ವದ ನ್ಯಾಯಪೀಠವು ಕಾರ್ಮಿಕ ನ್ಯಾಯಾಲಯವು ಇಬ್ಬರು ಕಕ್ಷಿದಾರರಿಗೆ ತಮ್ಮ ಸಾಕ್ಷಿ ಹಾಗೂ ದಾಖಲೆಗಳನ್ನು ಸಲ್ಲಿಸಲು ಮತ್ತು ವಿವರಿಸಲು ಪೂರ್ಣ ಅವಕಾಶವನ್ನು ನೀಡಿತ್ತು ಎಂದು ಅಭಿಪ್ರಾಯಪಟ್ಟಿತು. ಕಾರ್ಮಿರನ್ನು ವಜಾ ಮಾಡಲು ವಿಚಾರಣೆ ಪ್ರಕ್ರಿಯೆ ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿ, ಅದಕ್ಕೆ ಪೂರಕವಾಗಿ ಹಿಂದಿನ ಕೆಲ ತೀರ್ಪುಗಳನ್ನೂ ಪ್ರಸ್ತಾಪಿಸಿತು.

ಧಾರವಾಡ ಅಪಘಾತದ ಬಗ್ಗೆ ವರದಿ ನೀಡಿ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸಮಿತಿ ಸೂಚನೆ

Published On - 9:06 pm, Sun, 24 January 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!