AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಜ್ ಯಾತ್ರೆ, ಉಮ್ರಾ ಸೇವೆಗಳ ಮೇಲಿನ ಜಿಎಸ್​​ಟಿಯಿಂದ ವಿನಾಯಿತಿ ಕೋರಿದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಎಂ ಖಾನ್ವಿಲ್ಕರ್ ನೇತೃತ್ವದ ಪೀಠವು ಈ ಸೇವೆಗಳು ಈಗಾಗಲೇ ಧಾರ್ಮಿಕ ಚಟುವಟಿಕೆಗಳಿಗೆ ನೀಡಲಾದ ವಿನಾಯಿತಿಗೆ ಅರ್ಹವಾಗಿವೆ ಎಂದು ಹೇಳಿದೆ.

ಹಜ್ ಯಾತ್ರೆ, ಉಮ್ರಾ ಸೇವೆಗಳ ಮೇಲಿನ ಜಿಎಸ್​​ಟಿಯಿಂದ ವಿನಾಯಿತಿ ಕೋರಿದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
ಹಜ್
TV9 Web
| Edited By: |

Updated on: Jul 26, 2022 | 8:10 PM

Share

ಸೌದಿ ಅರೇಬಿಯಾಗೆ (Saudi Arabia) ಪ್ರಯಾಣಿಸುವ ಯಾತ್ರಾರ್ಥಿಗಳಿಗೆ ಹಜ್ (Hajj) ಮತ್ತು ಉಮ್ರಾ ಸೇವೆಗಳಿಗೆ ಜಿಎಸ್‌ಟಿಯಿಂದ ವಿನಾಯಿತಿ ಕೋರಿ ವಿವಿಧ ಖಾಸಗಿ ಟೂರ್ ಆಪರೇಟರ್‌ಗಳು ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂಕೋರ್ಟ್ (Supreme Court) ಮಂಗಳವಾರ ವಜಾಗೊಳಿಸಿದೆ. ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಎಂ ಖಾನ್ವಿಲ್ಕರ್ ನೇತೃತ್ವದ ಪೀಠವು ಈ ಸೇವೆಗಳು ಈಗಾಗಲೇ ಧಾರ್ಮಿಕ ಚಟುವಟಿಕೆಗಳಿಗೆ ನೀಡಲಾದ ವಿನಾಯಿತಿಗೆ ಅರ್ಹವಾಗಿವೆ ಎಂದು ಹೇಳಿದೆ. ಸಂವಿಧಾನದ 245 ನೇ ವಿಧಿಯ ಪ್ರಕಾರ ಹೆಚ್ಚುವರಿ ಪ್ರಾದೇಶಿಕ ಚಟುವಟಿಕೆಗಳಿಗೆ ತೆರಿಗೆ ಅನ್ವಯಿಸುತ್ತದೆಯೇ ಎಂಬ ಪ್ರಶ್ನೆಯನ್ನು ನಿರ್ಧರಿಸಲಾಗಿಲ್ಲ. ವಿನಾಯಿತಿ ಮತ್ತು ತಾರತಮ್ಯ ಎರಡರ ಆಧಾರದ ಮೇಲೆ ನಾವು ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದ್ದೇವೆ. ಹೆಚ್ಚುವರಿ ಪ್ರಾದೇಶಿಕ ಕಾರ್ಯಾಚರಣೆಯ ಇತರ ಸಮಸ್ಯೆಯನ್ನು ಬಾಕಿ ಇರಿಸಲಾಗಿದೆ. ಅದನ್ನು ನಿರ್ಧರಿಸಲಾಗಿಲ್ಲ ಎಂದು ಪೀಠ ಹೇಳಿದೆ.

ಸಂವಿಧಾನದ ಪರಿಚ್ಛೇದ 245 ರ ಪ್ರಕಾರ ಹೆಚ್ಚುವರಿ ಪ್ರಾದೇಶಿಕ ಚಟುವಟಿಕೆಗಳ ಮೇಲೆ ಯಾವುದೇ ತೆರಿಗೆ ಕಾನೂನು ಅನ್ವಯವಾಗುವುದಿಲ್ಲ ಎಂಬ ಕಾರಣಕ್ಕಾಗಿ ನೋಂದಾಯಿತ ಖಾಸಗಿ ಟೂರ್ ಆಪರೇಟರ್‌ಗಳು ನೀಡುವ ಸೇವೆಗಳನ್ನು ಪಡೆದುಕೊಳ್ಳುವ ಹಜ್ ಯಾತ್ರಿಕರ ಮೇಲೆ ಜಿಎಸ್‌ಟಿ ವಿಧಿಸುವುದನ್ನು ಟೂರ್ ಆಪರೇಟರ್‌ಗಳು ಪ್ರಶ್ನಿಸಿದ್ದರು. ಭಾರತದ ಹೊರಗಿರುವ ಸೇವೆಗಳನ್ನು ಜಿಎಸ್‌ಟಿಗೆ ಒಳಪಡಿಸಲಾಗುವುದಿಲ್ಲ ಎಂಬುದು ಅವರ ವಾದವಾಗಿದೆ.

ಭಾರತದ ಹಜ್ ಸಮಿತಿಯ ಮೂಲಕ ತೀರ್ಥಯಾತ್ರೆ ಕೈಗೊಳ್ಳುವ ಕೆಲವು ಯಾತ್ರಿಕರಿಗೆ ವಿನಾಯಿತಿ ನೀಡುವುದು ತಾರತಮ್ಯವಾಗಿದೆ ಎಂದು ಅವರು ವಾದಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್